ಶಾಲಿನಿ ರಜನೀಶ್ 
ರಾಜ್ಯ

ಕೇರಳ ಭೂಕುಸಿತ: ಪರಿಹಾರ ಕಾರ್ಯಗಳಿಗೆ ಕೈಜೋಡಿಸುವಂತೆ ಖಾಸಗಿ ಕಂಪನಿಗಳಿಗೆ ರಾಜ್ಯ ಸರ್ಕಾರ ಮನವಿ

ಇಂತಹ ವಿಪತ್ತಿನ ಸಂದರ್ಭದಲ್ಲಿ ಸಮಾಜದ ಎಲ್ಲಾ ವಲಯಗಳಿಂದ, ವಿಶೇಷವಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ಸಂಘಟಿತ ಮತ್ತು ಉದಾರ ನೆರವಿನ ಅಗತ್ಯವಿದೆ.

ಬೆಂಗಳೂರು: ತಮ್ಮ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ(CSR) ಮೂಲಕ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಭೀಕರ ಭೂಕುಸಿತದ ಪರಿಹಾರ ಕಾರ್ಯಗಳಿಗೆ ಕೈಜೋಡಿಸುವಂತೆ ಕಾರ್ಪೊರೇಟ್ ಕಂಪನಿಗಳಿಗೆ ರಾಜ್ಯ ಸರ್ಕಾರ ಮನವಿ ಮಾಡಿದೆ.

"ಕೇರಳವು ಭೂಕುಸಿತದ ಸಂತ್ರಸ್ಥರ ತಕ್ಷಣದ ಅಗತ್ಯಗಳನ್ನು ಪರಿಹರಿಸಲು ಹಣಕಾಸಿನ ನೆರವು, ಆಹಾರ ಸರಬರಾಜು, ಬಟ್ಟೆ ಮತ್ತು ಮೂಲಭೂತ ಪಡಿತರ ವಿತರಣೆಯ ಅವಶ್ಯಕತೆಯಿದೆ. ಇಂತಹ ವಿಪತ್ತಿನ ಸಂದರ್ಭದಲ್ಲಿ ಸಮಾಜದ ಎಲ್ಲಾ ವಲಯಗಳಿಂದ, ವಿಶೇಷವಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ಸಂಘಟಿತ ಮತ್ತು ಉದಾರ ನೆರವಿನ ಅಗತ್ಯವಿದೆ. ಅಗತ್ಯದ ಸಮಯದಲ್ಲಿ ಖಾಸಗಿ ಕಂಪನಿಗಳು ಯಾವಾಗಲೂ ಆಧಾರ ಸ್ತಂಭಗಳಾಗಿವೆ" ಎಂದು ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಪರಿಹಾರ ಕಾರ್ಯಾಚರಣೆಗಳು ಮತ್ತು ಪುನರ್ನಿರ್ಮಾಣ ಪ್ರಯತ್ನಗಳಿಗೆ ಸಹಾಯ ಮಾಡಲು ಸರ್ಕಾರವು ನಿರ್ದಿಷ್ಟವಾಗಿ ವಿತ್ತೀಯ ದೇಣಿಗೆಗಳನ್ನು ಹುಡುಕುತ್ತಿದೆ ಎಂದು ಅವರು ಹೇಳಿದ್ದಾರೆ.

ಸಂತ್ರಸ್ಥರಿಗೆ ಸುಲಭವಾಗಿ ವಿತರಿಸಬಹುದಾದ ಹಾಳಾಗದ ಆಹಾರ ಪದಾರ್ಥಗಳು; ಮೂಲಭೂತ ನೈರ್ಮಲ್ಯ ಉತ್ಪನ್ನಗಳ ಜೊತೆಗೆ ಅಗತ್ಯ ಉಡುಪುಗಳು ಮತ್ತು ಸ್ಥಳದಲ್ಲಿ ಸಹಾಯ ಮಾಡಲು ಸ್ವಯಂಸೇವಕರ ನಿಯೋಜನೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಕಂಪನಿಗಳು ನೀಡುವ ನೆರವು ಮತ್ತು ಕೊಡುಗೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಅವರೊಂದಿಗೆ ಸಮನ್ವಯ ಸಾಧಿಸುತ್ತಾರೆ ಎಂದು ಶಾಲಿನಿ ರಜನೀಶ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ