ಸಾ ರಾ ಮಹೇಶ್ 
ರಾಜ್ಯ

ಮುಡಾಗೆ ಒಂದೇ ಒಂದು ಶಿಫಾರಸು ಪತ್ರ ಕೊಟ್ಟಿಲ್ಲ: ಸಾ.ರಾ.ಮಹೇಶ್

ದಟ್ಟಗಳ್ಳಿಯ ನಂಬರ್‌ 133/3 ಅಲ್ಲಿ 9 ಗುಂಟೆ, ಬೋಗಾದಿಯಲ್ಲಿ 2.11 ಎಕರೆ ಜಾಗವನ್ನು ಕೊಟ್ಟಿದ್ದೇನೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ. ಹಾಗಾದರೇ ಆ ಎರಡು ಜಾಗ ಯಾರ ಹೆಸರಿನಲ್ಲಿದೆ ಎಂಬುದನ್ನು ಸಚಿವರು ಹೇಳಲಿ.

ಬೆಂಗಳೂರು: ಮುಡಾಗೆ ನಾನು ಒಂದೇ ಒಂದು ಶಿಫಾರಸು ಪತ್ರ ಕೊಟ್ಟಿಲ್ಲ. ಪಟ್ಟಿಯಲ್ಲಿ ನನ್ನ ಹೆಸರು ಹೇಗೆ ಬಂತು ಎಂಬುದು ಗೊತ್ತಿಲ್ಲ. ನಾನು ಶಿಫಾರಸು ಪತ್ರ ಕೊಟ್ಟಿದ್ದೇ ನಿಜವಾದರೆ ಬಹಿರಂಗಪಡಿಸಿ ಎಂದು ಜೆಡಿಎಸ್​ (JDS) ಮಾಜಿ ಶಾಸಕ ಸಾ.ರಾ.ಮಹೇಶ್​ ಅವರು ಸವಾಲು ಹಾಕಿದ್ದಾರೆ.

ಮುಡಾದಲ್ಲಿ 50:50 ಅನುಪಾತದ ಬದಲಿ ನಿವೇಶನ ಹಗರಣದಲ್ಲಿ ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ ನಗರಾಭಿವೃದ್ಧಿ ಸಚಿವರು ಎರಡು ಬಾರಿ ನನಗೆ ಸೈಟ್‌ ಕೊಟ್ಟಿದ್ದೇನೆ ಎಂದು ಜೋರಾಗಿ ನನ್ನ ಹೆಸರು ಹೇಳಿದ್ದಾರೆ. ನನ್ನ ಹೆಸರಿನಲ್ಲಿ ಸೈಟ್‌ ಇರುವುದನ್ನು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್‌ ರುಜುವಾತು ಮಾಡಲಿ ಎಂದು ಸವಾಲು ಹಾಕಿದರು.

ದಟ್ಟಗಳ್ಳಿಯ ನಂಬರ್‌ 133/3 ಅಲ್ಲಿ 9 ಗುಂಟೆ, ಬೋಗಾದಿಯಲ್ಲಿ 2.11 ಎಕರೆ ಜಾಗವನ್ನು ಕೊಟ್ಟಿದ್ದೇನೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ. ಹಾಗಾದರೇ ಆ ಎರಡು ಜಾಗ ಯಾರ ಹೆಸರಿನಲ್ಲಿದೆ ಎಂಬುದನ್ನು ಸಚಿವರು ಹೇಳಲಿ. ಜನ ಈ ಬಾರಿ ನನಗೆ ವಿಶ್ರಾಂತಿ ಕೊಟ್ಟಿದ್ದಾರೆ. ಶಿಫಾರಸು ಮಾಡಲು ನಾನು ಶಾಸಕನಲ್ಲ. ಜತೆಗೆ ಮುಡಾ ಸದಸ್ಯನೂ ಅಲ್ಲ. ಯಾರಿಗೆ ಎಷ್ಟು ಸೈಟ್‌ ಕೊಟ್ಟಿದ್ದಾರೆ ಎಂಬುದು ತನಿಖೆಯಾಗಲಿ.

ಸುಮಾರು 1,100 ಸೈಟ್​ಗಳೂ 50:50 ಅನುಪಾತದಲ್ಲಿ ಹಂಚಿಕೆಯಾಗಿವೆ. 500 ಸೈಟ್​ಗಳು ಪ್ರೋತ್ಸಾಹದಾಯಕ ನಿವೇಶನವಾಗಿ ಕೊಟ್ಟಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಮುಡಾ ಆಯುಕ್ತರಾಗಿದ್ದ ಕಾಂತರಾಜ್‌ ಸುಮಾರು 10 ಸಾವಿರ ಸೈಟ್​ಗಳನ್ನು ಮುಡಾ ವ್ಯಾಪ್ತಿಯಲ್ಲಿ ಗುರುತಿಸಿದ್ದರು. ಆ ಸೈಟ್​ಗಳು ಏನಾಗಿವೆ ಎಂಬುದು ತನಿಖೆಯಾಗಲಿ. ಕಾಂಗ್ರೆಸ್​ನವರು ಕೋತಿ ತಿಂದು ಮೇಕೆ ಬಾಯಿಗೆ ಒರಸಿದಂತೆ ಮಾಡುತ್ತಿದ್ದಾರೆ. ನಾನು ನನ್ನ ಸವಾಲಿನಿಂದ ನುಣಿಚಿಕೊಳ್ಳುವ ವ್ಯಕ್ತಿಯಲ್ಲ. ನನಗೆ ಮತ್ತು ನನ್ನ ಕುಟುಂಬಕ್ಕೆ ಮುಡಾದಿಂದ ಸೈಟ್‌ ಕೊಟ್ಟಿದ್ದಾರೆ ಎನ್ನುವುದನ್ನು ತೋರಿಸಲಿ ಎಂದು ಹೇಳಿದರು.

ಯಾರು ಯಾರಿಗೆ ಎಷ್ಟು ಸೈಟ್‌ ಕೊಟ್ಟಿದ್ದಾರೆ ಎಂಬುದು ನನಗೂ ಗೊತ್ತು. ನಗರಾಭಿವೃದಿ ಸಚಿವರು ಕೇಳಿದರೆ ನಾನೇ ಲಿಸ್ಟ್‌ ಕೊಡುತ್ತೇನೆ. ಕೇವಲ ಜೆಡಿಎಸ್‌, ಬಿಜೆಪಿ ಅವರ ಹೆಸರನ್ನು ಹೇಳುತ್ತಿದ್ದೀರಿ. ಕಾಂಗ್ರೆಸ್​ನವರು ಯಾರು ಇಲ್ಲವಾ? ಕಾಂಗ್ರೆಸ್​ನ ನಮ್ಮ ಸ್ನೇಹಿತ ಶಾಸಕ ತನ್ವೀರ್‌ ಸೇಠ್‌ ಈ ವಿಚಾರದಲ್ಲಿ ಬಾಯಿ ಬಿಡಬೇಕು ಎಂದು ತಿರುಗೇಟು ನೀಡಿದರು.

ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮುಡಾದಲ್ಲಿ ಸೈಟ್‌ ಪಡೆಯಲು 40 ವರ್ಷಗಳ ಹಿಂದೆ ಹಣ ಕಟ್ಟಿದ್ದರು. ಅವರಿಗೆ ನಿಗದಿಯಾದ ಆದ ಸೈಟ್‌ ಕಡಿಮೆ ಚದರ ಇತ್ತು ಎಂದು ಆ ಸೈಟ್‌ ಅನ್ನು ವಾಪಾಸ್‌ ಕೊಟ್ಟು ಬದಲಿ ನಿವೇಶನ ಕೊಡಿ ಎಂದು ಅರ್ಜಿ ಸಲ್ಲಿಸಿದ್ದಾರೆ" ಎಂದು ಕುಮಾರಸ್ವಾಮಿ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT