ಅಂಕೋಲಾ-ಶಿರೂರು ಭೂ ಕುಸಿತ 
ರಾಜ್ಯ

ಕರಾವಳಿ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್‌ ನೀಡಿ: ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜಾ ಆಗ್ರಹ

ಮಳೆ ಅವಾಂತರದಿಂದ ಹಲವೆಡೆ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಅತ್ಯಂತ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ, ನೆರೆಹಾವಳಿಗೆ ತುತ್ತಾದ ಕೊಡಗಿಗೆ, ಉತ್ತರ ಕರ್ನಾಟಕಕ್ಕೆ ಹಲವು ಸಂದರ್ಭಗಳಲ್ಲಿ ಬೇರೆ ಬೇರೆ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಲಾಗಿದೆ. ಅದೇ ರೀತಿ ಈ ಬಾರಿಯೂ ಕರಾವಳಿಗೂ ವಿಶೇಷ ಪ್ಯಾಕೇಜ್‌ ಘೋಷಿಸಬೇಕು.

ಬೆಂಗಳೂರು: ಈ ಬಾರಿ ಸುರಿದ ಭಾರಿ ಮಳೆಗೆ ಘಟ್ಟಪ್ರದೇಶ ವಿಶೇಷವಾಗಿ ಕರಾವಳಿ ಭಾಗಗಳ ಹಲವೆಡೆ ಭಾರೀ ಹಾನಿ ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಿಸಬೇಕೆಂದು ಶಾಸಕ ಹರೀಶ್ ಪೂಂಜಾ ಸೇರಿ ಬಿಜೆಪಿ ಸದಸ್ಯರು ಸೋಮವಾರ ಆಗ್ರಹಿಸಿದರು.

ವಿಧಾನಸಭೆಯ ಪ್ರಶ್ನೋತ್ತರ ವೇಳೆ ಈ ಬಗ್ಗೆ ಮಾತನಾಡಿದ ಹರೀಶ್‌ ಪೂಂಜಾ ಅವರು, ಮಳೆ ಅವಾಂತರದಿಂದ ಹಲವೆಡೆ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಅತ್ಯಂತ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ, ನೆರೆಹಾವಳಿಗೆ ತುತ್ತಾದ ಕೊಡಗಿಗೆ, ಉತ್ತರ ಕರ್ನಾಟಕಕ್ಕೆ ಹಲವು ಸಂದರ್ಭಗಳಲ್ಲಿ ಬೇರೆ ಬೇರೆ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಲಾಗಿದೆ. ಅದೇ ರೀತಿ ಈ ಬಾರಿಯೂ ಕರಾವಳಿಗೂ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಅನಾಹುತ ಸಂಭವಿಸಿದಾಗ ಅಂದಿನ ಬಿಜೆಪಿ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಿಸಿತ್ತು ಎಂದು ತಿಳಿಸಿದರು. ಇನ್ನು ಶಾಸಕ ಹರೀಶ್ ಪೂಂಜಾ ಅವರ ಮಾತಿಗೆ ಸುನಿಲ್‌ ಕುಮಾರ್‌, ವಿಪಕ್ಷ ನಾಯಕ ಆರ್ ಅಶೋಕ್ ದನಿಗೂಡಿಸಿದರು.

ಈ ಪ್ರದೇಶದಲ್ಲಿ ಸರ್ಕಾರ ಶಾಶ್ವತ ದುರಸ್ತಿ ಕಾರ್ಯ ಕೈಗೊಳ್ಳುವ ಮೊದಲು ರಸ್ತೆಗಳನ್ನು ಮೋಟಾರು ಮಾಡುವಂತೆ ಮಾಡುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಮಾಡಿದರು. ಮಳೆಗಾಲದ ನಂತರ ಈ ಬಗ್ಗೆ ಪರಿಶೀಲಿಸುವುದಾಗಿ ಜಾರಕಿಹೊಳಿ ಭರವಸೆ ನೀಡಿದರು.

ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶಾಸಕ ಹರೀಶ್ ಪೂಂಜಾ ಅವರ ಹೇಳಿಕೆಯನ್ನು ಹಂಚಿಕೊಂಡಿರುವ ಬಿಜೆಪಿ, ನಮ್ಮ ಸರ್ಕಾರವಿದ್ದಾಗ ಪ್ರವಾಹ ಸಂಭವಿಸಿದರೆ ಆಯಾ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್ ನೀಡುತ್ತು. ಮಾನ್ಯ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ವಿಪಕ್ಷದ ಶಾಸಕರಿಗೂ ಅನುದಾನ ನೀಡಿದ್ದರು. ಆದರೆ, ಈ ಸರ್ಕಾರದಲ್ಲಿ ವಿಪಕ್ಷವಿರಲಿ, ಆಡಳಿತ ಪಕ್ಷದ ಶಾಸಕರಿಗೂ ಅನುದಾನ ನೀಡುತ್ತಿಲ್ಲ ಎಂದು ಪೋಸ್ಟ್ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT