ಸಂಗ್ರಹ ಚಿತ್ರ TNIE
ರಾಜ್ಯ

ಕನಕಪುರದಲ್ಲಿ ಜಾತಿ ಸಂಘರ್ಷ: ದಲಿತ ವ್ಯಕ್ತಿಯ ಕೈ ಕತ್ತರಿಸಿದ ಶಸ್ತ್ರಸಜ್ಜಿತ ಗುಂಪು!

ಕನಕಪುರ ತಾಲೂಕಿನ ಮಳಗಾಲು ಗ್ರಾಮದಲ್ಲಿ ದಲಿತ ಕುಟುಂಬದ ಮೇಲೆ ಒಕ್ಕಲಿಗ ಸಮುದಾಯದ ಏಳು ಮಂದಿ ಶಸ್ತ್ರಸಜ್ಜಿತ ತಂಡ ಮಾರಣಾಂತಿಕ ದಾಳಿ ನಡೆಸಿದ್ದು ಘಟನೆಯಲ್ಲಿ ದಲಿತ ಯುವಕ ಅನೀಶ್ ಕುಮಾರ್ ಎಡಗೈ ತುಂಡಾಗಿದೆ ಎಂದು ವರದಿಯಾಗಿದೆ.

ರಾಮನಗರ: ಕನಕಪುರ ತಾಲೂಕಿನ ಮಳಗಾಲು ಗ್ರಾಮದಲ್ಲಿ ದಲಿತ ಕುಟುಂಬದ ಮೇಲೆ ಒಕ್ಕಲಿಗ ಸಮುದಾಯದ ಏಳು ಮಂದಿ ಶಸ್ತ್ರಸಜ್ಜಿತ ತಂಡ ಮಾರಣಾಂತಿಕ ದಾಳಿ ನಡೆಸಿದ್ದು ಘಟನೆಯಲ್ಲಿ ದಲಿತ ಯುವಕ ಅನೀಶ್ ಕುಮಾರ್ ಎಡಗೈ ತುಂಡಾಗಿದೆ ಎಂದು ವರದಿಯಾಗಿದೆ.

ಜುಲೈ 21ರಂದು ಅನೀಶ್ ತನ್ನ ಚಿಕ್ಕಪ್ಪನೊಂದಿಗೆ ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿಗಳಲ್ಲಿ ಒಬ್ಬ ತನ್ನ ಜೊತೆಯಲ್ಲಿದ್ದವರ ಜೊತೆ ಅನೀಶ್‌ನ ಜಾತಿಯ ಬಗ್ಗೆ ಮಾತನಾಡಿದ್ದಾನೆ. ಇದು ಅನೀಶ್ ಮತ್ತು ಗುಂಪಿನ ನಡುವೆ ವಾಗ್ವಾದಕ್ಕೆ ಕಾರಣವಾಗಿತ್ತು.

ನಂತರ ಗುಂಪು ಕಟ್ಟಿಕೊಂಡು ಆರೋಪಿಗಳು ಅನೀಶ್ ಮನೆಗೆ ನುಗ್ಗಿ ಜಾತಿ ನಿಂದನೆ ಮಾಡಿ ಕುಟುಂಬಸ್ಥರನ್ನು ನಿಂದಿಸಿದ್ದಲ್ಲದೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ ಎಂದು ಬೆಂಗಳೂರು ಮಿರರ್ ವರದಿ ಮಾಡಿದೆ.

ಸದ್ಯ ಅನೀಶ್ ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಾಯಗೊಂಡ ಕುಟುಂಬದ ಇತರ ಸದಸ್ಯರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಿದ್ದು ಮೂವರು ತಲೆಮರೆಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT