ತರಬೇತಿ ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ. 
ರಾಜ್ಯ

3 ಹೊಸ ಕಾನೂನು: ಎರಡು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ 550 ಪೊಲೀಸರು ಭಾಗಿ!

ರಾಮಯ್ಯ ಕಾನೂನು ಕಾಲೇಜು ಮತ್ತು ಜಸ್ಟೀಸ್‌ ಇ.ಎಸ್‌.ವೆಂಕಟರಾಮಯ್ಯ ಗ್ಲೋಬಲ್‌ ಲೀಗಲ್‌ ಸ್ಕಿಲ್ಸ್‌ ಅಕಾಡೆಮಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘3 ಹೊಸ ಕ್ರಿಮಿನಲ್‌ ಕಾನೂನುಗಳ’ ಕುರಿತು ಪೊಲೀಸರಿಗೆ ತರಬೇತಿ ನೀಡಲಾಯಿತು.

ಬೆಂಗಳೂರು: ರಾಮಯ್ಯ ಕಾನೂನು ಕಾಲೇಜು ಮತ್ತು ಜಸ್ಟೀಸ್‌ ಇ.ಎಸ್‌.ವೆಂಕಟರಾಮಯ್ಯ ಗ್ಲೋಬಲ್‌ ಲೀಗಲ್‌ ಸ್ಕಿಲ್ಸ್‌ ಅಕಾಡೆಮಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘3 ಹೊಸ ಕ್ರಿಮಿನಲ್‌ ಕಾನೂನುಗಳ’ ಕುರಿತು ಪೊಲೀಸರಿಗೆ ತರಬೇತಿ ನೀಡಲಾಯಿತು.

ಪ್ರಸ್ತುತ ಸಂದರ್ಭಗಳಿಗೆ ತಕ್ಕಂತೆ ಸರ್ವರಿಗೂ ನ್ಯಾಯ ಒದಗಿಸಲು ಕೇಂದ್ರ ಸರ್ಕಾರ ಮೂರು ಹೊಸ ಕಾನೂನು ರೂಪಿಸಿದ್ದು, ಇವುಗಳು ಜುಲೈ 1ರಿಂದ ದೇಶದಾದ್ಯಂತ ಜಾರಿಗೆ ಬರಲಿವೆ.

ಈ ಹಿನ್ನೆಲೆಯಲ್ಲಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ತರಬೇತಿ ಶಿಬಿರದಲ್ಲಿ 550ಕ್ಕೂ ಹೆಚ್ಚು ಪೊಲೀಸರು ಭಾಗಿಯಾಗಿದ್ದು, ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಈಶ್ವರ್‌ ಎಸ್.ಅಂಟಿನ್, ಎಸ್‌ಬಿಎನ್‌ ಪ್ರಕಾಶ್, ಡಿ.ಆರ್. ವೆಂಕಟ ಸುದರ್ಶನ್ ಅವರು ಮೂರು ಹೊಸ ಕಾನೂನುಗಳ ಬಗ್ಗೆ ಉಪನ್ಯಾಸ ನೀಡಿದರು.

‘ಭಾರತೀಯ ದಂಡ ಸಂಹಿತೆ (ಐಪಿಸಿ) ಬದಲು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಜಾರಿಯಾಗುತ್ತಿದೆ. ಜೊತೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯೂ ಜಾರಿಗೆ ಬರಲಿದೆ’ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT