ಬಸನಗೌಡ ಪಾಟೀಲ್ ಯತ್ನಾಳ್ 
ರಾಜ್ಯ

ವಾಲ್ಮೀಕಿ ನಿಗಮಕ್ಕಿಂತಲೂ ರಾಜ್ಯದಲ್ಲಿ ಬಹುದೊಡ್ಡ ಹಗರಣ: ಯತ್ನಾಳ್ ಬಾಂಬ್

ಕರ್ನಾಟಕ ರಾಜ್ಯ ಹ್ಯಾಬಿಟೇಟ್ ಕೇಂದ್ರ, ಬೆಂಗಳೂರು ಎಂಬ ಒಂದು ಸಂಘಕ್ಕೆ ಸುಮಾರು 600 ಕೋಟಿ ಅನುದಾನವನ್ನು ಕರ್ನಾಟಕ ರಾಜ್ಯ ಪಾರದರ್ಶಕ ಕಾಯ್ದೆ ಉಲ್ಲಂಘಿಸಿ ನೀಡಲಾಗಿದೆ.

ಬೆಂಗಳೂರು: ವಾಲ್ಮೀಕಿ ನಿಗಮದಂತೆ ಕರ್ನಾಟಕದಲ್ಲಿ ಇನ್ನೊಂದು ಕೇಂದ್ರ ಹಗರಣದ ಆಗರವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು ಕರ್ನಾಟಕ ರಾಜ್ಯ ಹ್ಯಾಬಿಟೇಟ್ ಕೇಂದ್ರ, ಬೆಂಗಳೂರು ಎಂಬ ಒಂದು ಸಂಘಕ್ಕೆ ಸುಮಾರು 600 ಕೋಟಿ ಅನುದಾನವನ್ನು ಕರ್ನಾಟಕ ರಾಜ್ಯ ಪಾರದರ್ಶಕ ಕಾಯ್ದೆ ಉಲ್ಲಂಘಿಸಿ ನೀಡಲಾಗಿದೆ. ಈ ಹ್ಯಾಬಿಟೇಟ್ ಕೇಂದ್ರಕ್ಕೆ ಯಾವ ಸಾಂವಿಧಾನಿಕ ಮಾನ್ಯತೆಯೂ ಇಲ್ಲದಿದ್ದರೂ ಮಂತ್ರಿ ಜಮೀರ್ ಅಹ್ಮದ್ ನೇತೃತ್ವದಲ್ಲಿ ಈ ಸಂಸ್ಥೆಗೆ ಕಾಮಗಾರಿ ಕೈಗೊಳ್ಳಲು ಅನುಮತಿ ನೀಡಲಾಗಿದೆ.

ಈ ಹ್ಯಾಬಿಟೇಟ್ ಕೇಂದ್ರ ಸರ್ಕಾರಿ ಸಂಸ್ಥೆಯಲ್ಲ, ಇದರಲ್ಲಿ ಕಾರ್ಯನಿರ್ವಹಿಸುತ್ತಿರುವವರು ಸರ್ಕಾರೀ ನೌಕರರೂ ಅಲ್ಲ, ಇಲ್ಲಿ ಎಲ್ಲ ಮಾಯಾ! ಈ ಸಂಸ್ಥೆ ವಿಶೇಷವಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾಮಗಾರಿಗಳನ್ನು ಕೈಗೊಂಡಿರುವುದು ಮಂತ್ರಿ ಹಾಗು ಅಧಿಕಾರಿಗಳು ಕೈಜೋಡಿಸಿರುವಂತೆ ಕಾಣಿಸುತ್ತದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದಲೂ ಈ ಹ್ಯಾಬಿಟೆಟ್ ಕೇಂದ್ರಕ್ಕೆ ಹಣ ವರ್ಗಾವಣೆ ಮಾಡಲಾಗಿದೆ. ವಾಲ್ಮೀಕಿ ನಿಗಮದ ಅಕ್ರಮ ಬಯಲಾದ ದಿನದಿಂದ ಸಚಿವ ಜಮೀರ್ ಈ ಹ್ಯಾಬಿಟೇಟ್ ಕೇಂದ್ರದ ಸಭೆಗಳನ್ನು ಪ್ರತಿನಿತ್ಯವೂ ಮಾಡಿ ಏನನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ? ಯಾವ ಕಡತಕ್ಕೆ ಬೆಂಕಿ ಬೀಳಲಿದೆ? ಈ ಹಣ ಯಾವ ಚುನಾವಣೆಗೆ ಬಳಸಲಾಗಿದೆ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ: ಮಕ್ಕಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು

SCROLL FOR NEXT