ಲೋಕೋ ಪೈಲಟ್ ಗಳು PTI
ರಾಜ್ಯ

ಉಡುಪಿ: ಲೋಕೋ ಪೈಲಟ್‌ಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ!

ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನ ಲೋಕೋ ಪೈಲಟ್ ಮತ್ತು ಅವರ ಸಹಾಯಕನ ಸಮಯಪ್ರಜ್ಞೆ ಇಂದು ಉಡುಪಿ ರೈಲು ನಿಲ್ದಾಣದ ಬಳಿ ಭಾರೀ ಅವಘಡ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಡುಪಿ: ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನ ಲೋಕೋ ಪೈಲಟ್ ಮತ್ತು ಅವರ ಸಹಾಯಕನ ಸಮಯಪ್ರಜ್ಞೆ ಇಂದು ಉಡುಪಿ ರೈಲು ನಿಲ್ದಾಣದ ಬಳಿ ಭಾರೀ ಅವಘಡ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಳಿಗಳ ಮೇಲೆ ಬೃಹತ್ ಮರ ಬಿದ್ದಿರುವುದನ್ನು ಗಮನಿಸಿದ ಅವರು ಸರಿಯಾದ ಸಮಯಕ್ಕೆ ರೈಲನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದೆ ಎಂದು ರೈಲ್ವೇ ಪ್ರಕಟಣೆ ತಿಳಿಸಿದೆ.

ರೈಲು ನಿಲುಗಡೆಯಾದ ನಂತರ, ರೈಲ್ವೇ ಸಿಬ್ಬಂದಿಗಳು ಹಳಿಗಳ ಮೇಲೆ ಬಿದ್ದಿದ್ದ ಮರವನ್ನು ತೆರವುಗೊಳಿಸುವ ಕಾರ್ಯ ನಡೆಸಿದರು. ಕೊಂಕಣ ರೈಲ್ವೇ ಮೂಲಗಳ ಪ್ರಕಾರ, ಮತ್ಸ್ಯಗಂಧ ಎಕ್ಸ್‌ಪ್ರೆಸ್ ಬಾರ್ಕೂರಿನಿಂದ ಉಡುಪಿಗೆ ತೆರಳುತ್ತಿದ್ದಾಗ 9.18ಕ್ಕೆ ಹಳಿಗಳ ಮೇಲೆ ಮರವನ್ನು ಗಮನಿಸಿದ ಸಿಬ್ಬಂದಿ ತ್ವರಿತವಾಗಿ ಬ್ರೇಕ್ ಹಾಕಿದ್ದಾರೆ. ಹೀಗಾಗಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದರು.

ಟ್ರ್ಯಾಕ್ ನಿರ್ವಹಣೆಯ ಜವಾಬ್ದಾರಿ ಹೊಂದಿರುವ ಓವರ್‌ಹೆಡ್ ಸಲಕರಣೆ ತಂಡ (OHT) ಮರವನ್ನು ತಕ್ಷಣವೇ ತೆಗೆದುಹಾಕಿದೆ. ಸ್ವಲ್ಪ ಸಮಯದ ನಂತರ ರೈಲು ತನ್ನ ಪ್ರಯಾಣವನ್ನು ಮುಂದುವರೆಸಿತು. ಅವರ ಸಮಯೋಚಿತ ಮತ್ತು ಸಮಯಪ್ರಜ್ಞೆಯನ್ನು ಗುರುತಿಸಿ, ಕೊಂಕಣ ರೈಲ್ವೆ ಸಿಎಂಡಿ ಸಂತೋಷ್ ಕುಮಾರ್ ಝಾ ಅವರು ರೈಲಿನ ಸಿಬ್ಬಂದಿಗೆ ತಲಾ 15,000 ರೂಪಾಯಿ ನಗದು ಬಹುಮಾನವನ್ನು ನೀಡಿದರು. ಬಳಿಕ ಸುರತ್ಕಲ್ ರೈಲು ನಿಲ್ದಾಣದಲ್ಲಿ ಸಿಬ್ಬಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT