ಸಂಗ್ರಹ ಚಿತ್ರ TNIE
ರಾಜ್ಯ

ಕನಕಪುರದಲ್ಲಿ ಜಾತಿ ಸಂಘರ್ಷ: ದಲಿತ ವ್ಯಕ್ತಿಯ ಕೈ ಕತ್ತರಿಸಿದ ಶಸ್ತ್ರಸಜ್ಜಿತ ಗುಂಪು!

ಕನಕಪುರ ತಾಲೂಕಿನ ಮಳಗಾಲು ಗ್ರಾಮದಲ್ಲಿ ದಲಿತ ಕುಟುಂಬದ ಮೇಲೆ ಒಕ್ಕಲಿಗ ಸಮುದಾಯದ ಏಳು ಮಂದಿ ಶಸ್ತ್ರಸಜ್ಜಿತ ತಂಡ ಮಾರಣಾಂತಿಕ ದಾಳಿ ನಡೆಸಿದ್ದು ಘಟನೆಯಲ್ಲಿ ದಲಿತ ಯುವಕ ಅನೀಶ್ ಕುಮಾರ್ ಎಡಗೈ ತುಂಡಾಗಿದೆ ಎಂದು ವರದಿಯಾಗಿದೆ.

ರಾಮನಗರ: ಕನಕಪುರ ತಾಲೂಕಿನ ಮಳಗಾಲು ಗ್ರಾಮದಲ್ಲಿ ದಲಿತ ಕುಟುಂಬದ ಮೇಲೆ ಒಕ್ಕಲಿಗ ಸಮುದಾಯದ ಏಳು ಮಂದಿ ಶಸ್ತ್ರಸಜ್ಜಿತ ತಂಡ ಮಾರಣಾಂತಿಕ ದಾಳಿ ನಡೆಸಿದ್ದು ಘಟನೆಯಲ್ಲಿ ದಲಿತ ಯುವಕ ಅನೀಶ್ ಕುಮಾರ್ ಎಡಗೈ ತುಂಡಾಗಿದೆ ಎಂದು ವರದಿಯಾಗಿದೆ.

ಜುಲೈ 21ರಂದು ಅನೀಶ್ ತನ್ನ ಚಿಕ್ಕಪ್ಪನೊಂದಿಗೆ ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿಗಳಲ್ಲಿ ಒಬ್ಬ ತನ್ನ ಜೊತೆಯಲ್ಲಿದ್ದವರ ಜೊತೆ ಅನೀಶ್‌ನ ಜಾತಿಯ ಬಗ್ಗೆ ಮಾತನಾಡಿದ್ದಾನೆ. ಇದು ಅನೀಶ್ ಮತ್ತು ಗುಂಪಿನ ನಡುವೆ ವಾಗ್ವಾದಕ್ಕೆ ಕಾರಣವಾಗಿತ್ತು.

ನಂತರ ಗುಂಪು ಕಟ್ಟಿಕೊಂಡು ಆರೋಪಿಗಳು ಅನೀಶ್ ಮನೆಗೆ ನುಗ್ಗಿ ಜಾತಿ ನಿಂದನೆ ಮಾಡಿ ಕುಟುಂಬಸ್ಥರನ್ನು ನಿಂದಿಸಿದ್ದಲ್ಲದೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ ಎಂದು ಬೆಂಗಳೂರು ಮಿರರ್ ವರದಿ ಮಾಡಿದೆ.

ಸದ್ಯ ಅನೀಶ್ ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಾಯಗೊಂಡ ಕುಟುಂಬದ ಇತರ ಸದಸ್ಯರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಿದ್ದು ಮೂವರು ತಲೆಮರೆಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT