ಸಚಿವ ರಾಜಣ್ಣ 
ರಾಜ್ಯ

ಅಪೆಕ್ಸ್ ಬ್ಯಾಂಕ್ ನಲ್ಲಿ ನಿಯಮ ಗಾಳಿಗೆ ತೂರಲಾಗಿದೆ ಎಂದ 'ಕೈ' ಶಾಸಕ: ಲೋಪ ಒಪ್ಪಿಕೊಂಡ ಸರ್ಕಾರ

ಸೋಮವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಆನಂದ್ ಕೆ.ಎಸ್ ಅವರು ಅಪೆಕ್ಸ್ ಬ್ಯಾಂಕಿನಿಂದ ಸಾಲ ಪಡೆದಿರುವ ಹಾಲಿ, ಮಾಜಿ ಸಚಿವರು, ಶಾಸಕರು, ಸಂಸದರ ವಿವರವಾದ ಮಾಹಿತಿ ನೀಡುವಂತೆ ಗಮನ ಸೆಳೆದ ಸೂಚನೆಗೆ ಅವರು ಉತ್ತರಿಸಿದರು.

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನಿಂದ ಶಾಸಕರು ಮತ್ತು ಇತರ ಜನಪ್ರತಿನಿಧಿಗಳಿಗೆ ಸಾಲ ಮಂಜೂರು ಮಾಡುವಲ್ಲಿ ಆರ್‌ಬಿಐ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ಕಾಂಗ್ರೆಸ್ ಶಾಸಕರೊಬ್ಬರು ಹೇಳಿದ್ದು, ಲೋಪವಾಗಿರುವುದನ್ನು ಸರ್ಕಾರ ಸೋಮವಾರ ಒಪ್ಪಿಕೊಂಡಿದೆ.

ಸೋಮವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಆನಂದ್ ಕೆ.ಎಸ್ ಅವರು ಅಪೆಕ್ಸ್ ಬ್ಯಾಂಕಿನಿಂದ ಸಾಲ ಪಡೆದಿರುವ ಹಾಲಿ, ಮಾಜಿ ಸಚಿವರು, ಶಾಸಕರು, ಸಂಸದರ ವಿವರವಾದ ಮಾಹಿತಿ ನೀಡುವಂತೆ ಗಮನ ಸೆಳೆದ ಸೂಚನೆಗೆ ಅವರು ಉತ್ತರಿಸಿದರು.

ಆರ್‌ಬಿಐ ಸುತ್ತೋಲೆಯಂತೆ ಬ್ಯಾಂಕ್‍ಗಳಲ್ಲಿ ಸಾಲ ಪಡೆದಿರುವವರ ಮಾಹಿತಿಯನ್ನು ಗ್ರಾಹಕರ ಒಪ್ಪಿಗೆ ಇಲ್ಲದೆ ಬಹಿರಂಗ ಮಾಡುವಂತಿಲ್ಲ ಎಂದು ರಾಜಣ್ಣ ನೀಡಿದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಆನಂದ್, ಅಪೆಕ್ಸ್ ಬ್ಯಾಂಕ್‍ಗೆ ನಬಾರ್ಡ್‍ನಿಂದ ಎರಡು ಸಾವಿರ ಕೋಟಿ ರೂ.ನೆರವು ಬಂದಿದೆ. ಬಹುತೇಕ ಶಾಸಕರು ಸಕ್ಕರೆ ಕಾರ್ಖಾನೆ ಮಾಡಲು ಅಪೆಕ್ಸ್ ಬ್ಯಾಂಕ್‍ನಿಂದ ಸಾಲ ಪಡೆದಿದ್ದಾರೆ ಎಂದರು.

ಕೆಲವು ಸಮರ್ಪಕವಾದ ದಾಖಲೆಗಳನ್ನು ನೀಡದೆ ಸಾಲ ಪಡೆದಿದ್ದಾರೆ. ಇದರಲ್ಲಿ ಭ್ರಷ್ಟಾಚಾರ ಆಗಿದೆ. ಹೈಕೋರ್ಟ್ ಸಹ ಈ ಬಗ್ಗೆ ಪ್ರಶ್ನೆ ಎತ್ತಿದೆ. ಡಿಸಿಸಿ ಬ್ಯಾಂಕ್‍ಗಳಲ್ಲಿ ನಲ್ಲಿ ರೈತರಿಗೆ, ಸಾಮಾನ್ಯ ಜನರಿಗೆ ಸಾಲ ಸಿಗುತ್ತಿಲ್ಲ. ಆದರೆ, ಉದ್ಯಮಿಗಳಿಗೆ ಮಾತ್ರ ಸಾಲ ನೀಡುತ್ತಿದ್ದಾರೆ. ಇಲ್ಲಿ ಸಾವಿರಾರು ಕೋಟಿ ರೂ. ಹಗರಣಗಳು ಆಗಿವೆ ಎಂದು ಆನಂದ್ ದೂರಿದರು.

ಸರ್ಕಾರ ಕಾರ್ಖಾನೆಗಳಿಗೆ ನೀಡಲಾಗಿರುವ ಸಾಲದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಲೆಕ್ಕಪರಿಶೋಧನಾ ವರದಿಯಿಂದ ತಿಳಿದುಬಂದಿದೆ ಎಂದು ನಬಾರ್ಡ್ ಮತ್ತು ಆರ್‌ಬಿಐ ಸರ್ಕಾರಕ್ಕೆ ಪತ್ರ ಬರೆದಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ರಾಜಣ್ಣ, ಅಪೇಕ್ಸ್ ಬ್ಯಾಂಕ್ ನಲ್ಲಿ ಯಾವುದೇ ಹಗರಣ ನಡೆದಿದ್ದರೂ ತನಿಖೆ ಮಾಡಿಸುತ್ತೇವೆ. ಒಂದು ವೇಳೆ ಅಂತಹ ಯಾವುದಾದರೂ ನಿರ್ದಿಷ್ಟ ಪ್ರಕರಣ ಗಮನಕ್ಕೆ ತಂದರೆ ತನಿಖೆ ಮಾಡಿಸುತ್ತೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮ ಮಂದಿರ ದೇಣಿಗೆ ದುರ್ಬಳಕೆ ಆರೋಪ: 'ಕೋಟ್ಯಾಂತರ ಭಕ್ತರ ನಂಬಿಕೆಗೆ ಮಾಡಿದ ಅಪಮಾನ': ಪ್ರಧಾನಿ ಮೋದಿ ಮೌನದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಹಾವೇರಿ: ಕಾರ ಹುಣ್ಣಿಮೆ, ಹೋರಿ ಓಡಿಸುವಾಗ ಘರ್ಷಣೆ, 8 ಮಂದಿಗೆ ಗಾಯ! ಸರ್ಕಾರದ ಓಲೈಕೆಯೇ ನೇರ ಹೊಣೆ ಎಂದ ವಿಪಕ್ಷ ನಾಯಕ

ಪಶ್ಚಿಮ ಬಂಗಾಳದಲ್ಲಿ ಭಾರೀ ದುರಂತ: ಹಲ್ದಿಯಾ ಪೆಟ್ರೋಕೆಮಿಕಲ್ಸ್‌ನಲ್ಲಿ ಭೀಕರ ಅಗ್ನಿ ಅವಘಡ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ..!

PM-ಕಿಸಾನ್ ಯೋಜನೆಯಡಿ ಮಹಾರಾಷ್ಟ್ರ ರೈತನಿಗೆ ಕೇವಲ '1 ಪೈಸೆ' ಜಮೆ; ಅನ್ನದಾತನಿಗೆ 'ಅಪಹಾಸ್ಯ'

"ಭಾರತದ ಜಲ ಬಾಂಬ್‌ಗೆ ಪಾಕ್ ನಡುಕ": ನಮ್ಮ ಪಾಲಿನ ನೀರು ಮುಟ್ಟಿದರೆ ಆ ಕೈಗಳನ್ನೇ ಕತ್ತರಿಸುತ್ತೇವೆ- ಶತ್ರು ರಾಷ್ಟ್ರದಿಂದ ಮತ್ತೆ ಗೊಡ್ಡು ಬೆದರಿಕೆ..!