ಬೆಂಗಳೂರಿನಲ್ಲಿ ಭಾರಿ ಮಳೆ 
ರಾಜ್ಯ

Bengaluru Rains: ಬೆಂಗಳೂರಿನಲ್ಲಿ ಭಾರಿ ಮಳೆ, ರಸ್ತೆಗಳು ಜಲಾವೃತ್ತ, ಮೇಲ್ಸೇತುವೆ ಕೆಳಗೆ ಆಶ್ರಯ ಪಡೆದ ಸವಾರರು!

ಕೇರಳಕ್ಕೆ ಮುಂಗಾರು ಮಾರುತಗಳು ಅಪ್ಪಳಿಸಿದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಆರ್ಭಟ ಆರಂಭವಾಗಿದ್ದು, ಬಹುತೇಕ ಪ್ರದೇಶಗಳಲ್ಲಿ ಇಂದು ಭಾರಿ ಮಳೆ ಸುರಿಯಲಾರಂಭಿಸಿದೆ.

ಬೆಂಗಳೂರು: ಕೇರಳಕ್ಕೆ ಮುಂಗಾರು ಮಾರುತಗಳು ಅಪ್ಪಳಿಸಿದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಆರ್ಭಟ ಆರಂಭವಾಗಿದ್ದು, ಬಹುತೇಕ ಪ್ರದೇಶಗಳಲ್ಲಿ ಇಂದು ಭಾರಿ ಮಳೆ ಸುರಿಯಲಾರಂಭಿಸಿದೆ.

ವೀಕೆಂಡ್ ಮೂಡ್ ನಲ್ಲಿದ್ದ ಬೆಂಗಳೂರಿಗರಿಗೆ ಸಂಜೆ ಸುರಿದ ಭಾರಿ ಮಳೆ ಕೊಂಚ ಕಿರಿಕಿರಿಯನ್ನುಂಟು ಮಾಡಿದ್ದು, ನಗರದ ಬಹುತೇಕ ಪ್ರದೇಶಗಳಲ್ಲಿ ಇಂದು ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ.

ಬೆಂಗಳೂರಿನ ಶೇಷಾದ್ರಿಪುರಂ, ಶಿವಾನಂದ ಸರ್ಕಲ್, ವಿಜಯನಗರ, ಶಿವಾಜಿನಗರ, ಮೈಸೂರು ರಸ್ತೆ, ಚಾಮರಾಜಪೇಟೆ, ಮಲ್ಲೇಶ್ವರಂ, ವಸಂತನಗರ, ಶಾಂತಿನಗರ, ಜಯನಗರ, ಯಶವಂತಪುರ, ರಾಜಾಜಿನಗರ, ಕೋರಮಂಗಲ ಹಾಗೂ ಎಂಜಿ ರಸ್ತೆ, ಕಬ್ಬನ್ ಪಾರ್ಕ್ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆಯಾಗಿದೆ.

ರಾಜಧಾನಿ ಬೆಂಗಳೂರಲ್ಲಿ ಬಿಡುವು ನೀಡಿದ್ದ ವರುಣ ವಾರದ ನಂತರ ಮತ್ತೆ ಅಬ್ಬರಿಸಿದ್ದು. ಕೇವಲ ಒಂದೂವರೆ ಗಂಟೆಯ ಮಳೆಗೆ ನಗರದ ರಸ್ತೆಗಳು ಜಲಾವೃತಗೊಂಡು ನದಿಯಂತಾಗಿವೆ. ಒಂದೆಡೆ ಭಾರಿ ಮಳೆ ಮತ್ತೊಂದೆಡೆ ರಸ್ತೆಗಳು ಜಲಾವೃತ್ತವಾದ್ದರಿಂದ ವಾಹನ ಸವಾರರು ಪರದಾಡಬೇಕಾಯಿತು. ಹೆಬ್ಬಾಳದಲ್ಲಿ ಸವಾರರು ಮೇಲ್ಸೇತುವೆ ಕೆಳಗೆ ನಿಂತು ಮಳೆಯಿಂದ ರಕ್ಷಣೆ ಪಡೆದರೆ, ಅಲ್ಲಿಯೇ ಇದ್ದ ಬೃಹತ್ ಹೋರ್ಡಿಂಗ್ ನ ಜಾಹಿರಾತು ಪರದೆ ಪ್ರಬಲ ಗಾಳಿಗೆ ಸಿಲುಕಿ ಹರಿದು ಹೋಯಿತು.

ಹೆಬ್ಬಾಳದ ಬಿಇಎಲ್ ಸರ್ಕಲ್ ನ ಸುರಂಗ ಮಾರ್ಗದಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು. ಒಂದೆಡೆ ಜಲಾವೃತ್ತಗೊಂಡ ರಸ್ತೆಗಳಿಂದ ಸವಾರರು ಅವಸ್ಥೆ ಪಟ್ಟರೆ ಮತ್ತೊಂದೆಡೆ ರಸ್ತೆಗುಂಡಿಗಳು ವಾಹನ ಸವಾರರಿಗೆ ಮತ್ತೊಂದಷ್ಟು ಸವಾಲೆಸೆಯ ತೊಡಗಿವೆ.

ಮಳೆ ನೀರು ನಿಂತು ರಸ್ತೆಗುಂಡಿ ಕಾಣದೇ ವಾಹನ ಸವಾರರು ಜೀವ ಪಣಕ್ಕಿಟ್ಟು ವಾಹನ ಚಲಾಯಿಸಬೇಕಿದೆ. ಮಾರತ್ ಹಳ್ಳಿ ಜಂಕ್ಷನ್ ನಲ್ಲಿ ಸವಾರರು ನೀರಿನಲ್ಲಿ ಮುಳುಗಿದ ರಸ್ತೆ ಗುಂಡಿ ದಾಟಲು ಹರಸಾಹಸವನ್ನೇ ಪಟ್ಟ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇನ್ನು ಸರ್ಜಾಪುರದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಇಡೀ ಪ್ರದೇಶ ನದಿಯಂತಾಗಿದೆ.

ಇತ್ತ ಭಾರಿ ಮಳೆಯಿಂದಾಗಿ ಯಲಚೇನಹಳ್ಳಿಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ನೀರಿನ ರಭಸಕ್ಕೆ ವಾಹನಗಳೇ ಕೊಚ್ಚಿ ಹೋಗುತ್ತಿವೆ. ಸ್ಥಳೀಯ ನಿವಾಸಿಗಳು ಇಂದು ಬೀದಿಗಿಳಿದು ಬಿಬಿಎಂಪಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಕಳೆದ 12 ವರ್ಷಗಳಿಂದ ಈ ಪ್ರದೇಶದಲ್ಲಿ ಇದೇ ಪರಿಸ್ಥಿತಿ ಇದ್ದು ಕೂಡಲೇ ಅಧಿಕಾರಿಗಳು ಬಂದು ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸುತ್ತಿದ್ದಾರೆ.

ಕೋಣನಕುಂಟೆಯಲ್ಲಿ ಆಲಿಕಲ್ಲು ಮಳೆ

ಇತ್ತ ಕೋಣನಕುಂಟೆ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಆಲಿಕಲ್ಲು ಸಹಿತ ಮಳೆಯಾಗಿದೆ. ಸ್ಥಳೀಯರು ಮಳೆ ನೀರಿನಲ್ಲಿ ಆಲಿಕಲ್ಲುಗಳನ್ನು ಹೆಕ್ಕುತ್ತಿರುವ ವಿಡಿಯೋ ಹರಿದಾಡುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT