ಕೆಎಎಸ್ ಅಧಿಕಾರಿ ಹಣೆಗೆ ತಿಲಕವಿಟ್ಟ ಸಂಸದ ಸುನೀಲ್ ಬೋಸ್ 
ರಾಜ್ಯ

ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕೆಎಎಸ್ ಅಧಿಕಾರಿ ಹಣೆಗೆ ತಿಲಕವಿಟ್ಟ ಸಂಸದ ಸುನೀಲ್ ಬೋಸ್: Photo ವೈರಲ್

ಆಷಾಢ ಮಾಸದ ಮೂರನೇ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಇಬ್ಬರೂ ಜೊತೆಯಾಗಿ ಬಂದಿದ್ದರು. ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿಯಾಗಿರುವ ಸವಿತಾ ಅವರ ಹಣೆಗೆ ಸಂಸದ ಸುನೀಲ್‌ ಬೋಸ್ ಕುಂಕುಮ ಇರಿಸಿದ್ದಾರೆ. ಈ ವೇಳೆ ಇಬ್ಬರೂ ಗರ್ಭ ಗುಡಿಯಲ್ಲಿ ನಿಂತು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಮೈಸೂರು: ಚಾಮರಾಜನಗರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಸಂಸದ ಸುನೀಲ್ ಬೋಸ್ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿನ ಚಾಮುಂಡೇಶ್ವರಿ ತಾಯಿ ಗರ್ಭಗುಡಿಯಲ್ಲಿಯೇ ಕೆಎಎಸ್ ಅಧಿಕಾರಿ ಹಣೆಗೆ ಕುಂಕುಮ ಇಟ್ಟಿದ್ದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ಆಷಾಢ ಮಾಸದ ಮೂರನೇ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಇಬ್ಬರೂ ಜೊತೆಯಾಗಿ ಬಂದಿದ್ದರು. ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿಯಾಗಿರುವ ಸವಿತಾ ಅವರ ಹಣೆಗೆ ಸಂಸದ ಸುನೀಲ್‌ ಬೋಸ್ ಕುಂಕುಮ ಇರಿಸಿದ್ದಾರೆ. ಈ ವೇಳೆ ಇಬ್ಬರೂ ಗರ್ಭ ಗುಡಿಯಲ್ಲಿ ನಿಂತು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ನೆರವೇರಿಸುವ ವೇಳೆ ಸುನೀಲ್ ಬೋಸ್ ಹಾಗೂ ಕಾಂಗ್ರೆಸ್‌ನ ಅನೇಕ ಬೆಂಬಲಿಗರು ಹಾಜರಿದ್ದರು. ಅವರ ಸಮ್ಮುಖದಲ್ಲೇ ಸವಿತಾ ಅವರ ಹಣೆಗೆ ಸುನೀಲ್‌ಬೋಸ್ ತಿಲಕ ಇರಿಸಿದ್ದಾರೆ.

ಸುನೀಲ್‌ ಬೋಸ್ ಅವರ ನಡೆಯು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮಗೆ ಮದುವೆ ಆಗಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಸುನೀಲ್‌ ಬೋಸ್ ಅಫಿಡವಿಟ್ ಸಲ್ಲಿಸಿದ್ದರು. ಈ ಬಗ್ಗೆ ಚಾಮರಾಜನಗರ ಜಿಲ್ಲೆಯ ಬಿಜೆಪಿ ಸದಸ್ಯರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದರು. ಸುನೀಲ್ ಬೋಸ್ ಅವರಿಗೆ ಮದುವೆಯಾಗಿದೆ. ಆದರೆ ಅವರು ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದರು. ಸುನೀಲ್‌ ಬೋಸ್ ಹಾಗೂ ಸವಿತಾ ಅವರು ಜೊತೆಯಲ್ಲಿ ಇರುವ ಪೋಟೋಗಳನ್ನು ಬಿಜೆಪಿ ಸದಸ್ಯರು ಚುನಾವಣಾ ಆಯೋಗಕ್ಕೆ ಪುರಾವೆಯಾಗಿ ನೀಡಿದ್ದರು. ವೈವಾಹಿಕ ಜೀವನದ ಮಾಹಿತಿಯನ್ನು ಸುನೀಲ್ ಬೋಸ್ ಮರೆಮಾಚಿರುವುದು ಅನುಮಾನಾಸ್ಪದವಾಗಿದೆ. ಸವಿತಾ ಮತ್ತು ಸುನೀಲ್ ಬೋಸ್ ಮದುವೆಯಾಗಿದ್ದು, ಅವರಿಗೆ ಆರು ವರ್ಷದ ಹೆಣ್ಣುಮಗು ಕೂಡ ಇದೆ ಎಂದು ಅವರು ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT