ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

ಎರಡು ವರ್ಷಗಳ ನಂತರ ಕೆಆರ್​ಎಸ್ ಡ್ಯಾಮ್​ ಭರ್ತಿ; ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ವೈದಿಕ ಬಾನು ಪ್ರಕಾಶ್ ಶರ್ಮಾರಿಂದ ಪೂಜಾ ಕಾರ್ಯ ನೆರವೇರಿತು. ಜಲಾಶಯಕ್ಕೆ ಕ್ಷೀರಾಭಿಷೇಕ ಪುಷ್ಪಾರ್ಚನೆ ಮಾಡಲಾಯಿತು.

ಮಂಡ್ಯ: ಎರಡು ವರ್ಷಗಳ ನಂತರ ಭರ್ತಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್​ಎಸ್​ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಅಭಿಜಿತ್​ ಲಗ್ನದಲ್ಲಿ ಬಾಗಿನ ಅರ್ಪಿಸಿದರು.

ಇಂದು ಕೆಆರ್ ಎಸ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ನಂತರ ಬಾಗಿನ ಅರ್ಪಿಸಿದರು. ಮುಖ್ಯಮಂತ್ರಿಗಳಿಗೆ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಚಲುವರಾಯಸ್ವಾಮಿ ಎಚ್.ಸಿ ಮಹದೇವಪ್ಪ, ವೆಂಕಟೇಶ್ ಸೇರಿ ಸೇರಿದಂತೆ ಹಳೇ ಮೈಸೂರು ಭಾಗದ ಸಚಿವರು, ಶಾಸಕರು ಸಾಥ್ ನೀಡಿದರು.

ವೈದಿಕ ಬಾನು ಪ್ರಕಾಶ್ ಶರ್ಮಾರಿಂದ ಪೂಜಾ ಕಾರ್ಯ ನೆರವೇರಿತು. ಜಲಾಶಯಕ್ಕೆ ಕ್ಷೀರಾಭಿಷೇಕ ಪುಷ್ಪಾರ್ಚನೆ ಮಾಡಲಾಯಿತು.

ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅವಧಿಯಲ್ಲಿ ಮೂರನೇ ಬಾರಿಗೆ ಕೆಆರ್​ಎಸ್ ಗೆ ಬಾಗಿನ ಅರ್ಪಿಸಿದ್ದಾರೆ. ಮೊದಲ ಬಾರಿಗೆ ಸಿಎಂ ಆದಾಗ 2013 ಹಾಗೂ 2014 ರಲ್ಲಿ ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದರು. ಆನಂತರ ಬರಗಾಲ ಹಿನ್ನೆಲೆ ಜಲಾಶಯ ಭರ್ತಿಯಾಗಿರಲಿಲ್ಲ. ಎರಡನೇ ಅವಧಿಗೂ ಸಿಎಂ ಆದಗಲೂ 2023ರಲ್ಲಿ ಕನ್ನಂಬಾಡಿ ಅಣೆಕಟ್ಟು ಭರ್ತಿಯಾಗಿರಲಿಲ್ಲ. ಈ ವರ್ಷ ಸಂಪೂರ್ಣ ಭರ್ತಿಯಾಗಿದ್ದು ಬಾಗಿನ ಅರ್ಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

SCROLL FOR NEXT