ಮಾಂಸ ಮಾರಾಟ ನಿಷೇಧ (ಸಾಂದರ್ಭಿಕ ಚಿತ್ರ) 
ರಾಜ್ಯ

ರಾಜಸ್ಥಾನದಿಂದ ರೈಲಿನಲ್ಲಿ ಬಂದಿದ್ದು ಮೇಕೆ ಮಾಂಸ: FSSAI

ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದ ಜತೆಗೆ ನಾಯಿ ಮಾಂಸವನ್ನು ತರಲಾಗಿದೆ ಎಂದು ಪುನೀತ್ ಕೆರೆಹಳ್ಳಿ ಆರೋಪ ಮಾಡಿದ್ದರು.

ಬೆಂಗಳೂರು: ರೈಲು ಮೂಲಕ ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸವಲ್ಲ, ಮೇಕೆ ಮಾಂಸವೆಂದು ಆಹಾರ ಸುರಕ್ಷ|ತೆ ಮತ್ತು ಗುಣಮಟ್ಟ ಇಲಾಖೆ ಖಚಿತಪಡಿಸಿದೆ.

ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದ ಜತೆಗೆ ನಾಯಿ ಮಾಂಸವನ್ನು ತರಲಾಗಿದೆ ಎಂದು ಪುನೀತ್ ಕೆರೆಹಳ್ಳಿ ಆರೋಪ ಮಾಡಿದ್ದರು. ಈ ಬೆಳವಣಿಗೆ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿತ್ತು. ಶುಕ್ರವಾರ ಸಂಜೆಯ ವೇಳೆಗೆ ನಡೆದ ಈ ಘಟನೆ ಕೆಲವೇ ನಿಮಿಷಗಳಲ್ಲಿ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು.

ವಿವಾದವಾಗುತ್ತಿದಂತೆ ಆರೋಗ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ಕೋಟ್ಟು ಮಾಂಸವನ್ನು ವಶಕ್ಕೆ ಪಡೆದು ಅದರ ಪರೀಕ್ಷೆಗಾಗಿ ಲ್ಯಾಬ್‌ಗೆ ಕಳುಹಿಸಿದ್ದರು. ಅದರ ಪರೀಕ್ಷೆ ನಡೆಸಿದ ಪ್ರಯೋಗಾಲಯದವರು ಅದು ಮೇಕೆ ಮಾಂಸ ಎಂದು ವರದಿ ನೀಡಿದ್ದಾರೆ.

ಪ್ರಯೋಗಾಲಯದ ಪರೀಕ್ಷೆಯಲ್ಲಿ ಈ ಮಾಂಸವು ನಾಯಿಯದ್ದಲ್ಲ, ಮೇಕೆಯದ್ದು ಎಂದು ತಿಳಿದುಬಂದಿದೆ ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ರಾಜ್ಯ ಆಯುಕ್ತ ಶ್ರೀನಿವಾಸ್ ಕೆ ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನು ಸಿರೋಹಿ ಮೇಕೆ ಮಾಂಸ ಎಂದು ಗುರುತಿಸಲಾಗಿದೆ, ಇದು ರಾಜಸ್ಥಾನ ಮತ್ತು ಗುಜರಾತ್‌ನ ಕಚ್-ಭುಜ್ ಪ್ರದೇಶದ ತಳಿಯಾಗಿದೆ. ಈ ತಳಿಯ ಮೇಕೆಗಳು ಮಚ್ಚೆಯುಳ್ಳ ದೇಹ ಮತ್ತು ಸ್ವಲ್ಪ ಉದ್ದವಾದ ಬಾಲವನ್ನು ಹೊಂದಿರುವುದು ವಿಶಿಷ್ಟವಾಗಿದೆ, ಹೀಗಾಗಿ ಈ ಮೇಕೆಗಳು ನಾಯಿಯನ್ನು ಹೋಲುತ್ತವೆ ಎಂದು ತಿಳಿಸಿದ್ದಾರೆ.

ಈ ಮೇಕೆಗಳ ಬಳಕೆ ಕಡಿಮೆಯಿದ್ದರೂ, ಉತ್ಪಾದನೆ ಹೆಚ್ಚಾಗಿದೆ. ಹೀಗಾಗಿ ಕೆಲವು ವ್ಯಾಪಾರಿಗಳು ಈ ಮೇಕೆ ಮಾಂಸವನ್ನು ರಾಜಸ್ಥಾನದಿಂದ ಬೆಂಗಳೂರಿಗೆ ರೈಲಿನ ಮೂಲಕ ಸರಬರಾಜು ಮಾಡಿಸಿಕೊಳ್ಳುತ್ತಾರೆಂದು ಎಫ್‌ಎಸ್‌ಎಸ್‌ಎಐ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!