ರಸ್ತೆ ಗುಂಡಿ 
ರಾಜ್ಯ

ಬೆಂಗಳೂರು: 5000 ರಸ್ತೆ ಗುಂಡಿಗಳ ಪೈಕಿ 3,225 ಗುಂಡಿಗಳನ್ನು ಮುಚ್ಚಲಾಗಿದೆ: ತುಷಾರ್ ಗಿರಿನಾಥ್

ನಗರದಲ್ಲಿ ಕಳೆದ ವಾರ 5,000 ರಸ್ತೆ ಗುಂಡಿಗಳು ಪತ್ತೆಯಾಗಿದ್ದು, ಈ ಪೈಕಿ 3,225 ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಬಿಬಿಎಂಪಿ ಶನಿವಾರ ಹೇಳಿದೆ.

ಬೆಂಗಳೂರು: ನಗರದಲ್ಲಿ ಕಳೆದ ವಾರ 5,000 ರಸ್ತೆ ಗುಂಡಿಗಳು ಪತ್ತೆಯಾಗಿದ್ದು, ಈ ಪೈಕಿ 3,225 ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಬಿಬಿಎಂಪಿ ಶನಿವಾರ ಹೇಳಿದೆ.

ಸುದ್ದಿಗಾರರೊಂದಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಈ ವಾರವೂ 1,500 ಗುಂಡಿಗಳನ್ನು ಗುರುತಿಸಲಾಗಿದ್ದು, ಎಲ್ಲಾ ರಸ್ತೆಗಳನ್ನು ತುಂಬಲು ಮೇ,31ರಂದು ಗಡುವು ನೀಡಲಾಗಿದೆ ಎಂದು ಹೇಳಿದರು.

ಆರ್.ಆರ್.ನಗರ ಹಾಗೂ ದಾಸರಹಳ್ಳಿ ವಲಯಗಳಲ್ಲಿ ಗುಂಡಿ ತುಂಬಲು ಜೂನ್ 4ಕ್ಕೆ ಗಡುವು ನೀಡಲಾಗಿದೆ. ಈ ಎರಡು ವಲಯಗಳಲ್ಲಿ ಬರೋಬ್ಬರಿ 2,480 ಹಾಗೂ 1,500 ಹೊಸ ಗುಂಡಿಗಳಿದ್ದು, ಪಾಲಿಕೆಯಲ್ಲಿ 3,500 ಗುಂಡಿಗಳು ತುಂಬಬೇಕಿದೆ ಎಂದು ತಿಳಿಸಿದರು.

ಮಳೆಗಾಲ ಆರಂಭಕ್ಕೂ ಮುನ್ನವೇ ನಗರದ ರಸ್ತೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸುವಂತೆ ನೋಡಿಕೊಳ್ಳಬೇಕು. ಗುಂಡಿಗಳು ಕಂಡು ಬಂದ ಕೂಡಲೇ ಅವುಗಳನ್ನು ಸರಿಪಡಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ಇತ್ತೀಚೆಗಷ್ಟೇ ಪಾಲಿಕೆಗೆ ಸೂಚಿಸಿದ್ದರು.

ಈ ನಡುವೆ ನಗರದಲ್ಲಿ ಗುಂಡಿಗಳನ್ನು ತುಂಬಿಸಲು ಹಾಗೂ ಹಾಳಾದ ರಸ್ತೆಗಳನ್ನು ಸರಿಪಡಿಸಲು ಪಾಲಿಕೆಗೆ 1000 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಸ್ಥಳೀಯ ಬಿಜೆಪಿ ಮುಖಂಡರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT