ಸಾಂದರ್ಭಿಕ ಚಿತ್ರ  
ರಾಜ್ಯ

ದೋಣಿಗಲ್ ನಲ್ಲಿ ಹಳಿ ಮೇಲೆ ಮಣ್ಣು: ಬೆಂಗಳೂರು-ಮಂಗಳೂರು ರೈಲ್ವೆ ಸಂಚಾರ ತಾತ್ಕಾಲಿಕ ರದ್ದು

ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ (16512) ಮತ್ತು ಕಾರವಾರ- ಕೆಎಸ್​ಆರ್​ಬೆಂಗಳೂರು ಎಕ್ಸ್‌ಪ್ರೆಸ್ (16596) ಶೊರ್ನೂರು, ಸೇಲಂ ಜೋಲಾರ್‌ಪೇಟೆ ಮೂಲಕ ಸಂಚರಿಸಿದೆ. ಮುರ್ಡೇಶ್ವರ- ಬೆಂಗಳೂರು ಎಕ್ಸ್‌ಪ್ರೆಸ್ (16586) ಕೂಡ ಇದೇ ಮಾರ್ಗದ ಮೂಲಕ ಸಂಚರಿಸಿದೆ.

ಬೆಂಗಳೂರು: ರಾಜ್ಯಾದ್ಯಂತ ಈ ಬಾರಿ ಮುಂಗಾರು ಮಳೆ ಜೋರಾಗಿದೆ. ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಗೆ ಗುಡ್ಡಗಳು, ಮನೆ ಗೋಡೆ ಕುಸಿದು ಬಿದ್ದು ಹಲವು ಅವಘಡಗಳು ಸಂಭವಿಸಿವೆ.

ಬೆಂಗಳೂರು-ಮಂಗಳೂರು ರೈಲು ಮಾರ್ಗದ ಹಾಸನ ಜಿಲ್ಲೆ ಎಡಕುಮೇರಿ-ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ಮೊನ್ನೆ ಶುಕ್ರವಾರ ಸಂಜೆ ಭೂಕುಸಿತ ಉಂಟಾಗಿ ರೈಲು ಹಳಿಯ ಮೇಲೆ ಮಣ್ಣು ಬಿದ್ದಿದೆ. ಇದರಿಂದ ಕೆಲ ರೈಲುಗಳ ಸಂಚಾರವನ್ನು ನಾಳೆ ಜುಲೈ 29ರವರೆಗೆ ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ರದ್ದಾದ ರೈಲುಗಳು: ಕೆಎಸ್‌ಆರ್ ಬೆಂಗಳೂರು-ಕಣ್ಣೂರು ರೈಲು ಸಂಖ್ಯೆ (16511) ರೈಲು ರದ್ದಾಗಿದೆ.

ಬೆಂಗಳೂರು-ಕಾರವಾರ ಕೆಎಸ್‌ಆರ್ ಎಕ್ಸ್‌ಪ್ರೆಸ್ (16595) ರೈಲು ಸಂಚಾರ ರದ್ದು ಮಾಡಲಾಗಿದೆ.

ಕಣ್ಣೂರು-ಬೆಂಗಳೂರು (16512) ರೈಲು ರದ್ದಾಗಿದೆ.

ಕಾರವಾರ-ಕೆಎಸ್ ಆರ್ ಬೆಂಗಳೂರು ಎಕ್ಸ್‌ಪ್ರೆಸ್ (16596) ರೈಲು ಸಂಚಾರ ತಾತ್ಕಾಲಿಕ್​ ಬಂದ್​

ಬೆಂಗಳೂರು-ಮುರುಡೇಶ್ವರ (16585) ರೈಲು ತಾತ್ಕಾಲಿಕವಾಗಿ ಸಂಚರಿಸುವುದಿಲ್ಲ.

ಮುರ್ಡೇಶ್ವರ- ಬೆಂಗಳೂರು (16586) ರೈಲನ್ನು ರದ್ದುಗೊಳಿಸಲಾಗಿದೆ.ವಿಜಯಪುರ-ಮಂಗಳೂರು ಸೆಂಟ್ರಲ್ ವಿಶೇಷ ಎಕ್ಸ್‌ಪ್ರೆಸ್ (07377) ರೈಲು ರದ್ದು ಮಾಡಲಾಗಿದೆ.

ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ (07377) ರೈಲು ರದ್ದು ಮಾಡಲಾಗಿದೆ.

ಮಂಗಳೂರು ಸೆಂಟ್ರಲ್ -ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ (07378) ರೈಲು ಸಂಚಾರ ಇರುವುದಿಲ್ಲ.

ಮಾರ್ಗ ಬದಲಾವಣೆ: ಕೆಲವು ಮಾರ್ಗಗಳಲ್ಲಿ ಅನಿವಾರ್ಯವಾಗಿ ರೈಲು ಸಂಚರಿಸಬೇಕಾಗಿದ್ದು, ಅದಕ್ಕೆ ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ (16512) ಮತ್ತು ಕಾರವಾರ- ಕೆಎಸ್​ಆರ್​ಬೆಂಗಳೂರು ಎಕ್ಸ್‌ಪ್ರೆಸ್ (16596) ಶೊರ್ನೂರು, ಸೇಲಂ ಜೋಲಾರ್‌ಪೇಟೆ ಮೂಲಕ ಸಂಚರಿಸಿದೆ. ಮುರ್ಡೇಶ್ವರ- ಬೆಂಗಳೂರು ಎಕ್ಸ್‌ಪ್ರೆಸ್ (16586) ಕೂಡ ಇದೇ ಮಾರ್ಗದ ಮೂಲಕ ಸಂಚರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT