ಮತ ಎಣಿಕೆ ಕೇಂದ್ರ ಪರಿಶೀಲಿಸುತ್ತಿರುವ ತುಷಾರ್ ಗಿರಿನಾಥ್ 
ರಾಜ್ಯ

ಲೋಕಸಭೆ ಚುನಾವಣೆ: ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ; ಬೆಂಗಳೂರಿನ ಮೂರು ಕೇಂದ್ರಗಳು ಸಜ್ಜು!

ಮಂಗಳವಾರ ಲೋಕಸಭೆ ಚುನಾವಣೆಯ ಮತ ಎಣಿಕೆಗೆ ಸಕಲ ಸಿದ್ಧತೆ ನಡೆದಿದೆ. ಬೆಳಗ್ಗೆ 7.45ಕ್ಕೆ ಸ್ಟ್ರಾಂಗ್‌ರೂಂ ತೆರೆಯಲಿದ್ದು, 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ.

ಬೆಂಗಳೂರು: ಮಂಗಳವಾರ ಲೋಕಸಭೆ ಚುನಾವಣೆಯ ಮತ ಎಣಿಕೆಗೆ ಸಕಲ ಸಿದ್ಧತೆ ನಡೆದಿದೆ. ಬೆಳಗ್ಗೆ 7.45ಕ್ಕೆ ಸ್ಟ್ರಾಂಗ್‌ರೂಂ ತೆರೆಯಲಿದ್ದು, 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ.

ಮೊದಲು ಅಂಚೆ ಮತಗಳ ಎಣಿಕೆ ಆರಂಭವಾಗಲಿದ್ದು, ನಂತರದಲ್ಲಿ ಇವಿಎಂ ಮತಗಳ ಎಣಿಗೆ ಆರಂಭವಾಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ತಮ್ಮ ಅಧೀನದಲ್ಲಿರುವ ಮೂರು ಮತ ಎಣಿಕೆ ಕೇಂದ್ರಗಳನ್ನು ಪರಿಶೀಲಿಸಿದ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕ್ರಮವಾಗಿ ಮಲ್ಯ ರಸ್ತೆ ಸೇಂಟ್‌ ಜೋಸೆಫ್ ಕಾಲೇಜು, ಜಯನಗರದ ಎಸ್.ಎಸ್.ಎಂ.ಆರ್.ವಿ ಕಾಲೇಜು, ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜುಗಳಲ್ಲಿ ಎಣಿಕೆ ಕಾರ್ಯ ನಡೆಯಲಿದೆ. ಅಭ್ಯರ್ಥಿಗಳ ಏಜೆಂಟರು ಬೆಳಗ್ಗೆ 6ಗಂಟೆಯೊಳಗೆ ಮತ ಎಣಿಕೆ ಕೇಂದ್ರಕ್ಕೆ ಬರುವಂತೆ ಸೂಚಿಸಲಾಗಿದೆ.

ಬೆಳಿಗ್ಗೆ 8ಕ್ಕೆ ಮತ ಎಣಿಕೆ ಆರಂಭಗೊಳ್ಳಲಿದೆ. ಪ್ರತಿ ಟೇಬಲ್‌ಗೆ ಸೂಕ್ಷ್ಮ ವೀಕ್ಷಕ, ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರನ್ನು ನಿಯೋಜನೆ ಮಾಡಲಾಗಿದೆ. ಒಂದು ಕೊಠಡಿಯಲ್ಲಿ 14 ಟೇಬಲ್‌ಗಳನ್ನು ಹಾಕಲು ಅವಕಾಶವಿದ್ದು, ದೊಡ್ಡ ಕೊಠಡಿಗಳಿದ್ದರೆ ಹೆಚ್ಚಿನ ಟೇಬಲ್‌ಗಳನ್ನು ಹಾಕಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ಸುದ್ದಿಗಾರರಿಗೆ ಭಾನುವಾರ ಮಾಹಿತಿ ನೀಡಿದರು.

ಮೂರು ಲೋಕಸಭಾ ಕ್ಷೇತ್ರಗಳು - ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಮತ್ತು ಬೆಂಗಳೂರು ಸೆಂಟ್ರಲ್ - ಬಿಬಿಎಂಪಿ ಅಧಿಕಾರ ವ್ಯಾಪ್ತಿಗೆ ಬರುತ್ತವೆ. ಬಿಬಿಎಂಪಿ ವ್ಯಾಪ್ತಿಗೆ ಬರುವ ಮೂರು ವಿಧಾನಸಭೆ ಕ್ಷೇತ್ರಗಳು ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಗೆ ಬರುತ್ತವೆ ಎಂದು ಗಿರಿನಾಥ್ ಹೇಳಿದರು. ಎಣಿಕೆ ಸಿಬ್ಬಂದಿ ಮಂಗಳವಾರ ಬೆಳಗ್ಗೆ ಕೇಂದ್ರ ತಲುಪುವವರೆಗೆ ಯಾವ ಟೇಬಲ್‌ಗೆ ನಿಯೋಜಿಸಲಾಗುತ್ತದೆ ಎಂಬುದು ತಿಳಿದಿಲ್ಲ ಎಂದು ಅವರು ಹೇಳಿದರು. ಗುರುತಿನ ಚೀಟಿ ನೀಡಿದವರಿಗೆ ಮಾತ್ರ ಮತ ಎಣಿಕೆ ಕೇಂದ್ರದ ಒಳಗೆ ಬಿಡಲಾಗುವುದು. ಒಂದು ಕೊಠಡಿಯಲ್ಲಿ 14 ಟೇಬಲ್‌ಗಳಿದ್ದು, ಕೊಠಡಿಗಳು ಸಾಕಷ್ಟು ದೊಡ್ಡದಿದ್ದರೆ, ಹೆಚ್ಚಿನ ಟೇಬಲ್‌ಗಳನ್ನು ಇರಿಸಲಾಗುತ್ತದೆ ಎಂದು ವಿವರಿಸಿದ್ದಾರೆ.

ಚುನಾವಣಾ ವೀಕ್ಷಕರು ಹಾಗೂ ಚುನಾವಣಾಧಿಕಾರಿಗಳಿಗೆ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಕೇಂದ್ರದ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಚುನಾವಣಾಧಿಕಾರಿಗಳು ತಮ್ಮ ಇಚ್ಛೆಯಂತೆ ಸಿಸಿಟಿವಿಗಳನ್ನು ಅಳವಡಿಸಿಕೊಳ್ಳಬಹುದು ಮತ್ತು ಎಣಿಕೆಯನ್ನು ವೀಡಿಯೊಗ್ರಾಫ್ ಮಾಡಬಹುದು ಎಂದು ಗಿರಿನಾಥ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರ