ತರಬೇತಿ ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ. 
ರಾಜ್ಯ

3 ಹೊಸ ಕಾನೂನು: ಎರಡು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ 550 ಪೊಲೀಸರು ಭಾಗಿ!

ರಾಮಯ್ಯ ಕಾನೂನು ಕಾಲೇಜು ಮತ್ತು ಜಸ್ಟೀಸ್‌ ಇ.ಎಸ್‌.ವೆಂಕಟರಾಮಯ್ಯ ಗ್ಲೋಬಲ್‌ ಲೀಗಲ್‌ ಸ್ಕಿಲ್ಸ್‌ ಅಕಾಡೆಮಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘3 ಹೊಸ ಕ್ರಿಮಿನಲ್‌ ಕಾನೂನುಗಳ’ ಕುರಿತು ಪೊಲೀಸರಿಗೆ ತರಬೇತಿ ನೀಡಲಾಯಿತು.

ಬೆಂಗಳೂರು: ರಾಮಯ್ಯ ಕಾನೂನು ಕಾಲೇಜು ಮತ್ತು ಜಸ್ಟೀಸ್‌ ಇ.ಎಸ್‌.ವೆಂಕಟರಾಮಯ್ಯ ಗ್ಲೋಬಲ್‌ ಲೀಗಲ್‌ ಸ್ಕಿಲ್ಸ್‌ ಅಕಾಡೆಮಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘3 ಹೊಸ ಕ್ರಿಮಿನಲ್‌ ಕಾನೂನುಗಳ’ ಕುರಿತು ಪೊಲೀಸರಿಗೆ ತರಬೇತಿ ನೀಡಲಾಯಿತು.

ಪ್ರಸ್ತುತ ಸಂದರ್ಭಗಳಿಗೆ ತಕ್ಕಂತೆ ಸರ್ವರಿಗೂ ನ್ಯಾಯ ಒದಗಿಸಲು ಕೇಂದ್ರ ಸರ್ಕಾರ ಮೂರು ಹೊಸ ಕಾನೂನು ರೂಪಿಸಿದ್ದು, ಇವುಗಳು ಜುಲೈ 1ರಿಂದ ದೇಶದಾದ್ಯಂತ ಜಾರಿಗೆ ಬರಲಿವೆ.

ಈ ಹಿನ್ನೆಲೆಯಲ್ಲಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ತರಬೇತಿ ಶಿಬಿರದಲ್ಲಿ 550ಕ್ಕೂ ಹೆಚ್ಚು ಪೊಲೀಸರು ಭಾಗಿಯಾಗಿದ್ದು, ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಈಶ್ವರ್‌ ಎಸ್.ಅಂಟಿನ್, ಎಸ್‌ಬಿಎನ್‌ ಪ್ರಕಾಶ್, ಡಿ.ಆರ್. ವೆಂಕಟ ಸುದರ್ಶನ್ ಅವರು ಮೂರು ಹೊಸ ಕಾನೂನುಗಳ ಬಗ್ಗೆ ಉಪನ್ಯಾಸ ನೀಡಿದರು.

‘ಭಾರತೀಯ ದಂಡ ಸಂಹಿತೆ (ಐಪಿಸಿ) ಬದಲು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಜಾರಿಯಾಗುತ್ತಿದೆ. ಜೊತೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯೂ ಜಾರಿಗೆ ಬರಲಿದೆ’ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT