ಆರ್. ಅಶೋಕ್ ಸಾಂದರ್ಭಿಕ ಚಿತ್ರ 
ರಾಜ್ಯ

ನಾಳೆಯಿಂದ ನೆರೆ ಪೀಡಿತ ಪ್ರದೇಶಗಳಿಗೆ ಬಿಜೆಪಿ ನಾಯಕರ ಪ್ರವಾಸ: 6 ತಂಡಗಳ ರಚನೆ

ವಿಪಕ್ಷ ನಾಯಕ ಆರ್ ಅಶೋಕ್, ಶಾಸಕರಾದ ಅರಗ ಜ್ಞಾನೇಂದ್ರ, ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ್ ಹಾಗೂ ಬಿ.ಶ್ರೀರಾಮುಲು ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ರಾಜ್ಯದ ನೆರೆ ಪೀಡಿತ ಪ್ರದೇಶಗಳಿಗೆ ರಾಜ್ಯ ಬಿಜೆಪಿ ನಾಯಕರು ನಾಳೆಯಿಂದ ಭೇಟಿ ನೀಡುವ ಉದ್ದೇಶದಿಂದ ಆರು ತಂಡಗಳನ್ನು ರಚಿಸಲಾಗಿದೆ.

ವಿಪಕ್ಷ ನಾಯಕ ಆರ್ ಅಶೋಕ್, ಶಾಸಕರಾದ ಅರಗ ಜ್ಞಾನೇಂದ್ರ, ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ್ ಹಾಗೂ ಬಿ.ಶ್ರೀರಾಮುಲು ಅವರ ನೇತೃತ್ವದಲ್ಲಿನ ತಂಡಗಳು ನೆರೆ ಪೀಡಿತ ಪ್ರದೇಶಗಳಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸಲಿವೆ ಎಂದು ಪ್ರಕಟಣೆ ತಿಳಿಸಿದೆ.

ಆರ್.ಅಶೋಕ್ ನೇತೃತ್ವದ ತಂಡ ಮಂಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಅರಗ ಜ್ಞಾನೇಂದ್ರ ನೇತೃತ್ವದ ತಂಡ ಶಿವಮೊಗ್ಗ ಜಿಲ್ಲೆಯಲ್ಲಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರ ತಂಡ ಕೊಡಗು ಹಾಗೂ ಉಡುಪಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ನೆರೆಯಿಂದಾಗಿರುವ ಹಾನಿ ಕುರಿತು ಪರಿಶೀಲನೆ ನಡೆಸಲಿದೆ.

ಛಲವಾದಿ ನಾರಾಯಣಸ್ವಾಮಿ ನೇತೃತ್ವದ ತಂಡ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅರವಿಂದ್ ಬೆಲ್ಲದ್ ನೇತೃತ್ವದ ತಂಡ ಬಾಗಲಕೋಟೆ, ವಿಜಯಪುರ ಹಾಗೂ ಬಿ.ಶ್ರೀರಾಮುಲು ಅವರ ತಂಡ ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!