ವಿಧಾನಸಭೆ ಕಲಾಪ 
ರಾಜ್ಯ

ವಿಪಕ್ಷಗಳ ಅಹೋರಾತ್ರಿ ಧರಣಿ: ವಿಧಾನಸಭೆ, ಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಮುಡಾ ಅಕ್ರಮ ಸೈಟ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಚರ್ಚೆಗೆ ಪಟ್ಟುಹಿಡಿದು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಅಹೋರಾತ್ರಿ ಧರಣಿ ನಡೆಸುತ್ತಿದೆ.

ಬೆಂಗಳೂರು: ಮುಡಾ ಅಕ್ರಮ ಸೈಟ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಚರ್ಚೆಗೆ ಪಟ್ಟುಹಿಡಿದು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಅಹೋರಾತ್ರಿ ಧರಣಿ ನಡೆಸುತ್ತಿದೆ.

ಇಂದು ಸಹ ಸದನದಲ್ಲಿ ವಿಪಕ್ಷಗಳು ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಚರ್ಚೆಗೆ ಅವಕಾಶ ನೀಡುವಂತೆ ಗದ್ದಲ ಎಬ್ಬಿಸಿದರು. ಈ ಹಿನ್ನೆಲೆಯಲ್ಲಿ ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

ಜುಲೈ 15ರಂದು ಅಧಿವೇಶನ ಆರಂಭವಾಗಿದ್ದು, ಜುಲೈ 26ರವರೆಗೆ ನಡೆಯಬೇಕಿತ್ತು. ಆದರೆ ವಿಪಕ್ಷಗಳ ಗದ್ದಲದಿಂದಾಗಿ ಒಂದು ದಿನ ಮೊದಲೇ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ. ವಿಧಾನಸಭೆ ಕಲಾಪವನ್ನು ಸ್ಪೀಕರ್ ಯುಟಿ ಖಾದರ್ ಮುಂದೂಡಿದರೆ ವಿಧಾನಪರಿಷತ್ ಕಲಾಪವನ್ನು ಉಪಸಭಾಪತಿ ಪ್ರಾಣೇಶ್ ಮುಂದೂಡಿದರು.

ಇಂದು ಬೆಳಿಗ್ಗೆ ಸಹ ಪ್ರತಿಪಕ್ಷಗಳು ಧರಣಿಯನ್ನು ಮುಂದುವರೆಸಿದ್ದರಿಂದ ಸದನದಲ್ಲಿ ಸುಗಮ ಕಲಾಪ ಸಾಧ್ಯವಾಗದೆ ಸದನವನ್ನು ಎರಡು ಬಾರಿ ಮುಂದೂಡಲಾಯಿತು. ಮತ್ತೆ ಕಲಾಪ ಆರಂಭಗೊಂಡ ನಂತರ ವಿಪಕ್ಷಗಳ ಗದ್ದಲದ ನಡುವೆ ಸಭಾಧ್ಯಕ್ಷರು ಕೆಲ ವಿಧೇಯಕಗಳ ಮಂಡನೆ, ಅಂಗೀಕಾರ ಕಲಾಪ ನಡೆಸಿದರು. ನಂತರ ಸದನದ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ