ಸಚಿವ ಕೃಷ್ಣ ಬೈರೇಗೌಡ 
ರಾಜ್ಯ

ರಾಜ್ಯದಲ್ಲಿ ಸ್ಮಶಾನಕ್ಕೂ ಜಾಗವಿಲ್ಲದಂತಾಗಿದ್ದು, ಖಾಸಗಿ ಭೂಮಿ ಖರೀದಿಸುವ ಪರಿಸ್ಥಿತಿ ಎದುರಾಗಿದೆ: ಸರ್ಕಾರ

ಸರ್ಕಾರಿ ಜಾಗ ಖಾಲಿಯಾಗುತ್ತಿರುವುದರಿಂದಾಗಿ ಸ್ಮಶಾನಕ್ಕೆ ಆಟದ ಮೈದಾನ, ಕೆಪಿಟಿಎಸ್‍ಎಲ್‍ನ ಸ್ಟೇಷನ್‍, ಆಸ್ಪತ್ರೆಗಳಿಗೆ ಸ್ಥಳಗಳಿಲ್ಲ. ಅಂಗನವಾಡಿಗಳಿಗೆ ಜಾಗ ನೀಡುವಂತೆ 12 ಸಾವಿರ ಅರ್ಜಿಗಳಿವೆ.

ಬೆಂಗಳೂರು: ಸರ್ಕಾರಿ ಭೂಮಿಯನ್ನು ಸರ್ಕಾರದ ವಿವಿಧ ಯೋಜನೆಗಳಿಗೆ ವ್ಯಾಪಕವಾಗಿ ಬಳಸಲಾಗುತ್ತಿದ್ದು, ರಾಜ್ಯದಲ್ಲಿ ಇದೀಗ ಸ್ಮಶಾನಕ್ಕೆ ಜಾಗವಿಲ್ಲದಂತಾಗಿದೆ. ಇದರಿಂದಾಗಿ ಖಾಸಗಿ ಮಾಲೀಕರಿಂದ ಭೂಮಿ ಖರೀದಿಸುವ ಪರಿಸ್ಥಿತಿ ಎದುರಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಹೇಳಿದರು.

ವಿಧಾನಸಬೆಯಲ್ಲಿ ಪ್ರಶ್ನೋತ್ತರದ ವೇಳೆ ಬಿಜೆಪಿ ಶಾಸಕ ಹರೀಶ್‍ ಅವರು, ತಮ್ಮ ಕ್ಷೇತ್ರದಲ್ಲಿ ಹಿಂದೂ ರುದ್ರಭೂಮಿಗಾಗಿ 10.09 ಎಕರೆಯನ್ನು ಮೀಸಲಿಡಲಾಗಿದೆ. ಇದು ತುಂಗಾಭದ್ರಾ ನದಿಯ ದಡದಲ್ಲಿದ್ದು, ಮಳೆ ಬಂದಾಗ ಅರ್ಧ ಭಾಗ ಮುಳುಗಿ ಹೋಗುತ್ತದೆ. ಹೆಚ್ಚುವರಿಯಾಗಿ ಜಾಗ ಗುರುತಿಸಲಾಗಿದ್ದು, ಅದನ್ನು ಶೀಘ್ರವೇ ಸರ್ಕಾರ ಸ್ವಾಧೀನ ಪ್ರಕ್ರಿಯೆ ಕೈಗೊಳ್ಳಬೇಕು. ಇಲ್ಲವಾದರೆ ರಿಯಲ್ ಎಸ್ಟೇಟ್ ಚಿತಾವಣೆಯಿಂದಾಗಿ ಭೂಮಿ ಕೈತಪ್ಪುವ ಸಾಧ್ಯತೆ ಇದೆ. ಇದಕ್ಕಿಂತಲೂ ಪರ್ಯಾಯ ಜಾಗ ಸೂಕ್ತವಾಗಿಲ್ಲ. ನಗರ ಪ್ರದೇಶದಲ್ಲಿ ಎಕರೆಗೆ 1 ಕೋಟಿ ರೂ. ನೀಡುವುದು, ದೊಡ್ಡ ನಷ್ಟವಲ್ಲ ಎಂದು ಸಚಿವರ ಗಮನ ಸೆಳೆದರು.

ಇದಕ್ಕೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ, ಈಗಿರುವ ಸ್ಮಶಾನದ ಪಕ್ಕದಲ್ಲೇ 9 ಎಕರೆಯನ್ನು ಗುರುತಿಸಲಾಗಿದೆ. ಮಾರ್ಗಸೂಚಿಯ ಪ್ರಕಾರ 67 ಲಕ್ಷ ರೂ. ಎಕರೆಗೆ ಬೆಲೆ ಇದೆ. ಆದರೆ ರೈತರು 1.20 ಕೋಟಿ ರೂ. ಗಳನ್ನು ಕೇಳುತ್ತಿದ್ದಾರೆ. ಬೆಲೆಯಲ್ಲಿ ಹೊಂದಾಣಿಕೆಯ ಚರ್ಚೆ ಯಶಸ್ವಿಯಾದರೆ, ಅದೇ ಜಾಗ ಖರೀಸುತ್ತೇವೆ. ಇಲ್ಲವಾದರೆ ಪರ್ಯಾಯ ಜಾಗವನ್ನು ಹುಡುಕಿ ಹರಿಹರ ನಗರಕ್ಕೆ ಸ್ಮಶಾನ ಭೂಮಿಯನ್ನು ಒದಗಿಸುತ್ತೇವೆ ಎಂದು ಭರವಸೆ ನೀಡಿದರು.

ಇರುವ ಜಾಗಗಳನ್ನೆಲ್ಲಾ ಮಂಜೂರು ಮಾಡಿ ಈಗ ಸ್ಮಶಾನಕ್ಕಾಗಿಯೇ ಜಾಗ ಖರೀದಿಸುವ ಪರಿಸ್ಥಿತಿ ಬಂದಿದೆ. ಕಳೆದ ವರ್ಷ 50 ಕೋಟಿ ರೂ.ಗಳನ್ನು ಸ್ಮಶಾನ ಭೂಮಿ ಖರೀದಿಗಾಗಿ ವೆಚ್ಚ ಮಾಡಲಾಗಿದೆ. ಯಾವುದೇ ಊರಿಗೆ ಹೋದರೂ ಸ್ಮಶಾನಕ್ಕೆ ಜಾಗ ಇಲ್ಲ ಎಂಬ ಮನವಿಗಳು ಸಾಮಾನ್ಯವಾಗಿವೆ. ನ್ಯಾಯಾಲಯದಲ್ಲಿ ಹಲವಾರು ಪ್ರಕರಣಗಳು ದಾಖಲಾಗಿದ್ದು, ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ವಾರಕ್ಕೊಮ್ಮೆ ನ್ಯಾಯಾಲಯದ ಮುಂದೆ ನಿಲ್ಲಬೇಕಾದ ಪರಿಸ್ಥತಿ ಇದೆ ಎಂದು ಹೇಳಿದರು.

ಸರ್ಕಾರಿ ಜಾಗ ಖಾಲಿಯಾಗುತ್ತಿರುವುದರಿಂದಾಗಿ ಸ್ಮಶಾನಕ್ಕೆ ಆಟದ ಮೈದಾನ, ಕೆಪಿಟಿಎಸ್‍ಎಲ್‍ನ ಸ್ಟೇಷನ್‍, ಆಸ್ಪತ್ರೆಗಳಿಗೆ ಸ್ಥಳಗಳಿಲ್ಲ. ಅಂಗನವಾಡಿಗಳಿಗೆ ಜಾಗ ನೀಡುವಂತೆ 12 ಸಾವಿರ ಅರ್ಜಿಗಳಿವೆ. ಮೊನ್ನೆ ಸಿಇಒ ಹಾಗೂ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿಯವರು ಇಷ್ಟು ಅರ್ಜಿಗಳಿದ್ದರೂ ಏಕೆ ಜಾಗ ನೀಡುತ್ತಿಲ್ಲ ಎಂದು ನನ್ನನ್ನು ತರಾಟೆಗೆ ತೆಗೆದುಕೊಂಡರು ಎಂದು ಸದನಕ್ಕೆ ತಿಳಿಸಿದರು.

ಇರುವ ಜಾಗವನ್ನು ಸಾರ್ವಜನಿಕರ ಉದ್ದೇಶಕ್ಕೆ ಮೀಸಲಿಡುವ ಅಗತ್ಯವಿದೆ ಎಂದು ಹೇಳಿದಾಗ, ಪ್ರತಿಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಮಾತನಾಡಿ, ನಗರ ಯೋಜನೆಯ ಸಂದರ್ಭದಲ್ಲಿ ಸ್ಮಶಾನ ಸೇರಿದಂತೆ ಇತರ ನಾಗರಿಕ ಸೌಲಭ್ಯಗಳಿಗೆ ಜಾಗ ಮೀಸಲಿಡುತ್ತಿಲ್ಲ. ಈ ಬಗ್ಗೆ ಸಚಿವರು ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT