ಬಸನಗೌಡ ಪಾಟೀಲ್ ಯತ್ನಾಳ್ 
ರಾಜ್ಯ

ವಾಲ್ಮೀಕಿ ನಿಗಮಕ್ಕಿಂತಲೂ ರಾಜ್ಯದಲ್ಲಿ ಬಹುದೊಡ್ಡ ಹಗರಣ: ಯತ್ನಾಳ್ ಬಾಂಬ್

ಕರ್ನಾಟಕ ರಾಜ್ಯ ಹ್ಯಾಬಿಟೇಟ್ ಕೇಂದ್ರ, ಬೆಂಗಳೂರು ಎಂಬ ಒಂದು ಸಂಘಕ್ಕೆ ಸುಮಾರು 600 ಕೋಟಿ ಅನುದಾನವನ್ನು ಕರ್ನಾಟಕ ರಾಜ್ಯ ಪಾರದರ್ಶಕ ಕಾಯ್ದೆ ಉಲ್ಲಂಘಿಸಿ ನೀಡಲಾಗಿದೆ.

ಬೆಂಗಳೂರು: ವಾಲ್ಮೀಕಿ ನಿಗಮದಂತೆ ಕರ್ನಾಟಕದಲ್ಲಿ ಇನ್ನೊಂದು ಕೇಂದ್ರ ಹಗರಣದ ಆಗರವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು ಕರ್ನಾಟಕ ರಾಜ್ಯ ಹ್ಯಾಬಿಟೇಟ್ ಕೇಂದ್ರ, ಬೆಂಗಳೂರು ಎಂಬ ಒಂದು ಸಂಘಕ್ಕೆ ಸುಮಾರು 600 ಕೋಟಿ ಅನುದಾನವನ್ನು ಕರ್ನಾಟಕ ರಾಜ್ಯ ಪಾರದರ್ಶಕ ಕಾಯ್ದೆ ಉಲ್ಲಂಘಿಸಿ ನೀಡಲಾಗಿದೆ. ಈ ಹ್ಯಾಬಿಟೇಟ್ ಕೇಂದ್ರಕ್ಕೆ ಯಾವ ಸಾಂವಿಧಾನಿಕ ಮಾನ್ಯತೆಯೂ ಇಲ್ಲದಿದ್ದರೂ ಮಂತ್ರಿ ಜಮೀರ್ ಅಹ್ಮದ್ ನೇತೃತ್ವದಲ್ಲಿ ಈ ಸಂಸ್ಥೆಗೆ ಕಾಮಗಾರಿ ಕೈಗೊಳ್ಳಲು ಅನುಮತಿ ನೀಡಲಾಗಿದೆ.

ಈ ಹ್ಯಾಬಿಟೇಟ್ ಕೇಂದ್ರ ಸರ್ಕಾರಿ ಸಂಸ್ಥೆಯಲ್ಲ, ಇದರಲ್ಲಿ ಕಾರ್ಯನಿರ್ವಹಿಸುತ್ತಿರುವವರು ಸರ್ಕಾರೀ ನೌಕರರೂ ಅಲ್ಲ, ಇಲ್ಲಿ ಎಲ್ಲ ಮಾಯಾ! ಈ ಸಂಸ್ಥೆ ವಿಶೇಷವಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾಮಗಾರಿಗಳನ್ನು ಕೈಗೊಂಡಿರುವುದು ಮಂತ್ರಿ ಹಾಗು ಅಧಿಕಾರಿಗಳು ಕೈಜೋಡಿಸಿರುವಂತೆ ಕಾಣಿಸುತ್ತದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದಲೂ ಈ ಹ್ಯಾಬಿಟೆಟ್ ಕೇಂದ್ರಕ್ಕೆ ಹಣ ವರ್ಗಾವಣೆ ಮಾಡಲಾಗಿದೆ. ವಾಲ್ಮೀಕಿ ನಿಗಮದ ಅಕ್ರಮ ಬಯಲಾದ ದಿನದಿಂದ ಸಚಿವ ಜಮೀರ್ ಈ ಹ್ಯಾಬಿಟೇಟ್ ಕೇಂದ್ರದ ಸಭೆಗಳನ್ನು ಪ್ರತಿನಿತ್ಯವೂ ಮಾಡಿ ಏನನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ? ಯಾವ ಕಡತಕ್ಕೆ ಬೆಂಕಿ ಬೀಳಲಿದೆ? ಈ ಹಣ ಯಾವ ಚುನಾವಣೆಗೆ ಬಳಸಲಾಗಿದೆ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT