ಅಂಕೋಲಾ-ಶಿರೂರು ಭೂ ಕುಸಿತ 
ರಾಜ್ಯ

ಕರಾವಳಿ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್‌ ನೀಡಿ: ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜಾ ಆಗ್ರಹ

ಮಳೆ ಅವಾಂತರದಿಂದ ಹಲವೆಡೆ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಅತ್ಯಂತ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ, ನೆರೆಹಾವಳಿಗೆ ತುತ್ತಾದ ಕೊಡಗಿಗೆ, ಉತ್ತರ ಕರ್ನಾಟಕಕ್ಕೆ ಹಲವು ಸಂದರ್ಭಗಳಲ್ಲಿ ಬೇರೆ ಬೇರೆ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಲಾಗಿದೆ. ಅದೇ ರೀತಿ ಈ ಬಾರಿಯೂ ಕರಾವಳಿಗೂ ವಿಶೇಷ ಪ್ಯಾಕೇಜ್‌ ಘೋಷಿಸಬೇಕು.

ಬೆಂಗಳೂರು: ಈ ಬಾರಿ ಸುರಿದ ಭಾರಿ ಮಳೆಗೆ ಘಟ್ಟಪ್ರದೇಶ ವಿಶೇಷವಾಗಿ ಕರಾವಳಿ ಭಾಗಗಳ ಹಲವೆಡೆ ಭಾರೀ ಹಾನಿ ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಿಸಬೇಕೆಂದು ಶಾಸಕ ಹರೀಶ್ ಪೂಂಜಾ ಸೇರಿ ಬಿಜೆಪಿ ಸದಸ್ಯರು ಸೋಮವಾರ ಆಗ್ರಹಿಸಿದರು.

ವಿಧಾನಸಭೆಯ ಪ್ರಶ್ನೋತ್ತರ ವೇಳೆ ಈ ಬಗ್ಗೆ ಮಾತನಾಡಿದ ಹರೀಶ್‌ ಪೂಂಜಾ ಅವರು, ಮಳೆ ಅವಾಂತರದಿಂದ ಹಲವೆಡೆ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಅತ್ಯಂತ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ, ನೆರೆಹಾವಳಿಗೆ ತುತ್ತಾದ ಕೊಡಗಿಗೆ, ಉತ್ತರ ಕರ್ನಾಟಕಕ್ಕೆ ಹಲವು ಸಂದರ್ಭಗಳಲ್ಲಿ ಬೇರೆ ಬೇರೆ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಲಾಗಿದೆ. ಅದೇ ರೀತಿ ಈ ಬಾರಿಯೂ ಕರಾವಳಿಗೂ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಅನಾಹುತ ಸಂಭವಿಸಿದಾಗ ಅಂದಿನ ಬಿಜೆಪಿ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಿಸಿತ್ತು ಎಂದು ತಿಳಿಸಿದರು. ಇನ್ನು ಶಾಸಕ ಹರೀಶ್ ಪೂಂಜಾ ಅವರ ಮಾತಿಗೆ ಸುನಿಲ್‌ ಕುಮಾರ್‌, ವಿಪಕ್ಷ ನಾಯಕ ಆರ್ ಅಶೋಕ್ ದನಿಗೂಡಿಸಿದರು.

ಈ ಪ್ರದೇಶದಲ್ಲಿ ಸರ್ಕಾರ ಶಾಶ್ವತ ದುರಸ್ತಿ ಕಾರ್ಯ ಕೈಗೊಳ್ಳುವ ಮೊದಲು ರಸ್ತೆಗಳನ್ನು ಮೋಟಾರು ಮಾಡುವಂತೆ ಮಾಡುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಮಾಡಿದರು. ಮಳೆಗಾಲದ ನಂತರ ಈ ಬಗ್ಗೆ ಪರಿಶೀಲಿಸುವುದಾಗಿ ಜಾರಕಿಹೊಳಿ ಭರವಸೆ ನೀಡಿದರು.

ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶಾಸಕ ಹರೀಶ್ ಪೂಂಜಾ ಅವರ ಹೇಳಿಕೆಯನ್ನು ಹಂಚಿಕೊಂಡಿರುವ ಬಿಜೆಪಿ, ನಮ್ಮ ಸರ್ಕಾರವಿದ್ದಾಗ ಪ್ರವಾಹ ಸಂಭವಿಸಿದರೆ ಆಯಾ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್ ನೀಡುತ್ತು. ಮಾನ್ಯ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ವಿಪಕ್ಷದ ಶಾಸಕರಿಗೂ ಅನುದಾನ ನೀಡಿದ್ದರು. ಆದರೆ, ಈ ಸರ್ಕಾರದಲ್ಲಿ ವಿಪಕ್ಷವಿರಲಿ, ಆಡಳಿತ ಪಕ್ಷದ ಶಾಸಕರಿಗೂ ಅನುದಾನ ನೀಡುತ್ತಿಲ್ಲ ಎಂದು ಪೋಸ್ಟ್ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್