ಡಾ. ಶಾಂತ್ ತಿಮ್ಮಯ್ಯ 
ರಾಜ್ಯ

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಶಾಂತ್ ತಿಮ್ಮಯ್ಯ ವಜಾ!

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಡಾ.ಶಾಂತ್ ಎ ತಿಮ್ಮಯ್ಯ ಅವರನ್ನು ವಜಾಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಡಾ.ಶಾಂತ್ ಎ ತಿಮ್ಮಯ್ಯ ಅವರನ್ನು ವಜಾಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಮಂಡಳಿಯ ಪ್ರಚಾರ ಜಾಹೀರಾತು ನೀಡುವ ಹೆಸರಿನಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪ ಶಾಂತ್ ತಿಮ್ಮಯ್ಯ ಅವರ ಮೇಲಿತ್ತು. ಶುಕ್ರವಾರ ಈ ಸಂಬಂಧ ಅರಣ್ಯ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಬಿ.ಎನ್.ಪ್ರವೀಣ್ ಅವರು ಅಧಿಸೂಚನೆ ಹೊರಡಿಸಿದೆ.ಮುಂದಿನ ಆದೇಶದವರೆಗೆ ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಪಿ.ರವಿ ಅವರನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ಹೆಚ್ಚುವರಿ ಪ್ರಭಾರದಲ್ಲಿರಿಸಿ ನಾಮನಿರ್ದೇಶನ ಮಾಡಿ ಆದೇಶ ಮಾಡಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಂತ್ ತಿಮ್ಮಯ್ಯ ಅವರನ್ನು ನೇಮಕ ಮಾಡಲಾಗಿತ್ತು, ಅವರ ಹುದ್ದೆಯ ಅವಧಿ 2022ರಲ್ಲೇ ಮುಗಿದಿದ್ದು, ಅವರನ್ನು ವಜಾ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಬಳಿಕ ಕೆಎಸ್‍ಪಿಸಿಬಿ ಅಧ್ಯಕ್ಷ ಸ್ಥಾನದಿಂದ ತಮ್ಮ ಅಧಿಕಾರಾವಧಿ ಮೊಟಕುಗೊಳಿಸಿದ್ದ ಕ್ರಮವನ್ನು ಪ್ರಶ್ನಿಸಿ ಶಾಂತ್ ತಿಮ್ಮಯ್ಯ ಅವರು ಇತ್ತೀಚೆಗೆ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು.

ಮಂಡಳಿಯ ಪ್ರಚಾರ ಜಾಹೀರಾತು ನೀಡುವ ಹೆಸರಿನಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪ ಶಾಂತಾ ಎ ತಿಮ್ಮಯ್ಯ ಅವರ ಮೇಲಿತ್ತು. ಕೆಎಸ್​​ಪಿಸಿಬಿಯ ಹಿಂದಿನ ಸದಸ್ಯ ಕಾರ್ಯದರ್ಶಿ ಸೂರಿ ಪಾಯಲ್ ಈ ಸಂಬಂಧ ಸರ್ಕಾರಕ್ಕೆ ದೂರು ನೀಡಿದ್ದರು. ದೂರಿನನ್ವಯ ಸರ್ಕಾರ ಸಮಿತಿ ರಚನೆ ಮಾಡಿ ತನಿಖೆಗೆ ಸೂಚಿಸಿತ್ತು. ತನಿಖೆಯ ವರದಿಯಲ್ಲಿ ಶಾಂತಾ ಎ ತಿಮ್ಮಯ್ಯ ಅಕ್ರಮ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT