ಸಂಗ್ರಹ ಚಿತ್ರ 
ರಾಜ್ಯ

ಬೇಗೂರು: 16 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಆರೋಪಿ ಬಂಧನ

ಕಸ ವಿಂಗಡಣೆ ಗುತ್ತಿಗೆದಾರನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಬಂಧಿಸಿದಂತೆ ಆರೋಪಿಯನ್ನು ಬೇಗೂರು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಕಸ ವಿಂಗಡಣೆ ಗುತ್ತಿಗೆದಾರನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಬಂಂಧಿಸಿದಂತೆ ಆರೋಪಿಯನ್ನು ಬೇಗೂರು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ಪ್ರಜೆ ಶಾಹೀನ್ ಶೇಖ್ ಎಂಬಾತನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ಬಾಲಕಿಯ ತಂದೆ ನೀಡಿದ್ದ ದೂರಿನ ಆಧಾರದ ಮೇಲೆ ಪಶ್ಚಿಮ ಬಂಗಾಳದ ನೊಯ್ಡಾ ಜಿಲ್ಲೆಯ ನಿವಾಸಿಯಾದ ಶಹೀನ್ ಹಾಗೂ ಆತನ ಪತ್ನಿ ಮೀಮ್ ರನ್ನು ಬಂಧಿಸಲಾಗಿದೆ.

ಮೇ.17ರ ರಾತ್ರಿ ಶಹೀನ್ ಪತ್ನಿ ಮೀಮ್ ಮಧ್ಯರಾತ್ರಿ 12.30ರ ಸುಮಾರಿಗೆ ಸಂತ್ರಸ್ಥ ಬಾಲಕಿಗೆ ಟೀ ಮಾಡುವಂತೆ ತಿಳಿಸಿ, ಬಾಲಕಿ ಶೆಡ್ ಒಳಗೆ ಹೋದಾಗ ಉದ್ದೇಶಪೂರ್ವಕವಾಗಿ ಬಾಗಿಲು ಲಾಕ್ ಮಾಡಿದ್ದಳು. ಈ ವೇಳೆ ಶಹೀನ್ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ ಎಂದು ಮರುದಿನ ಪುತ್ರಿ ನಮಗೆ ಈ ಬಗ್ಗೆ ತಿಳಿಸಿದ್ದಳು ಎಂದು ಬಾಲಕಿಯ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆು.

ಪ್ರಕರಣ ಸಂಬಂಧ ಶಾಹೀನ್ ಹಾಗೂ ಆತನ ಪತ್ನಿಯನ್ನು ಶನಿವಾರ ಬಂಧನಕ್ಕೊಳಪಡಿಸಲಾಗಿದ್ದು. ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿ, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT