ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಉದ್ಯಮಿ ಮನೆಯಲ್ಲಿ ಚಿನ್ನಾಭರಣ, ವಜ್ರ ಕಳ್ಳತನ; ಮನೆಗೆಲಸದ ಮಹಿಳೆ ಸೇರಿ ಮೂವರ ಬಂಧನ

ಆರೋಪಿಗಳನ್ನು ನೀಲಸಂದ್ರ ನಿವಾಸಿಗಳಾದ ದಿವ್ಯಾ(22) ಮತ್ತು ಆಕೆಯ ಚಿಕ್ಕಮ್ಮ ಮಂಜು(39) ಹಾಗೂ ಮಂಜು ಅವರ ಪರಿಚಯಸ್ಥ ಈಜಿಪುರದ ರೋಮನ್ ಎಂದು ಗುರುತಿಸಲಾಗಿದೆ.

ಬೆಂಗಳೂರು: ಚಿನ್ನಾಭರಣ, ವಜ್ರಾಭರಣ ಕಳವು ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಿರುವ ಮಾರತ್ತಹಳ್ಳಿ ಪೊಲೀಸರು, 30 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ನೀಲಸಂದ್ರ ನಿವಾಸಿಗಳಾದ ದಿವ್ಯಾ(22) ಮತ್ತು ಆಕೆಯ ಚಿಕ್ಕಮ್ಮ ಮಂಜು(39) ಹಾಗೂ ಮಂಜು ಅವರ ಪರಿಚಯಸ್ಥ ಈಜಿಪುರದ ರೋಮನ್ ಎಂದು ಗುರುತಿಸಲಾಗಿದೆ.

ದಿವ್ಯಾ ಎಂಬ ಮಹಿಳೆ ಉದ್ಯಮಿ ವಿಕ್ರಮ ವೈದ್ಯನಾಥನ್ ಅವರ ನಿವಾಸದಲ್ಲಿ ಮನೆಗೆಲಸ ಮಾಡುತ್ತಿದ್ದರು. ಜುಲೈ 14 ರಂದು ವೈದ್ಯನಾಥನ್ ಅವರು ತಮ್ಮ ಮನೆಯಿಂದ 60 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣಗಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು ಮತ್ತು ಅವರ ಮನೆಯಲ್ಲಿ ಕೆಲಸ ಮಾಡುವ ಏಳು ಜನರ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಎಲ್ಲಾ ಕೆಲಸಗಾರನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಬಳಿಕ ದಿವ್ಯಾಳನ್ನು ಕಸ್ಟಡಿಗೆ ಪಡೆದರು. ವಿಚಾರಣೆ ವೇಳೆ ದಿವ್ಯಾ ಚಿನ್ನಾಭರಣ ಕದ್ದು ತನ್ನ ಚಿಕ್ಕಮ್ಮ ಮಂಜುಗೆ ನೀಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ನಂತರ ಮಂಜು ಅವರು ಚಿನ್ನಾಭರಣವನ್ನು ರೋಮನ್‌ಗೆ ನೀಡಿದ್ದು, ಅವರು ವಿವಿಧ ಆಭರಣ ಅಂಗಡಿಗಳಲ್ಲಿ ಚಿನ್ನವನ್ನು ಮಾರಾಟ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸರು ದಿವ್ಯಾ ಅವರ ಮನೆಯಲ್ಲಿ ವಾಚ್ ಮತ್ತು ಚಿನ್ನದ ಸರ ಮತ್ತು ಈಜಿಪುರದ ವಿವಿಧ ಅಂಗಡಿಗಳಿಂದ 30 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT