ರಾಹುಲ್ ಗಾಂಧಿ  
ರಾಜ್ಯ

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

ಪ್ರಕರಣದ ಕಕ್ಷಿದಾರರಾಗಿರುವ ರಾಹುಲ್ ಗಾಂಧಿ ಅವರು ಇಂದು ಹಾಜರಾಗುವುದಾಗಿ ನ್ಯಾಯಾಲಯಕ್ಕೆ ಹೇಳಿಕೆ ನೀಡಿದ್ದರೂ ಗೈರುಹಾಜರಾಗಿದ್ದರು.

ಬೆಂಗಳೂರು: ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೇಶವ ಪ್ರಸಾದ್ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸುವ ಕುರಿತ ತೀರ್ಪಿನ ಆದೇಶವನ್ನು ಕರ್ನಾಟಕದ ವಿಶೇಷ ಸಂಸದ/ಶಾಸಕ ನ್ಯಾಯಾಲಯ ಶನಿವಾರ ಅಪರಾಹ್ನಕ್ಕೆ ಕಾಯ್ದಿರಿಸಿದೆ.

ಇದೇ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನ್ಯಾಯಾಲಯಕ್ಕೆ ಇಂದು ಬೆಳಗ್ಗೆ ಹಾಜರಾಗಿ ಜಾಮೀನು ಪಡೆದರು. ಪ್ರಕರಣದ ಕಕ್ಷಿದಾರರಾಗಿರುವ ರಾಹುಲ್ ಗಾಂಧಿ ಅವರು ಇಂದು ಹಾಜರಾಗುವುದಾಗಿ ನ್ಯಾಯಾಲಯಕ್ಕೆ ಹೇಳಿಕೆ ನೀಡಿದ್ದರೂ ಗೈರುಹಾಜರಾಗಿದ್ದರು.

ಇಂದು ಲೋಕಸಭೆ ಚುನಾವಣೆಯ ಏಳನೇ ಹಂತದ ಮತದಾನ ಮತ್ತು ಇಂಡಿಯಾ ಬ್ಲಾಕ್ ನಾಯಕರ ಸಭೆಯಿಂದಾಗಿ ತಮ್ಮ ಕಕ್ಷಿದಾರರು ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ರಾಹುಲ್ ಗಾಂಧಿ ಪರ ವಕೀಲ ಎಸ್.ಎ.ಅಹ್ಮದ್ ಕೋರ್ಟ್ ಗೆ ವಿವರ ನೀಡಿದರು. ಜೂನ್ 7 ರಂದು ರಾಹುಲ್ ಗಾಂಧಿ ಹಾಜರಾಗಲಿದ್ದಾರೆ ಎಂದು ಅವರು ನ್ಯಾಯಾಲಯಕ್ಕೆ ಭರವಸೆ ನೀಡಿದರು.

ರಾಹುಲ್ ಗಾಂಧಿ ಪರ ಮತ್ತೊಬ್ಬ ವಕೀಲ ರಮೇಶ್ ಬಾಬು, ಜೂನ್ 7ರವರೆಗೆ ಆದೇಶ ಹೊರಡಿಸದಂತೆ ನ್ಯಾಯಾಲಯಕ್ಕೆ ಮನವಿ ಮಾಡಿ ರಾಹುಲ್ ಗಾಂಧಿಗೆ ಹಾಜರಾಗಲು ಮತ್ತೊಂದು ದಿನಾಂಕವನ್ನು ನೀಡುವಂತೆ ಕೋರಿದರು.

ಬಿಜೆಪಿ ಪರ ವಕೀಲ ವಿನೋದ್ ಕುಮಾರ್ ಈ ಬೇಡಿಕೆಗಳಿಗೆ ಆಕ್ಷೇಪ ವ್ಯಕ್ತಪಡಿಸಿ ರಾಹುಲ್ ಗಾಂಧಿ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸುವಂತೆ ನ್ಯಾಯಾಲಯವನ್ನು ಒತ್ತಾಯಿಸಿದರು. ನ್ಯಾಯಾಲಯಕ್ಕೆ ಹಾಜರಾಗಲು ಮೂರನೇ ಅವಕಾಶ ನೀಡುವ ಅಧಿಕಾರವಿಲ್ಲ ಎಂದು ಅವರು ವಾದಿಸಿದರು.

ನ್ಯಾಯಾಲಯಕ್ಕೆ ಹಾಜರಾಗಲು ಸಮಯಾವಕಾಶ ನೀಡುವ ಅಧಿಕಾರ ನಿಜವಾಗಿಯೂ ಇದೆ ಎಂದು ವಕೀಲ ಅಹ್ಮದ್ ಪ್ರತಿವಾದಿಸಿದರು. ಕಾಲಾವಕಾಶ ನೀಡುವ ನ್ಯಾಯಾಲಯದ ಅಧಿಕಾರದ ಕುರಿತು ನ್ಯಾಯಾಲಯವು ಇಬ್ಬರೂ ವಕೀಲರನ್ನು ಪ್ರಶ್ನಿಸಿತು. ಅವರ ವಾದವನ್ನು ಆಲಿಸಿದ ನ್ಯಾಯಾಲಯವು ಈ ವಿಷಯದ ಬಗ್ಗೆ ತನ್ನ ಆದೇಶವನ್ನು ಕಾಯ್ದಿರಿಸಿ ಮುಂದೂಡಿತು.

ಕೇಶವ್ ಪ್ರಸಾದ್ ಅವರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಯಲ್ಲಿ, ಹಿಂದಿನ ಬಿಜೆಪಿ ಸರ್ಕಾರವು ಸರ್ಕಾರಿ ಯೋಜನೆಗಳನ್ನು ಒದಗಿಸಲು 40 ಪ್ರತಿಶತ ಕಮಿಷನ್ ವಿಧಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪೂರ್ಣ ಪುಟದ ಜಾಹೀರಾತುಗಳನ್ನು ಪ್ರಕಟಿಸುವ ಮೂಲಕ ಅಪ ಪ್ರಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ