ಸಿಎಂ ಜನಸ್ಪಂದನ 
ರಾಜ್ಯ

ಆಗಸ್ಟ್‌ನಲ್ಲಿ 2ನೇ ವಾರದಲ್ಲಿ ಸಿಎಂ ಜನಸ್ಪಂದನ ಕಾರ್ಯಕ್ರಮ

ಆಗಸ್ಟ್ ಎರಡನೇ ವಾರ ಅಥವಾ ಸ್ವಾತಂತ್ರ್ಯೋತ್ಸವದ ನಂತರ ಕಲಬುರಗಿಯಲ್ಲಿ ವಿಭಾಗೀಯ ಮಟ್ಟದ ‘ಜನ ಸ್ಪಂದನ’ ಸಭೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ.

ಕಲಬುರಗಿ: ಆಗಸ್ಟ್ ಎರಡನೇ ವಾರ ಅಥವಾ ಸ್ವಾತಂತ್ರ್ಯೋತ್ಸವದ ನಂತರ ಕಲಬುರಗಿಯಲ್ಲಿ ವಿಭಾಗೀಯ ಮಟ್ಟದ ‘ಜನ ಸ್ಪಂದನ’ ಸಭೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಹೇಳಿದರು.

ಕಲಬುರಗಿ ನಗರದ ಗುಲ್ಬರ್ಗ ವಿಶ್ವವಿದ್ಯಾಲಯ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸ್ಪಂದನ ಸಭೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ಖರ್ಗೆ ನಿನ್ನೆ ಸ್ಥಳ ಪರಿಶೀಲನೆ ನಡೆಸಿದರು.

ಬೆಂಗಳೂರಿನಿಂದ ನೇರವಾಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಳಿಕ ವಿಶ್ವವಿದ್ಯಾಲಯ ಆವರಣಕ್ಕೆ ಭೇಟಿ ನೀಡಿದ ಪ್ರಿಯಾಂಕ್‌ಖರ್ಗೆ ಅವರು, ಸಭೆಯಲ್ಲಿ ಅಹವಾಲುಗಳೊಂದಿಗೆ ಪಾಲ್ಗೊಳ್ಳುವ ಸಾರ್ವಜನಿಕರಿಗೆ ಅನುಕೂಲ ಆಗುವಂತೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಫೌಜಿಯಾತರನ್ನುಮ್‌ಅವರಿಗೆ ನಿರ್ದೇಶನ ನೀಡಿದರು.

ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಹಾಗೂ ಉತ್ತರಕರ್ನಾಟಕ ಭಾಗದ ಬಹುತೇಕಎಲ್ಲ ಜಿಲ್ಲೆಗಳ ಸಾರ್ವಜನಿಕರು ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಈ ವೇಳೆ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ಕುರಿತು ಸಮಗ್ರ ರೂಪುರೇಷೆ ಸಿದ್ದಪಡಿಸಬೇಕೆಂದು ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ ಮತ್ತು ಜೀವನೋಪಾಯಖಾತೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸಹ ಇದೇ ವೇಳೆ ಕೆಲವು ಸಲಹೆಗಳನ್ನು ನೀಡಿದರು.

ಈ ವೇಳೆ ಪೂರ್ವಸಿದ್ಧತೆ ಕುರಿತು ಸಚಿವರಿಗೆ ವಿವರಣೆ ನೀಡಿದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜನರ ಅಹವಾಲುಗಳನ್ನು ಮೊದಲು ನೋಂದಣಿ ಮಾಡಿಕೊಳ್ಳಲಾಗುವುದು.ಆ ಬಳಿಕ ಸಂಬAಧಿಸಿದ ಇಲಾಖೆಯ ಮಳಿಗೆಗೆ ಅರ್ಜಿಗಳನ್ನು ರವಾನಿಸಲಾಗುವುದು.ಆಯಾ ಇಲಾಖೆಯ ಮುಖ್ಯಸ್ಥರು ಮುಖ್ಯಮಂತ್ರಿಗಳಿಗೆ ದೂರುಗಳ ಕುರಿತು ಅಗತ್ಯ ಮಾಹಿತಿ ನೀಡಲಿದ್ದಾರೆ ಎಂದರು.

ಇನ್ನು, ನೂಕುನುಗ್ಗಲು ಉಂಟಾಗದಂತೆ ಶಿಸ್ತುಬದ್ಧ ಪ್ರವೇಶಾವಕಾಶ, ಭದ್ರತೆ ಮತ್ತು ವಾಹನಗಳ ಪಾರ್ಕಿಂಗ್ ವ್ಯವಸ್ಥೆಗೂ ಅಗತ್ಯಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್, ಐಜಿಪಿ ಅಜಯ್ ಹಿಲೊರಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಅಧಿಕಾರಿ ಭಂವರ್‌ಸಿಂಗ್ ಮೀನಾ, ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಭುವನೇಶ್ ಪಾಟೀಲ್, ಡಿಸಿಪಿ ಕನಿಕಾ ಸಿಕ್ರಿವಾಲ್, ಅಪರ ಜಿಲ್ಲಾಧಿಕಾರಿರಾಯಪ್ಪ ಹುಣಸಗಿ, ತಹಸೀಲ್ದಾರ್ ನಾಗಮ್ಮಕಟ್ಟಿಮನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT