ಅಂಗನವಾಡಿ ಕಾರ್ಯಕರ್ತೆ. 
ರಾಜ್ಯ

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌; ಶೀಘ್ರದಲ್ಲೇ ಗೌರವಧನ ಹೆಚ್ಚಳ!

ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ, ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಕೂಡಲೇ ಭರ್ತಿ ಮಾಡಬೇಕೆಂದು ಪ್ರತಿಪಕ್ಷ ನಾಯಕರು ಧ್ವನಿಗೂಡಿಸಿದರು.

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸರ್ಕಾರದ ಮುಂದಾಗಿದ್ದು, ಶೀಘ್ರದಲ್ಲೇ ಹೆಚ್ಚಳ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬುಧವಾರ ಹೇಳಿದರು.

ಬುಧವಾರ ಪ್ರಶ್ನೋತ್ತರ ಕಲಾಪದಲ್ಲಿ ಬಸವನಗುಡಿಯ ಬಿಜೆಪಿ ಸದಸ್ಯ ಎಲ್. ಎ. ರವಿ ಸುಬ್ರಹ್ಮಣ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ, ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಕೂಡಲೇ ಭರ್ತಿ ಮಾಡಬೇಕೆಂದು ಪ್ರತಿಪಕ್ಷ ನಾಯಕರು ಧ್ವನಿಗೂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನೇಮಕಾತಿ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು.

2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳ ಮಾಡಿದ್ದರು. ಆದಾದ ಮೇಲೆ ಗೌರವ ಧನ ಹೆಚ್ಚಳವನ್ನೇ ಮಾಡಿಲ್ಲ, ಈಗ ಗೌರವ ಧನ ಹೆಚ್ಚಳದ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಅಂಗನವಾಡಿ ಕೇಂದ್ರಗಳ ಕಟ್ಟಡಗಳ ಬಾಡಿಗೆ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪ್ರಸಕ್ತ ಸಾಲಿನ ಬಾಡಿಗೆ ಪಾವತಿಗೆ ಅನುದಾನದ ಕೊರತೆ ಇಲ್ಲ. ಈಗಾಗಲೇ 2024-25ನೇ ಸಾಲಿನ ಡಿಸೆಂಬರ್ ತಿಂಗಳವರೆಗೆ ಅಂಗನವಾಡಿ ಕೇಂದ್ರಗಳ ಬಾಡಿಗೆ ಮೊತ್ತವನ್ನು ಪಾವತಿಸಲಾಗಿದೆ ಎಂದರು.

ಅಂಗನವಾಡಿ ಕೇಂದ್ರಗಳ ಮಕ್ಕಳು, ಇತರೆ ಫಲಾನುಭವಿಗಳು ಇಲಾಖೆಯ ಯಾವುದೇ ಸೇವೆಗಳಿಂದ ವಂಚಿತರಾಗದಂತೆ ಕ್ರಮ ವಹಿಸಲಾಗಿದೆ. ಸ್ವಂತ ಕಟ್ಟಡಗಳಿಲ್ಲದ ಪ್ರದೇಶದಲ್ಲಿ ಅಂಗನವಾಡಿಗಳನ್ನು ಬಿಬಿಎಂಪಿ, ಇನ್ನಿತರ ಸರ್ಕಾರಿ ಕಟ್ಟಡಗಳಲ್ಲಿ ನಡೆಸಲಾಗುತ್ತಿದೆ; ಕೆಲವೆಡೆ ಉತ್ತಮ ಮೂಲ ಸೌಕರ್ಯವುಳ್ಳ ಬಾಡಿಗೆ ಕಟ್ಟಡಗಳಲ್ಲೂ ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸಚಿವರು ಸದನಕ್ಕೆ ತಿಳಿಸಿದರು.

ರಾಜ್ಯದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಪ್ರಮಾಣದ ಬಗ್ಗೆ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರು ಕೇಳಿದ ಉಪ ಪ್ರಶ್ನೆಗೆ ಉತ್ತರಿಸಿದ ಸಚಿವರು, 2011ರ ಜನಗಣತಿಯ ಪ್ರಕಾರ, ರಾಜ್ಯದಲ್ಲಿ 20,266 ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ. ಇನ್ನು 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸಮುದಾಯ ಆಧಾರಿತ ಸಂಸ್ಥೆಗಳಿಂದ ಪಡೆದ ಅಂಕಿ ಅಂಶಗಳ ಪ್ರಕಾರ 43,752 ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

SCROLL FOR NEXT