ಸಂಗ್ರಹ ಚಿತ್ರ 
ರಾಜ್ಯ

ಪೆಡ್ಲರ್'ಗಳ ಪತ್ತೆಗೆ ಪೊಲೀಸರ ಮಾಸ್ಟರ್ ಪ್ಲಾನ್..! ಮಾದಕವಸ್ತು ಬಳಕೆದಾರರನ್ನೇ ಮಾಹಿತಿದಾರರನ್ನಾಗಿ ಬಳಸಲು ಮುಂದು!

ನಗರದಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟಕ್ಕೆ ಕಡಿವಾಣ ಹಾಕುವುದು ನಮ್ಮ ಗುರಿಯಾಗಿದೆ. ಮಾದಕ ದ್ರವ್ಯ ಸೇವನೆ ಮಾಡುವವರ ವಿರುದ್ಧ ಪ್ರಕರಣಗಳ ದಾಖಲಿಸದೆ, ಸಂಖ್ಯೆ ಹೆಚ್ಚಾಗುತ್ತಲೇ ಇರುತ್ತದೆ. ಆದರೆ, ಅವರನ್ನೇ ಮಾಹಿತಿದಾರರನ್ನಾಗಿ ಬಳಕೆ ಮಾಡಿದರೆ, ಪೆಡ್ಲರ್ ಗಳ ಹುಡುಕಾಟ ಸುಲಭವಾಗುತ್ತದೆ.

ಬೆಂಗಳೂರು: ಮಾದಕ ವಸ್ತು ಜಾಲ ಪತ್ತೆ ಹಾಗೂ ಪೆಡ್ಲರ್ ಗಳ ಪತ್ತೆಗೆ ಖಾಕಿ ಪಡೆ ಮಾಸ್ಟರ್‌ ಪ್ಲಾನ್‌ ರೂಪಿಸಿದೆ.

ಮಾದಕ ದ್ರವ್ಯ ಸೇವನೆ ಪ್ರಕರಣಗಳಲ್ಲಿ ಮೊದಲ ಬಾರಿಗೆ ಸಿಕ್ಕಿಬಿದ್ದವರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸುವುದನ್ನು ನಿಲ್ಲಿಸಿ, ಅವರನ್ನೇ ಮಾಹಿತಿದಾರರನ್ನಾಗಿ ಬಳಕೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಇದೇ ವ್ಯಕ್ತಿ ಮತ್ತೆ ಸಿಕ್ಕಿಬಿದ್ದಿದ್ದೇ ಆದರೆ, ಪ್ರಕರಣ ದಾಖಲಿಸಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

ಪೊಲೀಸರ ಈ ಹೊಸ ತಂತ್ರ ಈಗಾಗಲೇ ಕೆಲಸ ಮಾಡಿದೆ ಎನ್ನಲಾಗಿದೆ. ರಾಜ್ಯ ಪೊಲೀಸರು ಕಳೆದ 6 ತಿಂಗಳುಗಲ್ಲಿ 619 ಕೆಜಿ ಡ್ರಗ್ಸ್ ವಶಕ್ಕೆ ಪಡೆದುಕೊಂಡಿದ್ದು, 36 ಮಂದಿ ವಿದೇಶಿ ಪ್ರಜೆಗಳು ಸೇರಿ ಒಟ್ಟು 219 ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಮಾದಕ ಸೇವನೆ ಹಾಗೂ ಪೆಡ್ಲರ್ ಗಳ ವಿರುದ್ಧ ಮಾದಕ ದ್ರವ್ಯ ಸೇವನೆ ಮಾಡುವವರ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟಾನ್ಸ್ (ಎನ್‌ಡಿಪಿಎಸ್) ಕಾಯ್ದೆಯ ಸೆಕ್ಷನ್ 27 ಬಿ ಅಡಿಯಲ್ಲಿ ಪೊಲೀಸರು ಪ್ರಕರಣಗಳನ್ನು ದಾಖಲಿಸುತ್ದಿದ್ದು, ಇದರ ಪರಿಣಾಮವಾಗಿ ನ್ಯಾಯಾಲಯವು 10,000 ರೂಪಾಯಿ ದಂಡ ಅಥವಾ ಆರು ತಿಂಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸುತ್ತದೆ.

ನಗರದಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟಕ್ಕೆ ಕಡಿವಾಣ ಹಾಕುವುದು ನಮ್ಮ ಗುರಿಯಾಗಿದೆ. ಮಾದಕ ದ್ರವ್ಯ ಸೇವನೆ ಮಾಡುವವರ ವಿರುದ್ಧ ಪ್ರಕರಣಗಳ ದಾಖಲಿಸದೆ, ಸಂಖ್ಯೆ ಹೆಚ್ಚಾಗುತ್ತಲೇ ಇರುತ್ತದೆ. ಆದರೆ, ಅವರನ್ನೇ ಮಾಹಿತಿದಾರರನ್ನಾಗಿ ಬಳಕೆ ಮಾಡಿದರೆ, ಪೆಡ್ಲರ್ ಗಳ ಹುಡುಕಾಟ ಸುಲಭವಾಗುತ್ತದೆ. ಇದರಿಂದ ಇಡೀ ನೆಟ್ ವರ್ಕ್'ಗೆ ಕಡಿವಾಣ ಹಾಕಬಹುದಾಗಿದೆ. ಈ ಕ್ರಮದಿಂದಾಗಿ ಕಳೆದ ವರ್ಷದಿಂದ ಡ್ರಗ್ಸ್ ವಶಪಡಿಸಿಕೊಳ್ಳುತ್ತಿರುವುದು ಹಾಗೂ ಪೆಡ್ಲರ್ ಗಳ ಬಂಧನದ ಸಂಖ್ಯೆ ಹೆಚ್ಚಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಹೇಳಿದ್ದಾರೆ.

ಯುವರು ಪ್ರಯೋಗಾರ್ತವಾಗಿಯೂ ಡ್ರಗ್ಸ್ ಸೇವನೆ ಮಾಡುವರು. ಅವರ ವಿರುದ್ಧ ಪ್ರಕರಣ ದಾಖಳಿಸಿದರೆ, ವ್ಯಸನಿ ಅಥವಾ ಪೆಡ್ಲರ್ ಗಳಾಗಿ ಮಾರ್ಪಾಡಾಗಬಹುದು. ಇದರಿಂದ ಅವರ ಜೀವನ ಹಾಳಾಗುತ್ತದೆ. ನಮ್ಮ ಈ ಪ್ರಯೋಗ ಎಲ್ಲರಿಗೂ ಮೇಲೂ ನಡೆಯುವುದಿಲ್ಲ. ಮೊದಲ ಬಾರಿಗೆ ಸಿಕ್ಕಿಹಾಕಿಕೊಂಡವರ ಮೇಲೆ ನಡೆಯುತ್ತದೆ. ಎರಡನೇ ಬಾರಿ ಸಿಕ್ಕಿಹಾಕಿಕೊಂಡವರ ವಿರುದ್ಧ ಪ್ರಕರಣ ದಾಖಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT