ರಾಹುಲ್ ಗಾಂಧಿ  
ರಾಜ್ಯ

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

ಪ್ರಕರಣದ ಕಕ್ಷಿದಾರರಾಗಿರುವ ರಾಹುಲ್ ಗಾಂಧಿ ಅವರು ಇಂದು ಹಾಜರಾಗುವುದಾಗಿ ನ್ಯಾಯಾಲಯಕ್ಕೆ ಹೇಳಿಕೆ ನೀಡಿದ್ದರೂ ಗೈರುಹಾಜರಾಗಿದ್ದರು.

ಬೆಂಗಳೂರು: ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೇಶವ ಪ್ರಸಾದ್ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸುವ ಕುರಿತ ತೀರ್ಪಿನ ಆದೇಶವನ್ನು ಕರ್ನಾಟಕದ ವಿಶೇಷ ಸಂಸದ/ಶಾಸಕ ನ್ಯಾಯಾಲಯ ಶನಿವಾರ ಅಪರಾಹ್ನಕ್ಕೆ ಕಾಯ್ದಿರಿಸಿದೆ.

ಇದೇ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನ್ಯಾಯಾಲಯಕ್ಕೆ ಇಂದು ಬೆಳಗ್ಗೆ ಹಾಜರಾಗಿ ಜಾಮೀನು ಪಡೆದರು. ಪ್ರಕರಣದ ಕಕ್ಷಿದಾರರಾಗಿರುವ ರಾಹುಲ್ ಗಾಂಧಿ ಅವರು ಇಂದು ಹಾಜರಾಗುವುದಾಗಿ ನ್ಯಾಯಾಲಯಕ್ಕೆ ಹೇಳಿಕೆ ನೀಡಿದ್ದರೂ ಗೈರುಹಾಜರಾಗಿದ್ದರು.

ಇಂದು ಲೋಕಸಭೆ ಚುನಾವಣೆಯ ಏಳನೇ ಹಂತದ ಮತದಾನ ಮತ್ತು ಇಂಡಿಯಾ ಬ್ಲಾಕ್ ನಾಯಕರ ಸಭೆಯಿಂದಾಗಿ ತಮ್ಮ ಕಕ್ಷಿದಾರರು ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ರಾಹುಲ್ ಗಾಂಧಿ ಪರ ವಕೀಲ ಎಸ್.ಎ.ಅಹ್ಮದ್ ಕೋರ್ಟ್ ಗೆ ವಿವರ ನೀಡಿದರು. ಜೂನ್ 7 ರಂದು ರಾಹುಲ್ ಗಾಂಧಿ ಹಾಜರಾಗಲಿದ್ದಾರೆ ಎಂದು ಅವರು ನ್ಯಾಯಾಲಯಕ್ಕೆ ಭರವಸೆ ನೀಡಿದರು.

ರಾಹುಲ್ ಗಾಂಧಿ ಪರ ಮತ್ತೊಬ್ಬ ವಕೀಲ ರಮೇಶ್ ಬಾಬು, ಜೂನ್ 7ರವರೆಗೆ ಆದೇಶ ಹೊರಡಿಸದಂತೆ ನ್ಯಾಯಾಲಯಕ್ಕೆ ಮನವಿ ಮಾಡಿ ರಾಹುಲ್ ಗಾಂಧಿಗೆ ಹಾಜರಾಗಲು ಮತ್ತೊಂದು ದಿನಾಂಕವನ್ನು ನೀಡುವಂತೆ ಕೋರಿದರು.

ಬಿಜೆಪಿ ಪರ ವಕೀಲ ವಿನೋದ್ ಕುಮಾರ್ ಈ ಬೇಡಿಕೆಗಳಿಗೆ ಆಕ್ಷೇಪ ವ್ಯಕ್ತಪಡಿಸಿ ರಾಹುಲ್ ಗಾಂಧಿ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸುವಂತೆ ನ್ಯಾಯಾಲಯವನ್ನು ಒತ್ತಾಯಿಸಿದರು. ನ್ಯಾಯಾಲಯಕ್ಕೆ ಹಾಜರಾಗಲು ಮೂರನೇ ಅವಕಾಶ ನೀಡುವ ಅಧಿಕಾರವಿಲ್ಲ ಎಂದು ಅವರು ವಾದಿಸಿದರು.

ನ್ಯಾಯಾಲಯಕ್ಕೆ ಹಾಜರಾಗಲು ಸಮಯಾವಕಾಶ ನೀಡುವ ಅಧಿಕಾರ ನಿಜವಾಗಿಯೂ ಇದೆ ಎಂದು ವಕೀಲ ಅಹ್ಮದ್ ಪ್ರತಿವಾದಿಸಿದರು. ಕಾಲಾವಕಾಶ ನೀಡುವ ನ್ಯಾಯಾಲಯದ ಅಧಿಕಾರದ ಕುರಿತು ನ್ಯಾಯಾಲಯವು ಇಬ್ಬರೂ ವಕೀಲರನ್ನು ಪ್ರಶ್ನಿಸಿತು. ಅವರ ವಾದವನ್ನು ಆಲಿಸಿದ ನ್ಯಾಯಾಲಯವು ಈ ವಿಷಯದ ಬಗ್ಗೆ ತನ್ನ ಆದೇಶವನ್ನು ಕಾಯ್ದಿರಿಸಿ ಮುಂದೂಡಿತು.

ಕೇಶವ್ ಪ್ರಸಾದ್ ಅವರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಯಲ್ಲಿ, ಹಿಂದಿನ ಬಿಜೆಪಿ ಸರ್ಕಾರವು ಸರ್ಕಾರಿ ಯೋಜನೆಗಳನ್ನು ಒದಗಿಸಲು 40 ಪ್ರತಿಶತ ಕಮಿಷನ್ ವಿಧಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪೂರ್ಣ ಪುಟದ ಜಾಹೀರಾತುಗಳನ್ನು ಪ್ರಕಟಿಸುವ ಮೂಲಕ ಅಪ ಪ್ರಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT