ಶಾಲಿನಿ ರಜನೀಶ್ 
ರಾಜ್ಯ

ಕೇರಳ ಭೂಕುಸಿತ: ಪರಿಹಾರ ಕಾರ್ಯಗಳಿಗೆ ಕೈಜೋಡಿಸುವಂತೆ ಖಾಸಗಿ ಕಂಪನಿಗಳಿಗೆ ರಾಜ್ಯ ಸರ್ಕಾರ ಮನವಿ

ಇಂತಹ ವಿಪತ್ತಿನ ಸಂದರ್ಭದಲ್ಲಿ ಸಮಾಜದ ಎಲ್ಲಾ ವಲಯಗಳಿಂದ, ವಿಶೇಷವಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ಸಂಘಟಿತ ಮತ್ತು ಉದಾರ ನೆರವಿನ ಅಗತ್ಯವಿದೆ.

ಬೆಂಗಳೂರು: ತಮ್ಮ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ(CSR) ಮೂಲಕ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಭೀಕರ ಭೂಕುಸಿತದ ಪರಿಹಾರ ಕಾರ್ಯಗಳಿಗೆ ಕೈಜೋಡಿಸುವಂತೆ ಕಾರ್ಪೊರೇಟ್ ಕಂಪನಿಗಳಿಗೆ ರಾಜ್ಯ ಸರ್ಕಾರ ಮನವಿ ಮಾಡಿದೆ.

"ಕೇರಳವು ಭೂಕುಸಿತದ ಸಂತ್ರಸ್ಥರ ತಕ್ಷಣದ ಅಗತ್ಯಗಳನ್ನು ಪರಿಹರಿಸಲು ಹಣಕಾಸಿನ ನೆರವು, ಆಹಾರ ಸರಬರಾಜು, ಬಟ್ಟೆ ಮತ್ತು ಮೂಲಭೂತ ಪಡಿತರ ವಿತರಣೆಯ ಅವಶ್ಯಕತೆಯಿದೆ. ಇಂತಹ ವಿಪತ್ತಿನ ಸಂದರ್ಭದಲ್ಲಿ ಸಮಾಜದ ಎಲ್ಲಾ ವಲಯಗಳಿಂದ, ವಿಶೇಷವಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ಸಂಘಟಿತ ಮತ್ತು ಉದಾರ ನೆರವಿನ ಅಗತ್ಯವಿದೆ. ಅಗತ್ಯದ ಸಮಯದಲ್ಲಿ ಖಾಸಗಿ ಕಂಪನಿಗಳು ಯಾವಾಗಲೂ ಆಧಾರ ಸ್ತಂಭಗಳಾಗಿವೆ" ಎಂದು ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಪರಿಹಾರ ಕಾರ್ಯಾಚರಣೆಗಳು ಮತ್ತು ಪುನರ್ನಿರ್ಮಾಣ ಪ್ರಯತ್ನಗಳಿಗೆ ಸಹಾಯ ಮಾಡಲು ಸರ್ಕಾರವು ನಿರ್ದಿಷ್ಟವಾಗಿ ವಿತ್ತೀಯ ದೇಣಿಗೆಗಳನ್ನು ಹುಡುಕುತ್ತಿದೆ ಎಂದು ಅವರು ಹೇಳಿದ್ದಾರೆ.

ಸಂತ್ರಸ್ಥರಿಗೆ ಸುಲಭವಾಗಿ ವಿತರಿಸಬಹುದಾದ ಹಾಳಾಗದ ಆಹಾರ ಪದಾರ್ಥಗಳು; ಮೂಲಭೂತ ನೈರ್ಮಲ್ಯ ಉತ್ಪನ್ನಗಳ ಜೊತೆಗೆ ಅಗತ್ಯ ಉಡುಪುಗಳು ಮತ್ತು ಸ್ಥಳದಲ್ಲಿ ಸಹಾಯ ಮಾಡಲು ಸ್ವಯಂಸೇವಕರ ನಿಯೋಜನೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಕಂಪನಿಗಳು ನೀಡುವ ನೆರವು ಮತ್ತು ಕೊಡುಗೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಅವರೊಂದಿಗೆ ಸಮನ್ವಯ ಸಾಧಿಸುತ್ತಾರೆ ಎಂದು ಶಾಲಿನಿ ರಜನೀಶ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT