ಸಚಿವ ಸಂತೋಷ್ ಲಾಡ್ 
ರಾಜ್ಯ

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೊಸೈಟಿ ರಚಿಸಿ ಹೊರಗುತ್ತಿಗೆ ನೌಕರರ ನೇಮಕ: ಸಚಿವ ಸಂತೋಷ್ ಲಾಡ್

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೊಸೈಟಿ ರಚನೆ ಮಾಡುವ ಪ್ರಸ್ತಾಪ ಆರ್ಥಿಕ ಅನುಮೋದನೆಗೆ ಕಳುಹಿಸಲಾಗಿದೆ. ಅನುಮೋದನೆ ಸಿಕ್ಕ ನಂತರ ಆಯಾ ಜಿಲ್ಲೆ ಮೂಲಕ ಹೊರಗುತ್ತಿಗೆ ನೌಕರರಿಗೆ ನೇಮಕ ಮಾಡಲು ಚಾಲನೆ ದೊರೆಯಲಿದೆ.

ಬೆಂಗಳೂರು: ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೊಸೈಟಿ ರಚನೆ ಮಾಡಿ ಹೊರಗುತ್ತಿಗೆ ನೌಕರರನ್ನು ನೇಮಕ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಗುರುವಾರ ಹೇಳಿದರು.

ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಕೆ.ಎಸ್‌. ಬಸವಂತಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೀದರ್‌ ಜಿಲ್ಲೆಯಲ್ಲಿ ಈ ವ್ಯವಸ್ಥೆ ಯಶಸ್ವಿಯಾಗಿದೆ. ಅದೇ ಮಾದರಿಯನ್ನು ಎಲ್ಲ ಕಡೆ ಅನುಸರಿಸುವ ಚಿಂತನೆಯಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೊಸೈಟಿ ರಚನೆ ಮಾಡುವ ಪ್ರಸ್ತಾಪ ಆರ್ಥಿಕ ಅನುಮೋದನೆಗೆ ಕಳುಹಿಸಲಾಗಿದೆ. ಅನುಮೋದನೆ ಸಿಕ್ಕ ನಂತರ ಆಯಾ ಜಿಲ್ಲೆ ಮೂಲಕ ಹೊರಗುತ್ತಿಗೆ ನೌಕರರಿಗೆ ನೇಮಕ ಮಾಡಲು ಚಾಲನೆ ದೊರೆಯಲಿದೆ. ರಾಜ್ಯದಲ್ಲಿ ವಿವಿಧ ಇಲಾಖೆಗಳ ಮೂಲಕ 54 ಸಾವಿರಕ್ಕೂ ಹೆಚ್ಚು ಹೊರಗುತ್ತಿಗೆ ನೌಕರರು ಕೆಲಸ ಮಾಡುತ್ತಿದ್ದಾರೆ. 405 ಸರ್ಕಾರಿ ಇಲಾಖೆಗಳ ಹೊರಗುತ್ತಿಗೆ ಲೈಸೆನ್ಸ್ ನೀಡಲಾಗಿದೆ ಎಂದು ತಿಳಿಸಿದರು.

50 ಜನರ ಹೊರಗುತ್ತಿಗೆ ವೇತನ ಪಡೆದು 25 ಜನರಿಂದ ಕೆಲಸ ಮಾಡುತ್ತಿರುವುದು ಸೇರಿದಂತೆ ಹೊರಗುತ್ತಿಗೆ ನೌಕರರ ವಿಚಾರದಲ್ಲಿ ಹಲವು ಸಮಸ್ಯೆಗಳಿರುವುದು ಗಮನಕ್ಕೆ ಬಂದಿದೆ. ಆ ಕಾರಣಕ್ಕಾಗಿ ಈ ಹೊಸ ಪದ್ಧತಿಯನ್ನು ಜಾರಿ ಮಾಡಲು ಉದ್ದೇಶಿಸಲಾಗಿದೆ. ಇದರಿಂದ ಹೊರಗುತ್ತಿಗೆ ಏಜೆನ್ಸಿಗಳಿಗೆ ಕಡಿವಾಣ ಬೀಳಲಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT