ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು, ಮೂವರಿಗೆ ಗಾಯ

ಬನ್ನೇರುಘಟ್ಟ ರಸ್ತೆಯ ಕರಿಯಪ್ಪಹಳ್ಳಿ ಜಂಕ್ಷನ್ ಬಳಿ ವೇಗವಾಗಿ ಬಂದ ಕಾರು ಕರಿಯಪ್ಪಹಳ್ಳಿ ನಿವಾಸಿ ಹಾಗೂ ಟ್ರ್ಯಾಕ್ಟರ್ ಚಾಲಕ ನಲವತ್ತು ವರ್ಷದ ಕುಮಾರ್ ಎಂಬುವವರಿಗೆ ಡಿಕ್ಕಿ ಹೊಡೆದಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.

ಬನ್ನೇರುಘಟ್ಟ ರಸ್ತೆಯ ಕರಿಯಪ್ಪಹಳ್ಳಿ ಜಂಕ್ಷನ್ ಬಳಿ ವೇಗವಾಗಿ ಬಂದ ಕಾರು ಕರಿಯಪ್ಪಹಳ್ಳಿ ನಿವಾಸಿ ಹಾಗೂ ಟ್ರ್ಯಾಕ್ಟರ್ ಚಾಲಕ ನಲವತ್ತು ವರ್ಷದ ಕುಮಾರ್ ಎಂಬುವವರಿಗೆ ಡಿಕ್ಕಿ ಹೊಡೆದಿದೆ. ನೇಪಾಳ ಮೂಲದ ಕರಿಯಪ್ಪಹಳ್ಳಿ ನಿವಾಸಿಗಳಾದ ಕುಮಾರ್ ಮತ್ತು ಸವಿತಾ ಬಾಗ್ ಹಾಗೂ ಚಂಪಕಾ ಎಂಬ ಇಬ್ಬರು ಮಹಿಳೆಯರು ರಸ್ತೆ ದಾಟುತ್ತಿದ್ದಾಗ ಜಿಗಣಿ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದು, ದಿನಗೂಲಿ ಕಾರ್ಮಿಕರಾಗಿದ್ದ ಮಹಿಳೆಯರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ದಾರಿಹೋಕರು ಕಾರು ಚಾಲಕನನ್ನು ಹಿಡಿದಿದ್ದು, ಚಾಲಕನನ್ನು ಜಿಗಣಿ ನಿವಾಸಿ ಹರೀಶ್(26) ಎಂದು ಗುರುತಿಸಲಾಗಿದೆ. ಬನ್ನೇರುಘಟ್ಟ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಇನ್ನೊಂದು ಘಟನೆಯಲ್ಲಿ ಬೆಂಗಳೂರು-ಬಳ್ಳಾರಿ ರಸ್ತೆಯ ಚಿಕ್ಕಸಣ್ಣೆ ಗೇಟ್ ಬಳಿ ರಾತ್ರಿ 10.30ಕ್ಕೆ ಹಾಲಿನ ಟ್ಯಾಂಕರ್ ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಿಕ್ಕಬಳ್ಳಾಪುರದ ಬಕ್ ಸವಾರ ಅಮರನಾಥ ರೆಡ್ಡಿ(45) ಮೃತಪಟ್ಟಿದ್ದಾರೆ. ಆತನ ಹಿಂದೆ ಕುಳಿತಿದ್ದ ದೇವನಹಳ್ಳಿ ನಿವಾಸಿ ನಾಗೇಶ್ ಎಂಬುವವರಿಗೆ ಗಾಯಗಳಾಗಿವೆ.

ಹಾಲಿನ ಟ್ಯಾಂಕರ್ ಏಕಾಏಕಿ ಬಲ ತಿರುವು ಪಡೆದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಕೆಳಗೆ ಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾರಿಹೋಕರು ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿ ವೈದ್ಯರು ರೆಡ್ಡಿ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ನಾಗೇಶ್ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇವನಹಳ್ಳಿ ಸಂಚಾರ ಪೊಲೀಸರು ಲಾರಿ ಚಾಲಕ ಸುರೇಶ್‌ನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT