ಮನೆಯ ಗೋಡೆ ಕುಸಿದುಬಿದ್ದಿದೆ. 
ರಾಜ್ಯ

ಧಾರವಾಡ: ಭಾರೀ ಮಳೆಗೆ ಗೋಡೆ ಕುಸಿದು ವ್ಯಕ್ತಿ ಸಾವು; ಪತ್ನಿ-ಪುತ್ರಿ ಆಸ್ಪತ್ರೆಗೆ ದಾಖಲು

ವೆಂಕಟಾಪುರ ಗ್ರಾಮದ ಗುಡಿಸಲಿನ ಮೇಲೆ ಶೆಡ್ ರೀತಿಯ ಮನೆಯ ಗೋಡೆ ಮಳೆಗೆ ಕುಸಿದುಬಿದ್ದಿದೆ. ಇದರಿಂದ ಗುಡಿಸಲಿನಲ್ಲಿದ್ದ ಯಲ್ಲಪ್ಪ ಅವರ ಪತ್ನಿ ಹನುಮವ್ವ ಹಾಗೂ ಪುತ್ರಿ ಯಲ್ಲವ್ವ ಗೋಡೆಯ ತಳಭಾಗದಲ್ಲಿ ಸಿಲುಕಿಕೊಂಡಿದ್ದರು.

ಧಾರವಾಡ: ಹುಬ್ಬಳ್ಳಿ-ಧಾರವಾಡದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಳೆದ ರಾತ್ರಿ ಶೆಡ್ ನ ಗೋಡೆ ಕುಸಿದು ಧಾರವಾಡದ ವೆಂಕಟಾಪುರ ಗ್ರಾಮದಲ್ಲಿ ಯಲ್ಲಪ್ಪ ರಾಮಣ್ಣ ಹಿಪ್ಪಿಯವರ(48ವ) ಎಂಬುವವರು ಮೃತಪಟ್ಟಿದ್ದಾರೆ.

ವೆಂಕಟಾಪುರ ಗ್ರಾಮದ ಗುಡಿಸಲಿನ ಮೇಲೆ ಶೆಡ್ ರೀತಿಯ ಮನೆಯ ಗೋಡೆ ಮಳೆಗೆ ಕುಸಿದುಬಿದ್ದಿದೆ. ಇದರಿಂದ ಗುಡಿಸಲಿನಲ್ಲಿದ್ದ ಯಲ್ಲಪ್ಪ ಅವರ ಪತ್ನಿ ಹನುಮವ್ವ ಹಾಗೂ ಪುತ್ರಿ ಯಲ್ಲವ್ವ ಗೋಡೆಯ ತಳಭಾಗದಲ್ಲಿ ಸಿಲುಕಿಕೊಂಡಿದ್ದರು.

ತಕ್ಷಣವೇ ಸ್ಥಳಕ್ಕೆ ಸುತ್ತಮುತ್ತಲ ನಿವಾಸಿಗಳು ದೌಡಾಯಿಸಿ ಮೂವರನ್ನು ಹೊರತೆಗೆದು ಗಾಯಗೊಂಡವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದ ಯಲ್ಲಪ್ಪ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ.

ಇನ್ನುಳಿದ ಇಬ್ಬರಿಗೆ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾುಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT