ಜಗ್ಗೇಶ್ 
ರಾಜ್ಯ

ಗಾಣಗಾಪುರ ದೇವಸ್ಥಾನವನ್ನು 'ಪ್ರಸಾದ' ಯೋಜನೆಯಡಿ ತೀರ್ಥಕ್ಷೇತ್ರವಾಗಿ ಅಭಿವೃದ್ಧಿಪಡಿಸಿ: ಸಂಸದ ಜಗ್ಗೇಶ್

ಭೀಮಾ ನದಿ ದಡದಲ್ಲಿರುವ ಪ್ರಮುಖ ಯಾತ್ರಾಸ್ಥಳವಾಗಿರುವ ದೇವಾಲಯದ ಆವರಣ ತುಂಬಾ ಚಿಕ್ಕದಾಗಿದ್ದು, ಸುತ್ತಲೂ ಮನೆ, ಅಂಗಡಿಗಳಿದ್ದು, ಹೆಚ್ಚುತ್ತಿರುವ ಯಾತ್ರಾರ್ಥಿಗಳ ನಿರ್ವಹಣೆ ಹಾಗೂ ಸೂಕ್ತ ಸೌಲಭ್ಯ ಕಲ್ಪಿಸುವುದು ಕಷ್ಟವಾಗುತ್ತಿದೆ.

ಕಲಬುರಗಿ: ಕಲಬುರಗಿ ಜಿಲ್ಲೆಯ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದ ಅಭಿವೃದ್ಧಿಗೆ ‘ಪ್ರಸಾದ’ ಯೋಜನೆಯಡಿ 83.52 ಕೋಟಿ ರು. ಹಣ ಮಂಜೂರು ಮಾಡಬೇಕು ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಜಗ್ಗೇಶ್ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮೇಲ್ಮನೆಯಲ್ಲಿ ಶೂನ್ಯ ವೇಳೆಯಲ್ಲಿ ಕನ್ನಡದಲ್ಲಿ ಮಾತನಾಡಿದ ಅವರು, ಭೀಮಾ ನದಿ ದಡದಲ್ಲಿರುವ ಪ್ರಮುಖ ಯಾತ್ರಾಸ್ಥಳವಾಗಿರುವ ದೇವಾಲಯದ ಮಹತ್ವವನ್ನು ವಿವರಿಸಿದರು. ದೇಶದಾದ್ಯಂತದ ಭಕ್ತರು ಈ ಪವಿತ್ರ ಸ್ಥಳಕ್ಕೆ ಭೇಟಿ ನೀಡುತ್ತಾರೆ ಎಂದರು. ದೇವಸ್ಥಾನದ ಆವರಣ ತುಂಬಾ ಚಿಕ್ಕದಾಗಿದ್ದು, ಸುತ್ತಲೂ ಮನೆ, ಅಂಗಡಿಗಳಿದ್ದು, ಹೆಚ್ಚುತ್ತಿರುವ ಯಾತ್ರಾರ್ಥಿಗಳ ನಿರ್ವಹಣೆ ಹಾಗೂ ಸೂಕ್ತ ಸೌಲಭ್ಯ ಕಲ್ಪಿಸುವುದು ಕಷ್ಟವಾಗುತ್ತಿದೆ ಎಂದು ಹೇಳಿದರು.

ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ವಿಸ್ತರಣೆಗೆ ತುರ್ತು ಕ್ರಮ ಕೈಗೊಳ್ಳಬೇಕು. ಅಭಿವೃದ್ಧಿಗೆ ದತ್ತಾತ್ರೇಯ ಸಮಿತಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದೆ. ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಅವರು ವಿನಂತಿಸಿದರು. ಬಳಿಕ ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು. ದೇವಾಲಯದ ಸಮಗ್ರ ಅಭಿವೃದ್ಧಿಗೆ ‘ಪ್ರಸಾದ’ ಯೋಜನೆಯಡಿ 83.52 ಕೋಟಿ ರೂ.ಗಳನ್ನು ಮಂಜೂರು ಮಾಡುವಂತೆ ಜಿಲ್ಲಾಡಳಿತ ಈಗಾಗಲೇ ಕೇಂದ್ರ ಪ್ರವಾಸೋದ್ಯಮ ಸಚಿವಾಲಯಕ್ಕೆ ಮನವಿ ಮಾಡಿದೆ. ಎಲ್ಲಾ ಅಂಶಗಳನ್ನು ಪರಿಗಣಿಸಿ, ಪ್ರವಾಸೋದ್ಯಮ ಸಚಿವಾಲಯವು ಯೋಜನೆಯಡಿ ಹಣವನ್ನು ಶೀಘ್ರವಾಗಿ ಮಂಜೂರು ಮಾಡಬೇಕು ಎಂದು ಜಗ್ಗೇಶ್ ವಿನಂತಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!