ಸಾಂದರ್ಭಿಕ ಚಿತ್ರ 
ರಾಜ್ಯ

ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕಾರ್ಯಪಡೆ ರಚನೆ

ಎಲ್ಲಾ ಜಿಲ್ಲಾ ಕೇಂದ್ರದಲ್ಲೂ ತಂಡ ರಚಿಸಿ, ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳಾದ ಕ್ಯಾರಿಬ್ಯಾಗ್, ಚಮಚ, ತಟ್ಟೆ, ಲೋಟ ಇತ್ಯಾದಿ ತಯಾರಿಸುವ ಘಟಕಗಳು, ಗೋದಾಮು ಮತ್ತು ಮಾರಾಟ ಮಳಿಗೆಗಳ ಮೇಲೆ ನಿಗಾ ಇಟ್ಟು, ದಾಳಿ ನಡೆಸಿ ಪ್ರಕರಣ ದಾಖಲಿಸಿ.

ಬೆಂಗಳೂರು: ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ರಾಜ್ಯಾದ್ಯಂತ ಮಾರ್ಷಲ್‌ಗಳನ್ನು ಒಳಗೊಂಡ ಕಾರ್ಯಪಡೆಗಳನ್ನು ರಚಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಶುಕ್ರವಾರ ಹೇಳಿದರು.

ಪರಿಸರ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸಚಿವರು ಈ ನಿರ್ದೇಶನ ನೀಡಿದರು.

ಎಲ್ಲಾ ಜಿಲ್ಲಾ ಕೇಂದ್ರದಲ್ಲೂ ತಂಡ ರಚಿಸಿ, ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳಾದ ಕ್ಯಾರಿಬ್ಯಾಗ್, ಚಮಚ, ತಟ್ಟೆ, ಲೋಟ ಇತ್ಯಾದಿ ತಯಾರಿಸುವ ಘಟಕಗಳು, ಗೋದಾಮು ಮತ್ತು ಮಾರಾಟ ಮಳಿಗೆಗಳ ಮೇಲೆ ನಿಗಾ ಇಟ್ಟು, ದಾಳಿ ನಡೆಸಿ ಪ್ರಕರಣ ದಾಖಲಿಸುವಂತೆ ಸೂಚಿಸಿದರು.

ಏಕ ಬಳಕೆ ಪ್ಲಾಸ್ಟಿಕ್ ಮತ್ತು ಪ್ಲಾಸ್ಟಿಕ್ ಉತ್ಪನ್ನಗಳು ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬರುವುದನ್ನು ನಿಯಂತ್ರಿಸಲು ಸಾರಿಗೆ, ಪೊಲೀಸ್, ವಾಣಿಜ್ಯ ತೆರಿಗೆ ಸೇರಿದಂತೆ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವಂತೆಯೂ ತಿಳಿಸಿದರು.

ಪರಿಸರ ಸ್ನೇಹಿ ಗಣಪತಿಗೆ ಉತ್ತೇಜನ: ಗಣೇಶೋತ್ಸವಕ್ಕೆ ಇನ್ನು ಒಂದು ತಿಂಗಳಷ್ಟೇ ಬಾಕಿ ಇರುವ ಹಿನ್ನೆಲೆಯಲ್ಲಿ ಪಿಓಪಿ ಗಣೇಶಮೂರ್ತಿ ಪೂಜೆ ತ್ಯಜಿಸಲು ಮತ್ತು ಪರಿಸರ ಸ್ನೇಹಿ ಗಣಪತಿ ಮೂರ್ತಿಗಳ ಪೂಜೆಗೆ ಉತ್ತೇಜನ ನೀಡಲು ಸಾಮಾಜಿಕ ಜಾಲ ತಾಣ ಹಾಗೂ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸುವಂತೆ ಇದೇ ವೇಳೆ ಸೂಚಿಸಿದರು.

ಟೈರ್ ಪೈರೋಲಿಸಿಸ್ ಸೇರಿದಂತೆ ಅತಿ ಹೆಚ್ಚು ಇಂಗಾಲ ಮತ್ತು ಇಂಗಾಲದ ಡೈಆಕ್ಸೈಡ್ ಹೊರಸೂಸುವ, ರಾಸಾಯನಿಕ ತ್ಯಾಜ್ಯ ಮತ್ತು ಬಳಸಿದ ತೈಲವನ್ನು ಕೊಳವೆ ಬಾವಿಗೆ ಸುರಿಯುವ, ರಾಸಾಯನಿಕ ಯುಕ್ತ ತ್ಯಾಜವನ್ನು ಜಲ ಮೂಲಗಳಿಗೆ ಸಂಸ್ಕರಿಸದೆ ಹರಿಸುವ ಕೈಗಾರಿಕಾ ಘಟಕಗಳ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸುವಂತೆಯೂ ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT