ಡಿ.ಕೆ.ಶಿವಕುಮಾರ್ 
ರಾಜ್ಯ

ಶೀಘ್ರದಲ್ಲೇ ಕೆಂಪಾಂಬುದಿ ಕೆರೆ ಒತ್ತುವರಿ ತೆರವು: ಡಿ.ಕೆ ಶಿವಕುಮಾರ್

ಕೆರೆಯ ಕೆಳಭಾಗದಲ್ಲಿ 10 ಲಕ್ಷ ಲೀ. ಸಾಮರ್ಥ್ಯದ ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣ ಮಾಡುತ್ತಿದ್ದು, 2025 ರ ವೇಳೆಗೆ ಕಾಮಗಾರಿ ಮುಗಿಯಲಿದೆ. ಸಂಸ್ಕರಿಸಿದ ನೀರನ್ನು ಕೆರೆಗೆ ಹರಿಸಿ ಪುನರುಜ್ಜೀವನಗೊಳಿಸುವ ಉದ್ದೇಶವಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು: ಹೈಕೋರ್ಟ್ ನಿರ್ದೇಶನದಂತೆ ಕೆರೆಗಳ ಒತ್ತುವರಿ ತೆರವಿಗೆ 16 ವಾರಗಳ ಕ್ರಿಯಾಯೋಜನೆ ತಯಾರಿಸಲಾಗಿದೆ. ಕೆಂಪಾಂಬುದಿ ಕೆರೆಯ ಸರ್ವೆ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ನ್ಯಾಯಾಲಯದ ಆದೇಶದಂತೆ ಒತ್ತುವರಿ ತೆರವು ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಶಾಸಕ ರವಿಸುಬ್ರಮಣ್ಯ ಅವರ ಗಮನ ಸೆಳೆವ ಸೂಚನೆಗೆ ಉತ್ತರಿಸಿದ ಡಿಸಿಎಂ ಅವರು, ಕೆಂಪಾಂಬುದಿ ಕೆರೆಗೆ ರಾಜಕಾಲುವೆ ಮೂಲಕ ಹರಿದು ಬರುವ ತ್ಯಾಜ್ಯ ನೀರನ್ನು ತಡೆಗಟ್ಟಲು ತಿರುವುಗಾಲುವೆ ನಿರ್ಮಿಸಲಾಗಿದೆ. ಆದರೆ ಹೆಚ್ಚು ಮಳೆ ಬಂದಾಗ ಮ್ಯಾನ್ ಹೋಲ್‌ಗಳಿಂದ ಉಕ್ಕಿ ಹರಿಯುವ ನೀರು ರಾಜಕಾಲುವೆ ಮೂಲಕ ಕೆರೆ ಸೇರುತ್ತಿದೆ. ಇದನ್ನು ಬಿಡಬ್ಲ್ಯೂಎಸ್‌ಎಸ್‌ಬಿ ಗಮನಕ್ಕೆ ತಂದು ತ್ಯಾಜ್ಯ ನೀರನ್ನು ಸಾಗಿಸುವ ಕೊಳವೆಗಳ ಸಾಮರ್ಥ್ಯ ಹೆಚ್ಚಿಸುವ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.

ಕೆರೆಯ ಕೆಳಭಾಗದಲ್ಲಿ 10 ಲಕ್ಷ ಲೀ. ಸಾಮರ್ಥ್ಯದ ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣ ಮಾಡುತ್ತಿದ್ದು, 2025 ರ ವೇಳೆಗೆ ಕಾಮಗಾರಿ ಮುಗಿಯಲಿದೆ. ಸಂಸ್ಕರಿಸಿದ ನೀರನ್ನು ಕೆರೆಗೆ ಹರಿಸಿ ಪುನರುಜ್ಜೀವನಗೊಳಿಸುವ ಉದ್ದೇಶವಿದೆ ಎಂದು ಅವರು ಹೇಳಿದ್ದಾರೆ.

ರಸ್ತೆ ವಿಸ್ತರಣೆಗೆ ಶೀಘ್ರ ಭೂಸ್ವಾಧೀನ

ಗೊಟ್ಟಿಗೆರೆ ಗ್ರಾಮದ ಸರ್ವೆ ನಂ 98/3 ಮತ್ತು 98/7 ರಲ್ಲಿ ಭಾಗಶಃ ಹಾದು ಹೋಗಲಿದ್ದು ಶೀಘ್ರದಲ್ಲೇ ಭೂಸ್ವಾಧೀನ ಪ್ರಕ್ರಿಯೆಯನ್ನು ಅಂತಿಮಗೊಳಿಸಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಬನ್ನೇರುಘಟ್ಟ ಮತ್ತು ಕನಕಪುರ ಮುಖ್ಯ ರಸ್ತೆಯ ಮಧ್ಯೆ ಗೊಟ್ಟಿಗೆರೆ ಬಳಿ 200 ಮೀ ಉದ್ದದ ರಸ್ತೆಯು ಕೇವಲ 20 ಅಡಿಯಿದ್ದು ಸಾಕಷ್ಟು ಸಂಚಾರ ದಟ್ಟಣೆ ಉಂಟಾಗುತ್ತಿದೆ ಎಂಬ ಕೃಷ್ಣಪ್ಪ ಅವರ ಗಮನ ಸೆಳೆವ ಸೂಚನೆಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿಯ ಗೊಟ್ಟಿಗೆರೆ ಗ್ರಾಮದ ಸರ್ವೆ ನಂ 98/3 ಅಲ್ಲಿನ 0.09 ಗುಂಟೆ ಮತ್ತು 98/7 ರಲ್ಲಿನ 0.07 ಗುಂಟೆ ಜಮೀನನ್ನು ರಸ್ತೆ ವಿಸ್ತರಣೆಗೆ ಸ್ವಾಧೀನ ಮಾಡಿಕೊಳ್ಳಲಾಗುವುದು. 98/7 ರಲ್ಲಿನ 0- 24 ಗುಂಟೆ ಜಮೀನು ಅಂಜನಾಪುರ ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನಗೊಂಡಿದೆ” ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT