ಮೃತ ಬಾಲಕ ರಾಮಚಂದ್ರ 
ರಾಜ್ಯ

ಚಿತ್ರದುರ್ಗ: ಪಾರಿವಾಳದ ಜೀವ ಉಳಿಸಿ ಪ್ರಾಣ ಕಳೆದುಕೊಂಡ ಬಾಲಕ!

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಹನುಮಾಪುರ ಗ್ರಾಮದ ಓಬಳಸ್ವಾಮಿ ಎಂಬವರ ಪುತ್ರ ರಾಮಚಂದ್ರ (12) ಮೃತ ಬಾಲಕ. ಗ್ರಾಮದ ವಿದ್ಯುತ್ ಕಂಬದಲ್ಲಿ ಸಿಲುಕಿದ್ದ ಪಾರಿವಾಳ ಕಂಡು ಜೀವ ಉಳಿಸಲು ಕಂಬ ಏರಿದ್ದ ಬಾಲಕ ವಿದ್ಯುತ್ ಹರಿದು ಮೃತಪಟ್ಟಿದ್ದಾನೆ.

ಚಿತ್ರದುರ್ಗ: ಪಾರಿವಾಳದ ಜೀವ ಉಳಿಸಲು ಹೋಗಿ ಬಾಲಕನೋರ್ವ ಪ್ರಾಣ ಕಳೆದುಕೊಂಡಿರುವ ಹೃದಯ ವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಹನುಮಾಪುರ ಗ್ರಾಮದ ಓಬಳಸ್ವಾಮಿ ಎಂಬವರ ಪುತ್ರ ರಾಮಚಂದ್ರ (12) ಮೃತ ಬಾಲಕ. ಗ್ರಾಮದ ವಿದ್ಯುತ್ ಕಂಬದಲ್ಲಿ ಸಿಲುಕಿದ್ದ ಪಾರಿವಾಳ ಕಂಡು ಜೀವ ಉಳಿಸಲು ಕಂಬ ಏರಿದ್ದ ಬಾಲಕ ವಿದ್ಯುತ್ ಹರಿದು ಮೃತಪಟ್ಟಿದ್ದಾನೆ.

ವಿದ್ಯುತ್ ಶಾಕ್‌ನಿಂದಾಗಿ ಬಾಲಕನ ಶವ ವಿದ್ಯುತ್ ಕಂಬದಲ್ಲಿನ ತಂತಿಗೆ ಸಿಲುಕಿ ನೇತಾಡುತ್ತಿದ್ದು, ಮಾನವೀಯತೆಯಿಂದ ಪಾರಿವಾಳದ ಜೀವ ಉಳಿಸಲು ಮುಂದಾಗಿದ್ದ ಬಾಲಕ ತನ್ನ ಜೀವವನ್ನೇ ಬಲಿ ನೀಡಿದ್ದಾನೆ. ಸ್ಥಳಕ್ಕೆ ರಾಂಪುರ ಸಬ್ ಇನ್ಸ್‌ಪೆಕ್ಟರ್‌ ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ನಿಗೂಢ ಶಬ್ಧ: ಭೂಮಿ ಕಂಪಿಸಿದ ಅನುಭವ, ಬೆಚ್ಚಿಬಿದ್ದ ಜನತೆ

ಹುಬ್ಬಳ್ಳಿ ಮತ್ತು ವಿಜಯಪುರಕ್ಕೆ ಡಿ.24ರಂದು ವಿಶೇಷ ರೈಲು ಸೇವೆ, ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಮೋದಿ-ಅಮಿತ್ ಶಾರನ್ನೇ ಧೈರ್ಯವಾಗಿ ಎದುರಿಸಿ ಜೈಲಿಗೆ ಹೋಗಿ ಬಂದಿದ್ದೇನೆ; ನನ್ನನ್ನು ಹೆದರಿಸಲು ಬರಬೇಡಿ: ಡಿಕೆ ಶಿವಕುಮಾರ್

GOAT India Tour: ಹೈದರಾಬಾದಿನಲ್ಲಿ 'ಮೆಸ್ಸಿ' ಮೇನಿಯಾ; ಸಿಎಂ ರೇವಂತ್ ರೆಡ್ಡಿ ಜೊತೆಗೆ ಆಟವಾಡಿ ಪ್ರೇಕ್ಷಕರನ್ನು ರಂಜಿಸಿದ ಫುಟ್ಬಾಲ್ ದಂತಕಥೆ!

ರಾಕೆಟ್ ವೇಗದಲ್ಲಿ ಚಿನ್ನದ ಬೆಲೆ: ಹಳದಿ ಲೋಹದ ಸುಲಭ ಖರೀದಿಗಾಗಿ ಮಧ್ಯಮ ವರ್ಗದವರಿಗೆ ಇಲ್ಲಿದೆ ಟಿಪ್ಸ್!

SCROLL FOR NEXT