ಸಚಿವ ಕೃಷ್ಣ ಬೈರೇಗೌಡ 
ರಾಜ್ಯ

ರಾಜ್ಯದಲ್ಲಿ ಸ್ಮಶಾನಕ್ಕೂ ಜಾಗವಿಲ್ಲದಂತಾಗಿದ್ದು, ಖಾಸಗಿ ಭೂಮಿ ಖರೀದಿಸುವ ಪರಿಸ್ಥಿತಿ ಎದುರಾಗಿದೆ: ಸರ್ಕಾರ

ಸರ್ಕಾರಿ ಜಾಗ ಖಾಲಿಯಾಗುತ್ತಿರುವುದರಿಂದಾಗಿ ಸ್ಮಶಾನಕ್ಕೆ ಆಟದ ಮೈದಾನ, ಕೆಪಿಟಿಎಸ್‍ಎಲ್‍ನ ಸ್ಟೇಷನ್‍, ಆಸ್ಪತ್ರೆಗಳಿಗೆ ಸ್ಥಳಗಳಿಲ್ಲ. ಅಂಗನವಾಡಿಗಳಿಗೆ ಜಾಗ ನೀಡುವಂತೆ 12 ಸಾವಿರ ಅರ್ಜಿಗಳಿವೆ.

ಬೆಂಗಳೂರು: ಸರ್ಕಾರಿ ಭೂಮಿಯನ್ನು ಸರ್ಕಾರದ ವಿವಿಧ ಯೋಜನೆಗಳಿಗೆ ವ್ಯಾಪಕವಾಗಿ ಬಳಸಲಾಗುತ್ತಿದ್ದು, ರಾಜ್ಯದಲ್ಲಿ ಇದೀಗ ಸ್ಮಶಾನಕ್ಕೆ ಜಾಗವಿಲ್ಲದಂತಾಗಿದೆ. ಇದರಿಂದಾಗಿ ಖಾಸಗಿ ಮಾಲೀಕರಿಂದ ಭೂಮಿ ಖರೀದಿಸುವ ಪರಿಸ್ಥಿತಿ ಎದುರಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಹೇಳಿದರು.

ವಿಧಾನಸಬೆಯಲ್ಲಿ ಪ್ರಶ್ನೋತ್ತರದ ವೇಳೆ ಬಿಜೆಪಿ ಶಾಸಕ ಹರೀಶ್‍ ಅವರು, ತಮ್ಮ ಕ್ಷೇತ್ರದಲ್ಲಿ ಹಿಂದೂ ರುದ್ರಭೂಮಿಗಾಗಿ 10.09 ಎಕರೆಯನ್ನು ಮೀಸಲಿಡಲಾಗಿದೆ. ಇದು ತುಂಗಾಭದ್ರಾ ನದಿಯ ದಡದಲ್ಲಿದ್ದು, ಮಳೆ ಬಂದಾಗ ಅರ್ಧ ಭಾಗ ಮುಳುಗಿ ಹೋಗುತ್ತದೆ. ಹೆಚ್ಚುವರಿಯಾಗಿ ಜಾಗ ಗುರುತಿಸಲಾಗಿದ್ದು, ಅದನ್ನು ಶೀಘ್ರವೇ ಸರ್ಕಾರ ಸ್ವಾಧೀನ ಪ್ರಕ್ರಿಯೆ ಕೈಗೊಳ್ಳಬೇಕು. ಇಲ್ಲವಾದರೆ ರಿಯಲ್ ಎಸ್ಟೇಟ್ ಚಿತಾವಣೆಯಿಂದಾಗಿ ಭೂಮಿ ಕೈತಪ್ಪುವ ಸಾಧ್ಯತೆ ಇದೆ. ಇದಕ್ಕಿಂತಲೂ ಪರ್ಯಾಯ ಜಾಗ ಸೂಕ್ತವಾಗಿಲ್ಲ. ನಗರ ಪ್ರದೇಶದಲ್ಲಿ ಎಕರೆಗೆ 1 ಕೋಟಿ ರೂ. ನೀಡುವುದು, ದೊಡ್ಡ ನಷ್ಟವಲ್ಲ ಎಂದು ಸಚಿವರ ಗಮನ ಸೆಳೆದರು.

ಇದಕ್ಕೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ, ಈಗಿರುವ ಸ್ಮಶಾನದ ಪಕ್ಕದಲ್ಲೇ 9 ಎಕರೆಯನ್ನು ಗುರುತಿಸಲಾಗಿದೆ. ಮಾರ್ಗಸೂಚಿಯ ಪ್ರಕಾರ 67 ಲಕ್ಷ ರೂ. ಎಕರೆಗೆ ಬೆಲೆ ಇದೆ. ಆದರೆ ರೈತರು 1.20 ಕೋಟಿ ರೂ. ಗಳನ್ನು ಕೇಳುತ್ತಿದ್ದಾರೆ. ಬೆಲೆಯಲ್ಲಿ ಹೊಂದಾಣಿಕೆಯ ಚರ್ಚೆ ಯಶಸ್ವಿಯಾದರೆ, ಅದೇ ಜಾಗ ಖರೀಸುತ್ತೇವೆ. ಇಲ್ಲವಾದರೆ ಪರ್ಯಾಯ ಜಾಗವನ್ನು ಹುಡುಕಿ ಹರಿಹರ ನಗರಕ್ಕೆ ಸ್ಮಶಾನ ಭೂಮಿಯನ್ನು ಒದಗಿಸುತ್ತೇವೆ ಎಂದು ಭರವಸೆ ನೀಡಿದರು.

ಇರುವ ಜಾಗಗಳನ್ನೆಲ್ಲಾ ಮಂಜೂರು ಮಾಡಿ ಈಗ ಸ್ಮಶಾನಕ್ಕಾಗಿಯೇ ಜಾಗ ಖರೀದಿಸುವ ಪರಿಸ್ಥಿತಿ ಬಂದಿದೆ. ಕಳೆದ ವರ್ಷ 50 ಕೋಟಿ ರೂ.ಗಳನ್ನು ಸ್ಮಶಾನ ಭೂಮಿ ಖರೀದಿಗಾಗಿ ವೆಚ್ಚ ಮಾಡಲಾಗಿದೆ. ಯಾವುದೇ ಊರಿಗೆ ಹೋದರೂ ಸ್ಮಶಾನಕ್ಕೆ ಜಾಗ ಇಲ್ಲ ಎಂಬ ಮನವಿಗಳು ಸಾಮಾನ್ಯವಾಗಿವೆ. ನ್ಯಾಯಾಲಯದಲ್ಲಿ ಹಲವಾರು ಪ್ರಕರಣಗಳು ದಾಖಲಾಗಿದ್ದು, ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ವಾರಕ್ಕೊಮ್ಮೆ ನ್ಯಾಯಾಲಯದ ಮುಂದೆ ನಿಲ್ಲಬೇಕಾದ ಪರಿಸ್ಥತಿ ಇದೆ ಎಂದು ಹೇಳಿದರು.

ಸರ್ಕಾರಿ ಜಾಗ ಖಾಲಿಯಾಗುತ್ತಿರುವುದರಿಂದಾಗಿ ಸ್ಮಶಾನಕ್ಕೆ ಆಟದ ಮೈದಾನ, ಕೆಪಿಟಿಎಸ್‍ಎಲ್‍ನ ಸ್ಟೇಷನ್‍, ಆಸ್ಪತ್ರೆಗಳಿಗೆ ಸ್ಥಳಗಳಿಲ್ಲ. ಅಂಗನವಾಡಿಗಳಿಗೆ ಜಾಗ ನೀಡುವಂತೆ 12 ಸಾವಿರ ಅರ್ಜಿಗಳಿವೆ. ಮೊನ್ನೆ ಸಿಇಒ ಹಾಗೂ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿಯವರು ಇಷ್ಟು ಅರ್ಜಿಗಳಿದ್ದರೂ ಏಕೆ ಜಾಗ ನೀಡುತ್ತಿಲ್ಲ ಎಂದು ನನ್ನನ್ನು ತರಾಟೆಗೆ ತೆಗೆದುಕೊಂಡರು ಎಂದು ಸದನಕ್ಕೆ ತಿಳಿಸಿದರು.

ಇರುವ ಜಾಗವನ್ನು ಸಾರ್ವಜನಿಕರ ಉದ್ದೇಶಕ್ಕೆ ಮೀಸಲಿಡುವ ಅಗತ್ಯವಿದೆ ಎಂದು ಹೇಳಿದಾಗ, ಪ್ರತಿಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಮಾತನಾಡಿ, ನಗರ ಯೋಜನೆಯ ಸಂದರ್ಭದಲ್ಲಿ ಸ್ಮಶಾನ ಸೇರಿದಂತೆ ಇತರ ನಾಗರಿಕ ಸೌಲಭ್ಯಗಳಿಗೆ ಜಾಗ ಮೀಸಲಿಡುತ್ತಿಲ್ಲ. ಈ ಬಗ್ಗೆ ಸಚಿವರು ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT