ಬಂಧನ 
ರಾಜ್ಯ

ಬೆಂಗಳೂರು ಜೈಲಿನಿಂದ ತಪ್ಪಿಸಿಕೊಂಡ ಆರು ವರ್ಷಗಳ ನಂತರ ಸಿಕ್ಕಿಬಿದ್ದ ಅಪರಾಧಿ: ಮತ್ತೆ ಸೆರೆಮನೆ ವಾಸ ಫಿಕ್ಸ್!

2015ರಲ್ಲಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಆರೋಪಿ ದಿನೇಶ್ (32) ಮೊಪೆಡ್‌ನಲ್ಲಿದ್ದ ಗುರುಪ್ಪ (54) ಅವರಿಗೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿದ್ದರಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಬೆಂಗಳೂರು: ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಟ್ರಾಫಿಕ್ ಕೋರ್ಟ್‌ನಿಂದ ಪರಾರಿಯಾಗಿದ್ದ ರಸ್ತೆ ಅಪಘಾತದಲ್ಲಿ ಶಿಕ್ಷೆಗೊಳಗಾಗಿದ್ದ ಅಪರಾಧಿಯನ್ನು ಜೀವನ್ ಭೀಮಾ ನಗರ ಸಂಚಾರ ಪೊಲೀಸರು ಪತ್ತೆಹಚ್ಚಿದ್ದಾರೆ.

2015ರಲ್ಲಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಆರೋಪಿ ದಿನೇಶ್ (32) ಮೊಪೆಡ್‌ನಲ್ಲಿದ್ದ ಗುರುಪ್ಪ (54) ಅವರಿಗೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿದ್ದರಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಪೊಲೀಸರು ಐಪಿಸಿಯ ಸೆಕ್ಷನ್ 279 (ನಿರ್ಲಕ್ಷ್ಯದ ಸವಾರಿ) ಮತ್ತು 304 (ಎ) (ಸಾವಿಗೆ ಕಾರಣ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. 2018 ರಲ್ಲಿ, 6 ನೇ ಎಂಎಂಟಿಸಿ ನ್ಯಾಯಾಲಯವು ಆತನಿಗೆ 1 ವರ್ಷ 2 ತಿಂಗಳ ಜೈಲು ಶಿಕ್ಷೆ ಮತ್ತು ರೂ 2,000 ದಂಡವನ್ನು ವಿಧಿಸಿತು.

ದಿನೇಶ್ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ 62 ರಲ್ಲಿ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿದರು, ನ್ಯಾಯಾಲಯ ಹಿಂದಿನ ಆದೇಶವನ್ನು ಎತ್ತಿಹಿಡಿದಿತ್ತು. ನಂತರ ದಿನೇಶ್ ಬೆಂಗಳೂರಿನ ತಿಪ್ಪಸಂದ್ರದಲ್ಲಿರುವ ತನ್ನ ನಿವಾಸದಿಂದ ಪರಾರಿಯಾಗಿದ್ದನು. ಅದಾದ ನಂತರ ಕೋವಿಡ್-19 ಸಾಂಕ್ರಾಮಿಕದಿಂದ ತನಿಖೆ ವಿಳಂಬವಾಯಿತು. ನಂತರ, ದಿನೇಶ್‌ನನ್ನು ಹಾಜರುಪಡಿಸಲು ನ್ಯಾಯಾಲಯವು ಆದೇಶಿಸಿತು, ಮತ್ತು ಪೊಲೀಸರು ಅವರ ಕರೆ ಡೇಟಾ ದಾಖಲೆಗಳು (ಸಿಡಿಆರ್) ಮತ್ತು ಟವರ್ ಸ್ಥಳಗಳನ್ನು ಪತ್ತೆಹಚ್ಚಲು ಪ್ರಾರಂಭಿಸಿದರು ಮತ್ತು ಮೇ 1 ರಂದು ತುರುವೇಕೆರೆಯಲ್ಲಿ ಅವನನ್ನು ಪತ್ತೆಹಚ್ಚಿದರು, ಆದರೆ ಆತ ಅಲ್ಲಿಂದ ಮತ್ತೆ ಪೊಲೀಸರಿಂದ ತಪ್ಪಿಸಿಕೊಂಡಿದ್ದ. ಮೇ 30 ರಂದು ಜಕ್ಕನಹಳ್ಳಿಯ ಫಾರ್ಮ್‌ಹೌಸ್‌ನಲ್ಲಿ ಆತನನ್ನು ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈತ ತನ್ನ ಹಿಂದಿನ ಅಪರಾಧಕ್ಕಾಗಿ ಪರಪ್ಪನ ಅಗ್ರಹಾರದಲ್ಲಿರುವ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಜೈಲಿನಲ್ಲಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT