ಸಿಸಿಬಿ ಪೊಲೀಸರು 
ರಾಜ್ಯ

ಆ್ಯಪಲ್ ಹೆಸರಲ್ಲಿ ನಕಲಿ ಮೊಬೈಲ್ ಮಾರಾಟ: 8 ಲಕ್ಷ ರೂ ಮೌಲ್ಯದ ವಸ್ತು ಜಪ್ತಿ

ಚಿಕ್ಕಪೇಟೆಯ ಖಲೀಲ್ ಕಟ್ಟಡದ ಚೋದ್ರಾ ಟೆಲಿಕಾಂ ಎಂಬ ಅಂಗಡಿಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಂಗಳೂರು: ಪ್ರತಿಷ್ಠಿತ ಆ್ಯಪಲ್ ಕಂಪನಿಯ ಬ್ರ್ಯಾಂಡ್ ಹೆಸರಿನಲ್ಲಿ ಕಳಪೆ ಗುಣಮಟ್ಟದ ಮೊಬೈಲ್, ಏರ್ ಪಾಡ್ ಸೇರಿದಂತೆ ಕೆಲ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಸುಮಾರು ರೂ,8 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಚಿಕ್ಕಪೇಟೆಯ ಖಲೀಲ್ ಕಟ್ಟಡದ ಚೋದ್ರಾ ಟೆಲಿಕಾಂ ಎಂಬ ಅಂಗಡಿಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ಅಂಗಡಿಯಲ್ಲಿ ಆ್ಯಪಲ್ ಕಂಪನಿ ಬ್ರ್ಯಾಂಡ್ ಹೆಸರಿನಲ್ಲಿ ಕಳಪೆ ಗುಣಮಟ್ಟದ ಮೊಬೈಲ್ ಫೋನ್, ಏರ್ ಪಾಡ್, ಯುಎಸ್'ಬಿ ಕೇಬಲ್, ಲೈಟ್ನಿಂಗ್ ಕೇಬಲ್ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಿಸಿಬಿ ದಾಳಿ ನಡೆಸಿ, ಪರಿಶೀಲನೆ ನಡೆಸಿದೆ.

ದಾಳಿ ವೇಳೆ ಆ್ಯಪಲ್ ಕಂಪನಿ ಹೆಸರಿನಲ್ಲಿ ನಕಲಿ ವಸ್ತುಗಳನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಈ ವೇಳೆ ಸುಮಾರು ರೂ.8 ಲಕ್ಷ ಮೌಲ್ಯದ ಕಳಪೆ ಗುಣಮಟ್ಟದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳಪೆ ತಾಮ್ರದ ತಂತಿ ಮಾರಾಟ: ರೂ.6 ಲಕ್ಷ ಮೌಲ್ಯದ ವೈಯರ್ ಜಪ್ತಿ

ಈ ನಡುವೆ ಪ್ರತಿಷ್ಠಿತ ಕಂಪನಿಗಳ ಬ್ರ್ಯಾಂಡ್ ಹೆಸರಿನಲ್ಲಿ ಕಳಪೆ ಗುಣಮಟ್ಟದ ವಿದ್ಯುತ್ ತಾಮ್ರದ ತಂತಿ ಮಾರಾಟ ಮಾಡುತ್ತಿದ್ದ ಗರುಚಾರ್ ಪಾಳ್ಯದ ಅಂಗಡಿ ಮೇಲೆ ಸಿಸಿಬಿ ದಾಳಿ ನಡೆಸಿ, ರೂ.6.20 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಈ ಅಂಗಡಿಯಲ್ಲಿ ವಿ ಗಾರ್ಡ್, ಆರ್ ಆರ್, ಪಾಲಿ ಕ್ಯಾಬ್, ಆ್ಯಂಕರ್,ಗ್ರೇಟ್ ವೈಟ್, ಹಾವೆಲ್ಸ್ ಕಂಪನಿಗಳ ಬ್ರ್ಯಾಂಡ್ ಹೆಸರಿನಲ್ಲಿ ಕಳಪೆ ಗುಣಮಟ್ಟದ ವಿದ್ಯುತ್ ತಾಮ್ರದ ವೈಯರ್ ಮಾರಾಟ ಮಾಡುತ್ತಿರುವ ಬಗ್ಗೆ ಖಚಿಕ ಮಾಹಿತಿ ದೊರೆತೆ ಹಿನ್ನೆಲೆಯಲ್ಲಿ ದಾಳಿ ಮಾಡಿ ರೂ,6.20 ಲಕ್ಷ ಮೌಲ್ಯದ ಕಳಪೆ ಗುಣಮಟ್ಟದ ವಿದ್ಯುತ್ ತಾಮ್ರದ ತಂತಿ ಜಪ್ತಿ ಮಾಡಿದ್ದಾರೆ. ಈ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT