ಆರ್. ಅಶೋಕ್ ಸಾಂದರ್ಭಿಕ ಚಿತ್ರ 
ರಾಜ್ಯ

ನಾಳೆಯಿಂದ ನೆರೆ ಪೀಡಿತ ಪ್ರದೇಶಗಳಿಗೆ ಬಿಜೆಪಿ ನಾಯಕರ ಪ್ರವಾಸ: 6 ತಂಡಗಳ ರಚನೆ

ವಿಪಕ್ಷ ನಾಯಕ ಆರ್ ಅಶೋಕ್, ಶಾಸಕರಾದ ಅರಗ ಜ್ಞಾನೇಂದ್ರ, ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ್ ಹಾಗೂ ಬಿ.ಶ್ರೀರಾಮುಲು ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ರಾಜ್ಯದ ನೆರೆ ಪೀಡಿತ ಪ್ರದೇಶಗಳಿಗೆ ರಾಜ್ಯ ಬಿಜೆಪಿ ನಾಯಕರು ನಾಳೆಯಿಂದ ಭೇಟಿ ನೀಡುವ ಉದ್ದೇಶದಿಂದ ಆರು ತಂಡಗಳನ್ನು ರಚಿಸಲಾಗಿದೆ.

ವಿಪಕ್ಷ ನಾಯಕ ಆರ್ ಅಶೋಕ್, ಶಾಸಕರಾದ ಅರಗ ಜ್ಞಾನೇಂದ್ರ, ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ್ ಹಾಗೂ ಬಿ.ಶ್ರೀರಾಮುಲು ಅವರ ನೇತೃತ್ವದಲ್ಲಿನ ತಂಡಗಳು ನೆರೆ ಪೀಡಿತ ಪ್ರದೇಶಗಳಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸಲಿವೆ ಎಂದು ಪ್ರಕಟಣೆ ತಿಳಿಸಿದೆ.

ಆರ್.ಅಶೋಕ್ ನೇತೃತ್ವದ ತಂಡ ಮಂಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಅರಗ ಜ್ಞಾನೇಂದ್ರ ನೇತೃತ್ವದ ತಂಡ ಶಿವಮೊಗ್ಗ ಜಿಲ್ಲೆಯಲ್ಲಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರ ತಂಡ ಕೊಡಗು ಹಾಗೂ ಉಡುಪಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ನೆರೆಯಿಂದಾಗಿರುವ ಹಾನಿ ಕುರಿತು ಪರಿಶೀಲನೆ ನಡೆಸಲಿದೆ.

ಛಲವಾದಿ ನಾರಾಯಣಸ್ವಾಮಿ ನೇತೃತ್ವದ ತಂಡ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅರವಿಂದ್ ಬೆಲ್ಲದ್ ನೇತೃತ್ವದ ತಂಡ ಬಾಗಲಕೋಟೆ, ವಿಜಯಪುರ ಹಾಗೂ ಬಿ.ಶ್ರೀರಾಮುಲು ಅವರ ತಂಡ ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

SCROLL FOR NEXT