ಸಂಗ್ರಹ ಚಿತ್ರ 
ರಾಜ್ಯ

ಕೊಡಗು: ವಿದ್ಯುತ್ ಸ್ಪರ್ಶಿಸಿ 6 ಜಾನುವಾರುಗಳ ಸಾವು

ತೆರಾಲು ಗ್ರಾಮದ ರೈತ ಬೊಜ್ಜoಗಡ ನಟರಾಜ್ (ನಂದ) ಅವರಿಗೆ ಸೇರಿದ ಜಾನುವಾರುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಈ ದುರ್ಘಟನೆ ಸಂಭವಿಸಿದೆ.

ಮಡಿಕೇರಿ: ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಹರಿದು 6 ಜಾನುವಾರು (ಹಸು, ಕರುಗಳು ) ಬಲಿ ಯಾಗಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಸೋಮವಾರ ನಡೆದಿದೆ.

ತೆರಾಲು ಗ್ರಾಮದ ರೈತ ಬೊಜ್ಜoಗಡ ನಟರಾಜ್ (ನಂದ) ಅವರಿಗೆ ಸೇರಿದ ಜಾನುವಾರುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಈ ದುರ್ಘಟನೆ ಸಂಭವಿಸಿದೆ.

ಮೇಯಲು ಬಿಟ್ಟಿದ್ದ ಜಾನುವಾರುಗಳು ಸಂಜೆ 7 ಗಂಟೆಯಾದರೂ ಮನೆಗೆ ಹಿಂತಿರುಗದಿದ್ದಾಗ ಮಾಲೀಕರು ಜಾನುವಾರುಗಳು ಹುಡುಕಿಕೊಂಡು ಹೋಗಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ.

ಬಳಿಕ ಚಾಮುಂಡೇಶ್ವರಿ ವಿದ್ಯುಚ್ಛಕ್ತಿ ಸರಬರಾಜು ನಿಗಮದ (CESC) ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಘಟನೆ ಬಳಿಕ ಅಧಿಕಾರಿಗಳು ವಿದ್ಯುತ್ ತಂತಿಯಿಂದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು.

ಈ ಸಂಬಂಧ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ವಿದ್ಯುತ್ ಸರಬರಾಜು ಅಧಿಕಾರಿಗಳು ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 3 ವರ್ಷ ವಯೋಮಿತಿ ಸಡಿಲಿಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

OC, CC ಇಲ್ಲದ ಕಟ್ಟಡಗಳಿಗೆ ಒಂದು ಬಾರಿ ವಿನಾಯಿತಿ ನೀಡುವ ಬಗ್ಗೆ ಪರಿಶೀಲಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

'Naqvi vs 3rd umpire': ಭಾರತ ಕ್ರಿಕೆಟ್ ತಂಡ ಅಭಿನಂದಿಸದ ಕಾಂಗ್ರೆಸ್; ಬಿಜೆಪಿ ಟೀಕೆಗೆ ಹೆಂಗಿದೆ ತಿರುಗೇಟು?

ಬಿಷ್ಣೋಯ್ ಗ್ಯಾಂಗ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಕೆನಡಾ!

ಸಾಮಾಜಿಕ-ಆರ್ಥಿಕ ಸಮೀಕ್ಷೆ ಯಾರ ವಿರುದ್ಧವೂ ಅಲ್ಲ; ಬಿಜೆಪಿಯದ್ದು ಮನುವಾದಿ ಮನಸ್ಥಿತಿ

SCROLL FOR NEXT