ಆಲೂರು ನಾಗಪ್ಪ 
ರಾಜ್ಯ

'ಸಾವಿರ ಹಾಡುಗಳ ಸರದಾರ’ ಖ್ಯಾತ ಜಾನಪದ ಹಾಡುಗಾರ, ಸಾಹಿತಿ ಆಲೂರು ನಾಗಪ್ಪ ನಿಧನ

ತಾವು ರಚಿಸಿದ, ಹಾಡಿದ ಯಾವ ಹಾಡುಗಳ ಹಕ್ಕನ್ನೂ ಬೇರೆಯವರಿಗೆ ಕೊಟ್ಟಿಲ್ಲ. ದೊಡ್ಡ ದೊಡ್ಡ ಕಂಪನಿಗಳು ಬಂದು ಮನವಿ ಮಾಡಿದರೂ ನನ್ನ ಶಾರದೆಯನ್ನು ಯಾರಿಗೂ ಕೊಡುವುದಿಲ್ಲ ಎಂದು ಹೇಳುತ್ತಿದ್ದರಂತೆ. ಈ ಬಗ್ಗೆ ಅವರ ಮಗಳು ದಿವ್ಯ ಪತ್ರಿಕೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಬೆಂಗಳೂರು: ಪ್ರಸಿದ್ಧ ಜಾನಪದ ಹಾಡುಗಾರ, ಸಾಹಿತಿ, ಕನ್ನಡ ಪರ ಹೋರಾಟಗಾರ ಆಲೂರು ನಾಗಪ್ಪ(74) ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಾಗಪ್ಪ ಅನಾರೋಗ್ಯದಿಂದಾಗಿ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಹುಟ್ಟೂರು ಬಿಡದಿಯಲ್ಲಿ ಆಲೂರು ನಾಗಪ್ಪ ಅಂತ್ಯಕ್ರಿಯೆ ನಡೆಯಲಿದೆ. ನಿಂಗವ್ವ ಬೆಂಗಳೂರಿಗೆ ಬಂದು ನೋಡವ್ವ ಹಾಡಿನ ಖ್ಯಾತಿಯ ಆಲೂರು ನಾಗಪ್ಪ ಅವರು ಸಾವಿರಾರು ಲಾವಣಿ, ತತ್ವಪದಗಳ ಹರಿಕಾರ. ಇವರು ರಚಿಸಿ, ಹಾಡಿರುವ ಹಾಡುಗಳು ಎವರ್‌ಗ್ರೀನ್‌. ಇವರಿಗೆ ಜಾನಪದ ಸಂಗೀತದ ಮೇಲಿದ್ದ ಪ್ರೀತಿ ಎಂತಹದ್ದು ಎಂದರೆ ಇವರು ಹೆಡ್‌ ಕಾನ್‌ಸ್ಟೇಬಲ್‌ ಹುದ್ದೆಗೆ ರಿಸೈನ್‌ ಮಾಡಿ ತಮ್ಮ ಆಸಕ್ತಿಗೆ ಒತ್ತು ನೀಡಿದ್ದರು. ಆಲೂರು ನಾಗಪ್ಪ, ಗಾಯಕರಾಗಿ ಮಾತ್ರವಲ್ಲ, ಕನ್ನಡಪರ ಹೋರಾಟಗಾರರಾಗಿ ಕೂಡಾ ಗುರುತಿಸಿಕೊಂಡಿದ್ದಾರೆ. ಇನ್ನು ಇವರ ಮಗಳು ದಿವ್ಯ ಅಲೂರು ಕೂಡ ನಿರೂಪಕಿ, ಗಾಯಕಿಯಾಗಿದ್ದಾರೆ.

ಆಲೂರು ನಾಗಪ್ಪ ಅವರು ಯುವಜನತೆ, ಮಹಿಳೆಯರು, ನಾಡುನುಡಿಗೆ ಸಂಬಂಧಿಸಿದ ಎಲ್ಲಾ ರೀತಿಯ ಹಾಡುಗಳನ್ನೂ ಬರೆದಿದ್ದಾರೆ. ಭಕ್ತಿ ಗೀತೆಗಳನ್ನೂ ರಚಿಸಿದ್ದಾರೆ. ವಿಶೇಷವೆಂದರೆ ಇವರು ತಾವು ರಚಿಸಿದ, ಹಾಡಿದ ಯಾವ ಹಾಡುಗಳ ಹಕ್ಕನ್ನೂ ಬೇರೆಯವರಿಗೆ ಕೊಟ್ಟಿಲ್ಲ. ದೊಡ್ಡ ದೊಡ್ಡ ಕಂಪನಿಗಳು ಬಂದು ಮನವಿ ಮಾಡಿದರೂ ಯಾರಿಗೂ ಕೊಡುವುದಿಲ್ಲ ಎಂದು ಹೇಳುತ್ತಿದ್ದರಂತೆ. ಈ ಬಗ್ಗೆ ಅವರ ಮಗಳು ದಿವ್ಯ ಪತ್ರಿಕೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಕನ್ನಿಕೇರಿ ಹುಡುಗಿಯೊಬ್ಬಳು, ನೀನು ಮದುಕಿಯಂಗೆ ಮುಸುಕಾಕೊಂಡು, ಬೆಂಗಳೂರ್‌ ಹುಡ್ಗ ಬಂದವನಂತ ಬಗ್ಗಿ ಬಗ್ಗಿ ನೋಡ್ತೀಯಲ್ಲೇ, ತವರಿಂದ ಕಳಿಸಿ ನನ್ನ ಮರಿಬೇಡ ಅಣ್ಣಯ್ಯ, ಅಳಬ್ಯಾಡ ತಂಗಿ ಅಳಬ್ಯಾಡ, ಹೆತ್ತ ತಾಯಿ ಋಣವ ತೀರಿಸೋ, ಎಚ್ಚರಾಗು ಕನ್ನಡಿಗ ಇವು ಆಲೂರು ನಾಗಪ್ಪ ಅವರ ಪ್ರಸಿದ್ಧ ಹಾಡುಗಳಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz closure: ಹಾರ್ಮುಜ್ ಜಲಸಂಧಿ ಬಂದ್, ಏಷ್ಯಾದ ಬಂದರುಗಳಲ್ಲಿ ಕ್ಯೂನಲ್ಲಿ ನಿಂತ ಹಡಗುಗಳು!

ಪದೇ ಪದೇ ಇರಾನ್ ದಾಳಿ: ಅಬುದಾಬಿಯಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದು, ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಸಾವು!

ರಾಜ್ಯ ಸರ್ಕಾರ ನಿಯಮದ ಮಿತಿಯೊಳಗೆ ಸಾಲ ಮಾಡಿದೆ: ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಕಣದಲ್ಲಿ 34 ಅಭ್ಯರ್ಥಿಗಳು, 80 ಲಕ್ಷ ನಗದು, 1.74 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಹೆಚ್ಚುತ್ತಿರುವ ಸಬ್ಸಿಡಿ: ಗ್ರಾಮ ಪಂಚಾಯಿತಿ ಅನುದಾನಕ್ಕೆ ರಾಜ್ಯ ಸರ್ಕಾರ ಕೊಕ್- CAG ವರದಿ

SCROLL FOR NEXT