ದಿನೇಶ್ ಗುಂಡೂರಾವ್ 
ರಾಜ್ಯ

ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ಸ್ಪಾಟ್‌; ಸೋಂಕು ಹೆಚ್ಚಿರುವ ಸ್ಥಳಗಳಿಗೆ ಅಧಿಕಾರಿಗಳ ತಂಡ ಭೇಟಿ!

ಡೆಂಗ್ಯೂ ಪ್ರಕರಣಗಳಲ್ಲಿ ಶೇ.50ರಷ್ಟು ಪ್ರಕರಣಗಳು ಬೆಂಗಳೂರಿನಲ್ಲಿಯೇ ಕಂಡುಬರುತ್ತಿವೆ. ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಸತತ ಮಳೆ ಸುರಿಯುತ್ತಿರುವುದರಿಂದ ಡೆಂಗ್ಯೂ ಕಡಿಮೆಯಾಗಬಹುದು. ಆದರೆ, ಬೆಂಗಳೂರಿನಲ್ಲಿ ಇದು ಹೆಚ್ಚಾಗಬಹುದು.

ಬೆಂಗಳೂರು: ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ಬಿಬಿಎಂಪಿ ಅಧಿಕಾರಿಗಳ ಸಹಯೋಗದೊಂದಿಗೆ ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿ ಗುರುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಗಳ ಜತೆ ಸಭೆ ನಡೆಸಿದ ಸಚಿವರು, ಮಳೆ, ಪ್ರವಾಹದ ನಡುವೆ ಡೆಂಗ್ಯೂ ನಿಯಂತ್ರಣದ ಬಗ್ಗೆ ಗಮನ ಕಡಿಮೆಯಾಗಬಾರದು ಎಂದು ಸೂಚನೆ ನೀಡಿದರು.

ಆರೋಗ್ಯ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುತ್ತಿದೆ.‌ ಆದರೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿಲ್ಲ. ಇಷ್ಟರೊಳಗೆ ಡೆಂಗ್ಯೂ ಪಾಸಿಟಿವ್ ಪ್ರಕರಣಗಳಲ್ಲಿ ಇಳಿಮುಖ ಕಂಡುಬರಬೇಕಿತ್ತು. ಪ್ರಕರಣಗಳು ವರದಿಯಾಗುತ್ತಿರುವುದನ್ನು ನೋಡಿದರೆ ಇನ್ನೂ ಎರಡು ತಿಂಗಳು ನಾವು ಅಲರ್ಟ್ ಆಗಿರಬೇಕು. ಹೀಗಾಗಿ ಜಿಲ್ಲಾಡಳಿತ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಹಕಾರ ನೀಡಿ ಡೆಂಗ್ಯೂ ಹತೋಟಿಗೆ ತರುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಹೇಳಿದರು.

ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮ ಅಭಿಯಾನದ ರೀತಿಯಲ್ಲಿ ನಡೆಯಬೇಕು. ಜನರಲ್ಲಿ ಡೆಂಗ್ಯೂ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಲಾಗಿದೆ. ಆದರೆ ಡೆಂಗ್ಯೂ ಹತೋಟಿಗೆ ತರುವ ಕ್ರಮಗಳು ಸ್ಥಳದಲ್ಲಿ ಅನುಷ್ಠಾನಗೊಳ್ಳುವುದು ಅತಿ ಮುಖ್ಯವಾಗಿದೆ.

ವಿಶೇಷವಾಗಿ ಆರೋಗ್ಯ ಇಲಾಖೆಯ ಉಪ ನಿರ್ದೇಶಕರ ಮಟ್ಟದ ಅಧಿಕಾರಿಗಳು ಡೆಂಗ್ಯೂ ಹೆಚ್ಚಿರುವ ಹಾಟ್‌ಸ್ಪಾಟ್‌ಗಳಿಗೆ ಭೇಟಿ ನೀಟಿ ಮೇಲ್ವಿಚಾರಣೆ ನಡೆಸುವಂತೆ ಸಚಿವರು ಸೂಚನೆ ನೀಡಿದರು.

ಕೇವಲ ಭೇಟಿ ಕೊಡುವುದಲ್ಲ. ಎರಡು ಮೂರು ದಿನಗಳವರೆಗೆ ಸ್ಥಳದಲ್ಲೇ ಇದ್ದು ಮಾನಿಟರ್ ಮಾಡಬೇಕು. ಸ್ಥಳದಲ್ಲಿ ಡೆಂಗ್ಯೂ ನಿಯಂತ್ರಣ ಕ್ರಮಗಳು ಅನುಷ್ಠಾನ ಆಗುತ್ತಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ಅಲ್ಲದೇ ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ಬಿಬಿಎಂಪಿ ಅಧಿಕಾರಿಗಳ ಸಹಯೋಗದೊಂದಿಗೆ ಹೆಚ್ಚಿನ ನಿಗಾ ವಹಿಸುವಂತೆ ಸೂಚನೆ ನೀಡಿದರು.

ಡೆಂಗ್ಯೂ ಪ್ರಕರಣಗಳಲ್ಲಿ ಶೇ.50ರಷ್ಟು ಪ್ರಕರಣಗಳು ಬೆಂಗಳೂರಿನಲ್ಲಿಯೇ ಕಂಡುಬರುತ್ತಿವೆ. ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಸತತ ಮಳೆ ಸುರಿಯುತ್ತಿರುವುದರಿಂದ ಡೆಂಗ್ಯೂ ಕಡಿಮೆಯಾಗಬಹುದು. ಆದರೆ, ಬೆಂಗಳೂರಿನಲ್ಲಿ ಇದು ಹೆಚ್ಚಾಗಬಹುದು. ಹೀಗಾಗಿ ಬೆಂಗಳೂರಿನಲ್ಲಿ ಡೆಂಗ್ಯೂ ಹತೋಟಿಗೆ ಒತ್ತು ನೀಡಬೇಕಿದೆ.

ಈ ನಿಟ್ಟಿನಲ್ಲಿ ಬಿಬಿಎಂಪಿ ಅಧಿಕಾರಿಗಳ ಸಭೆ ಕರೆಯುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಡೆಂಗ್ಯೂ ಡೆತ್ ಆಡಿಟ್ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಖಡಕ್ ಆಗಿ ಸೂಚನೆ ನೀಡಿರುವ ಆರೋಗ್ಯ ಸಚಿವರು, ಯಾವುದನ್ನು ಮುಚ್ಚಿಡುವುದು ಬೇಡ. ಡೆಂಗ್ಯೂ ಡೆತ್‌ಗಳಾಗಿದ್ದರೆ ಅದನ್ನು ಡೆಂಗ್ಯೂ ಡೆತ್ ಎಂದೇ ವರದಿ ಸಲ್ಲಿಸುವಂತೆ ಸಚಿವರು ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT