ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ; 16 ಸದಸ್ಯರ ನೇಮಕ

ಸಚಿವ ಎಂ.ಬಿ. ಪಾಟೀಲ್ ಪುತ್ರ ಧ್ರುವ್ ಎಂ ಪಾಟೀಲ್, ವಿನಯ್ ಕುಲಕರ್ಣಿ ಪುತ್ರಿ ವೈಶಾಲಿ ಕುಲಕರ್ಣಿ ಮಂಡಳಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ. ರಾಜ್ಯ ವನ್ಯಜೀವಿ ಮಂಡಳಿಗೆ ಸಿಎಂ ಅಧ್ಯಕ್ಷರಾಗಿರುತ್ತಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿರುವ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯನ್ನು 3 ವರ್ಷಗಳ ಅವಧಿಗೆ ಪುನರ್ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಸಂರಕ್ಷಣಾ ವಿಶೇಷ ತಜ್ಞರು, ಜೀವಿಶಾಸ್ತ್ರಜ್ಞರು, ಪರಿಸರವಾದಿಗಳ ಕೋಟಾದಡಿಯಲ್ಲಿ ಸಚಿವರ, ಶಾಸಕರ ಮಕ್ಕಳನ್ನು ನೇಮಕ ಮಾಡಿಕೊಳ್ಳಲಾಗಿದೆ.

ಸಚಿವ ಎಂ.ಬಿ. ಪಾಟೀಲ್ ಪುತ್ರ ಧ್ರುವ್ ಎಂ ಪಾಟೀಲ್, ವಿನಯ್ ಕುಲಕರ್ಣಿ ಪುತ್ರಿ ವೈಶಾಲಿ ಕುಲಕರ್ಣಿ ಮಂಡಳಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ. ರಾಜ್ಯ ವನ್ಯಜೀವಿ ಮಂಡಳಿಗೆ ಸಿಎಂ ಅಧ್ಯಕ್ಷರಾಗಿರುತ್ತಾರೆ. ಅರಣ್ಯ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಸದ್ಯ ಈಗ ಶಾಸಕರ ಕೋಟಾದಡಿ 10 ಸದಸ್ಯರನ್ನ ನೇಮಕ ಮಾಡಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ರಾಮದುರ್ಗ ಶಾಸಕ ಅಶೋಕ್ ಎಂ. ಪಟ್ಟಣ, ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ಸರ್ಕಾರೇತರ ಸಂಸ್ಥೆಗಳ ಕೋಟಾದಡಿ ವೈಲ್ಡ್‌ಲೈಫ್‌ ಅಸೋಸಿಯೇಷನ್‌ ಆಫ್ ಸೌತ್ ಇಂಡಿಯಾ ವನ್ಯಜೀವಿ ಸಂಘದಿಂದ ಸುಶೀಲಗೈನಚಂದ್, ಟೈಗರ್ಸ್‌ ಅನ್‌ಲಿಮಿಟೆಡ್ ವನ್ಯಜೀವಿ ಸಮಾಜದಿಂದ ಸೀಮಾ ಬೇಗಂ ಖಲೀಲ್, ಬೆಂಗಳೂರು ಪರಿಸರ ಟ್ರಸ್ಟ್‌ನಿಂದ ಡಾ.ಆರ್.ವಿ.ದಿನೇಶ್ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಸಂರಕ್ಷಣಾ ವಿಶೇಷ ತಜ್ಞರು, ಜೀವಿಶಾಸ್ತ್ರ ತಜ್ಞರು ಹಾಗೂ ಪರಿಸರವಾದಿಗಳ ಕೋಟಾದಿಂದ ಬೆಂಗಳೂರಿನ ರವೀಂದ್ರ ರಘುನಾಥ, ಡಾ.ರಾಜಕುಮಾರ್ ಎಸ್ ಅಲ್ಲೆ, ಅಜಿತ್ ಕರಿಗುಡ್ಡಯ್ಯ, ಧ್ರುವ ಎಂ ಪಾಟೀಲ್, ಮಲ್ಲಪ್ಪ ಎಸ್ ಅಂಗಡಿ, ವಿರಾಜಪೇಟೆಯಿಂದ ಸಂಕೇತ ಪೂವಯ್ಯ, ಧಾರವಾಡದ ವೈಶಾಲಿ ಕುಲಕರ್ಣಿ, ಬೀದರ್‌ನ ವಿನಯ್ ಕುಮಾರ್ ಮಾಳಿಗೆ, ಮೈಸೂರಿನ ಡಾ.ಸಂತೃಪ್ತ ಅವರನ್ನು ನೇಮಕ ಮಾಡಲಾಗಿದೆ.

ಮಂಡಳಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳು, ಸಂಸ್ಥೆಗಳ ಹತ್ತು ಅಧಿಕಾರಿಗಳು ಪದನಿಮಿತ್ತ ಸದಸ್ಯರು ರಾಜ್ಯದ ವನ್ಯಜೀವಿ ವಿಭಾಗದ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರು ಮಂಡಳಿಯ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT