ಒಡಂಬಡಿಕೆಗೆ ಸಹಿ ಹಾಕಿದ ಸಚಿವ ಎಂ.ಬಿ. ಪಾಟೀಲ್ 
ರಾಜ್ಯ

ಸನ್ಸೇರಾ ಕಂಪನಿಯಿಂದ ರಾಜ್ಯದಲ್ಲಿ 2,100 ಕೋಟಿ ರೂ ಹೂಡಿಕೆ, ಒಡಂಬಡಿಕೆಗೆ ಸಹಿ

ಖನಿಜ ಭವನದಲ್ಲಿ ನಡೆದ ಸಮಾರಂಭದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಮತ್ತು ಸೆನ್ಸೇರಾ ಕಂಪನಿಯ ಸಿಇಒ ಶೇಖರ್ ವಾಸನ್ ಒಡಂಬಡಿಕೆಗೆ ಸಹಿ ಹಾಕಿದರು.

ಬೆಂಗಳೂರು: ವಾಹನಗಳ ಮತ್ತು ವೈಮಾನಿಕ‌ ಬಿಡಿಭಾಗಗಳನ್ನು ತಯಾರಿಸುವ ಸನ್ಸೇರಾ ಕಂಪನಿಯು ರಾಜ್ಯದಲ್ಲಿ ರೂ. 2,100 ಕೋಟಿ ಹೂಡಲಿದೆ. ಈ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಅವರ ಸಮ್ಮುಖದಲ್ಲಿ ಬುಧವಾರ ಒಡಂಬಡಿಕೆಗೆ ಅಂಕಿತ ಹಾಕಲಾಯಿತು.

ಖನಿಜ ಭವನದಲ್ಲಿ ನಡೆದ ಸಮಾರಂಭದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಮತ್ತು ಸೆನ್ಸೇರಾ ಕಂಪನಿಯ ಸಿಇಒ ಶೇಖರ್ ವಾಸನ್ ಒಡಂಬಡಿಕೆಗೆ ಸಹಿ ಹಾಕಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸನ್ಸೇರಾ ಎಂಜಿನಿಯರಿಂಗ್ ಲಿಮಿಟೆಡ್ ಸಂಸ್ಥೆಯು ಮುಂದಿನ ಐದು ವರ್ಷಗಳಲ್ಲಿ ಹಂತಹಂತವಾಗಿ ಈ ಹೂಡಿಕೆ ಮಾಡಲಿದೆ. ಇದರಿಂದ 3,500 ಉದ್ಯೋಗಗಳು ಸೃಷ್ಟಿ ಆಗಲಿವೆ ಎಂದರು.

ಕಂಪನಿಯು ರಾಮನಗರ ಜಿಲ್ಲೆಯ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 55 ಎಕರೆ ಪ್ರದೇಶದಲ್ಲಿ ತನ್ನ ಉತ್ಪಾದನಾ ಘಟಕ ಮತ್ತು ತರಬೇತಿ ಕೇಂದ್ರ ಆರಂಭಿಸಲಿದೆ. ಇದರಿಂದ ರಾಜ್ಯದ ರಫ್ತು ವಹಿವಾಟಿಗೂ ಅನುಕೂಲ ಆಗಲಿದ್ದು, ಸ್ಥಳೀಯರ ಕೌಶಲ ವೃದ್ಧಿಯಾಗಲಿದೆ. ಕಂಪನಿಯು ದೇಶದಲ್ಲಿ 16 ತಯಾರಿಕಾ ಘಟಕಗಳನ್ನು ಹೊಂದಿದ್ದು, ಅವುಗಳ ಪೈಕಿ 12 ಘಟಕಗಳು ರಾಜ್ಯದಲ್ಲೇ ಇವೆ ಎಂದು ಅವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಾಣಿಜ್ಯ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕಂಪನಿಯ ಜಂಟಿ ವ್ಯವಸ್ಥಾಪಕ ನಿರ್ದೇಶಕ ಎಫ್‌. ಆರ್‌. ಸಿಂಘ್ವಿ ಮತ್ತಿತರರು ಉಪಸ್ಥಿತರಿದ್ದರು.

ಓಟಿಸ್ ಕಂಪನಿಯಿಂದ ರೂ.135 ಕೋಟಿ ಹೂಡಿಕೆ: ಎಲಿವೇಟರುಗಳನ್ನು ತಯಾರಿಸುವ ಓಟಿಸ್ ಕಂಪನಿ ಕೂಡ ರಾಜ್ಯದಲ್ಲಿ 135 ಕೋಟಿ ರೂಪಾಯಿ ಹೂಡಲು ಒಲವು ವ್ಯಕ್ತಪಡಿಸಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ಸಂಬಂಧವಾಗಿ ಕಂಪನಿಯ ಹಿರಿಯ ನಿರ್ದೇಶಕ ರವಿಶಂಕರ್ ನೇತೃತ್ವದ ತಂಡದೊಂದಿಗೆ ಮಾತುಕತೆ ನಡೆಸಿದರು. ಇದಕ್ಕಾಗಿ ಕಂಪನಿಯು ಹಾರೋಹಳ್ಳಿಯಲ್ಲಿ 12 ಎಕರೆ ಭೂಮಿಯನ್ನು ಕೇಳಿದ್ದು, ಇದನ್ನು ಒದಗಿಸಲಾಗುವುದು. ಇದರಿಂದ 200ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ ಆಗಲಿದೆ ಎಂದು ಅವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT