ಬಸನಗೌಡ ಪಾಟೀಲ್ ಯತ್ನಾಳ್ 
ರಾಜ್ಯ

ವಾಲ್ಮೀಕಿ ನಿಗಮಕ್ಕಿಂತಲೂ ರಾಜ್ಯದಲ್ಲಿ ಬಹುದೊಡ್ಡ ಹಗರಣ: ಯತ್ನಾಳ್ ಬಾಂಬ್

ಕರ್ನಾಟಕ ರಾಜ್ಯ ಹ್ಯಾಬಿಟೇಟ್ ಕೇಂದ್ರ, ಬೆಂಗಳೂರು ಎಂಬ ಒಂದು ಸಂಘಕ್ಕೆ ಸುಮಾರು 600 ಕೋಟಿ ಅನುದಾನವನ್ನು ಕರ್ನಾಟಕ ರಾಜ್ಯ ಪಾರದರ್ಶಕ ಕಾಯ್ದೆ ಉಲ್ಲಂಘಿಸಿ ನೀಡಲಾಗಿದೆ.

ಬೆಂಗಳೂರು: ವಾಲ್ಮೀಕಿ ನಿಗಮದಂತೆ ಕರ್ನಾಟಕದಲ್ಲಿ ಇನ್ನೊಂದು ಕೇಂದ್ರ ಹಗರಣದ ಆಗರವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು ಕರ್ನಾಟಕ ರಾಜ್ಯ ಹ್ಯಾಬಿಟೇಟ್ ಕೇಂದ್ರ, ಬೆಂಗಳೂರು ಎಂಬ ಒಂದು ಸಂಘಕ್ಕೆ ಸುಮಾರು 600 ಕೋಟಿ ಅನುದಾನವನ್ನು ಕರ್ನಾಟಕ ರಾಜ್ಯ ಪಾರದರ್ಶಕ ಕಾಯ್ದೆ ಉಲ್ಲಂಘಿಸಿ ನೀಡಲಾಗಿದೆ. ಈ ಹ್ಯಾಬಿಟೇಟ್ ಕೇಂದ್ರಕ್ಕೆ ಯಾವ ಸಾಂವಿಧಾನಿಕ ಮಾನ್ಯತೆಯೂ ಇಲ್ಲದಿದ್ದರೂ ಮಂತ್ರಿ ಜಮೀರ್ ಅಹ್ಮದ್ ನೇತೃತ್ವದಲ್ಲಿ ಈ ಸಂಸ್ಥೆಗೆ ಕಾಮಗಾರಿ ಕೈಗೊಳ್ಳಲು ಅನುಮತಿ ನೀಡಲಾಗಿದೆ.

ಈ ಹ್ಯಾಬಿಟೇಟ್ ಕೇಂದ್ರ ಸರ್ಕಾರಿ ಸಂಸ್ಥೆಯಲ್ಲ, ಇದರಲ್ಲಿ ಕಾರ್ಯನಿರ್ವಹಿಸುತ್ತಿರುವವರು ಸರ್ಕಾರೀ ನೌಕರರೂ ಅಲ್ಲ, ಇಲ್ಲಿ ಎಲ್ಲ ಮಾಯಾ! ಈ ಸಂಸ್ಥೆ ವಿಶೇಷವಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾಮಗಾರಿಗಳನ್ನು ಕೈಗೊಂಡಿರುವುದು ಮಂತ್ರಿ ಹಾಗು ಅಧಿಕಾರಿಗಳು ಕೈಜೋಡಿಸಿರುವಂತೆ ಕಾಣಿಸುತ್ತದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದಲೂ ಈ ಹ್ಯಾಬಿಟೆಟ್ ಕೇಂದ್ರಕ್ಕೆ ಹಣ ವರ್ಗಾವಣೆ ಮಾಡಲಾಗಿದೆ. ವಾಲ್ಮೀಕಿ ನಿಗಮದ ಅಕ್ರಮ ಬಯಲಾದ ದಿನದಿಂದ ಸಚಿವ ಜಮೀರ್ ಈ ಹ್ಯಾಬಿಟೇಟ್ ಕೇಂದ್ರದ ಸಭೆಗಳನ್ನು ಪ್ರತಿನಿತ್ಯವೂ ಮಾಡಿ ಏನನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ? ಯಾವ ಕಡತಕ್ಕೆ ಬೆಂಕಿ ಬೀಳಲಿದೆ? ಈ ಹಣ ಯಾವ ಚುನಾವಣೆಗೆ ಬಳಸಲಾಗಿದೆ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT