ಬಸನಗೌಡ ಪಾಟೀಲ್ ಯತ್ನಾಳ್ 
ರಾಜ್ಯ

ವಾಲ್ಮೀಕಿ ನಿಗಮಕ್ಕಿಂತಲೂ ರಾಜ್ಯದಲ್ಲಿ ಬಹುದೊಡ್ಡ ಹಗರಣ: ಯತ್ನಾಳ್ ಬಾಂಬ್

ಕರ್ನಾಟಕ ರಾಜ್ಯ ಹ್ಯಾಬಿಟೇಟ್ ಕೇಂದ್ರ, ಬೆಂಗಳೂರು ಎಂಬ ಒಂದು ಸಂಘಕ್ಕೆ ಸುಮಾರು 600 ಕೋಟಿ ಅನುದಾನವನ್ನು ಕರ್ನಾಟಕ ರಾಜ್ಯ ಪಾರದರ್ಶಕ ಕಾಯ್ದೆ ಉಲ್ಲಂಘಿಸಿ ನೀಡಲಾಗಿದೆ.

ಬೆಂಗಳೂರು: ವಾಲ್ಮೀಕಿ ನಿಗಮದಂತೆ ಕರ್ನಾಟಕದಲ್ಲಿ ಇನ್ನೊಂದು ಕೇಂದ್ರ ಹಗರಣದ ಆಗರವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು ಕರ್ನಾಟಕ ರಾಜ್ಯ ಹ್ಯಾಬಿಟೇಟ್ ಕೇಂದ್ರ, ಬೆಂಗಳೂರು ಎಂಬ ಒಂದು ಸಂಘಕ್ಕೆ ಸುಮಾರು 600 ಕೋಟಿ ಅನುದಾನವನ್ನು ಕರ್ನಾಟಕ ರಾಜ್ಯ ಪಾರದರ್ಶಕ ಕಾಯ್ದೆ ಉಲ್ಲಂಘಿಸಿ ನೀಡಲಾಗಿದೆ. ಈ ಹ್ಯಾಬಿಟೇಟ್ ಕೇಂದ್ರಕ್ಕೆ ಯಾವ ಸಾಂವಿಧಾನಿಕ ಮಾನ್ಯತೆಯೂ ಇಲ್ಲದಿದ್ದರೂ ಮಂತ್ರಿ ಜಮೀರ್ ಅಹ್ಮದ್ ನೇತೃತ್ವದಲ್ಲಿ ಈ ಸಂಸ್ಥೆಗೆ ಕಾಮಗಾರಿ ಕೈಗೊಳ್ಳಲು ಅನುಮತಿ ನೀಡಲಾಗಿದೆ.

ಈ ಹ್ಯಾಬಿಟೇಟ್ ಕೇಂದ್ರ ಸರ್ಕಾರಿ ಸಂಸ್ಥೆಯಲ್ಲ, ಇದರಲ್ಲಿ ಕಾರ್ಯನಿರ್ವಹಿಸುತ್ತಿರುವವರು ಸರ್ಕಾರೀ ನೌಕರರೂ ಅಲ್ಲ, ಇಲ್ಲಿ ಎಲ್ಲ ಮಾಯಾ! ಈ ಸಂಸ್ಥೆ ವಿಶೇಷವಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾಮಗಾರಿಗಳನ್ನು ಕೈಗೊಂಡಿರುವುದು ಮಂತ್ರಿ ಹಾಗು ಅಧಿಕಾರಿಗಳು ಕೈಜೋಡಿಸಿರುವಂತೆ ಕಾಣಿಸುತ್ತದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದಲೂ ಈ ಹ್ಯಾಬಿಟೆಟ್ ಕೇಂದ್ರಕ್ಕೆ ಹಣ ವರ್ಗಾವಣೆ ಮಾಡಲಾಗಿದೆ. ವಾಲ್ಮೀಕಿ ನಿಗಮದ ಅಕ್ರಮ ಬಯಲಾದ ದಿನದಿಂದ ಸಚಿವ ಜಮೀರ್ ಈ ಹ್ಯಾಬಿಟೇಟ್ ಕೇಂದ್ರದ ಸಭೆಗಳನ್ನು ಪ್ರತಿನಿತ್ಯವೂ ಮಾಡಿ ಏನನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ? ಯಾವ ಕಡತಕ್ಕೆ ಬೆಂಕಿ ಬೀಳಲಿದೆ? ಈ ಹಣ ಯಾವ ಚುನಾವಣೆಗೆ ಬಳಸಲಾಗಿದೆ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT