ಡಿಕೆ ಶಿವಕುಮಾರ್ PTI
ರಾಜ್ಯ

ಬೆಂಗಳೂರು ದಾಖಲೆಯ ಮಳೆಗೆ ಎಚ್ಚೆತ್ತ ಡಿಸಿಎಂ: ಅಧಿಕಾರಿಗಳ ಜೊತೆ ಸಭೆ; ಸಮಸ್ಯೆ ಆದ್ರೆ 15533 ಗೆ ಕರೆ ಮಾಡಿ!

ನಿನ್ನೆ ಬೆಂಗಳೂರಿನಲ್ಲಿ ದಾಖಲೆಯ ಮಳೆಗೆ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂದಿನ ದಿನಗಳಲ್ಲೂ ಮತ್ತಷ್ಟು ಮಳೆ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ನಿನ್ನೆ ಬೆಂಗಳೂರಿನಲ್ಲಿ ದಾಖಲೆಯ ಮಳೆಗೆ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂದಿನ ದಿನಗಳಲ್ಲೂ ಮತ್ತಷ್ಟು ಮಳೆ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದರಿಂದ ಎಚ್ಚೆತ್ತಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಬಿಎಂಪಿ, ಬಿಡ್ಲ್ಯೂಎಸ್​ಎಸ್​ಬಿ, ಅಗ್ನಿ ಶಾಮಕ ಅಧಿಕಾರಿಗಳ ಜೊತೆ ಇಂದು ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಪ್ರತಿ ವಾರ್ಡ್​ಗಳಲ್ಲೂ ಮಳೆ ನೀರು ಹೋಗಲು ವ್ಯವಸ್ಥೆ, ಬಿದ್ದ ಮರಗಳ ತೆರವು ಸೇರಿದಂತೆ ಇನ್ನಿತರ ಬಗ್ಗೆ ಚರ್ಚೆ ನಡೆಸಿದರು. ಅಲ್ಲದೇ ಮಳೆ ಹಾನಿ ಕುರಿತಂತೆ 24 ಗಂಟೆಯೂ ಕಾರ್ಯನಿರ್ವಹಿಸಿಸುವ ಕಂಟ್ರೋಲ್​ ರೂಂ ಕನೆಕ್ಷನ್​ ತಮ್ಮ ಮನೆಗೂ ನೀಡುವಂತೆ ಸೂಚಿಸಿದ್ದಾರೆ. ಈ ಮೂಲಕ ಮನೆಯಿಂದಲೇ ಕಂಟ್ರೋಲ್ ರೂಂ ಮಾನಿಟರ್ ಮಾಡಲು ಡಿಕೆ ಶಿವಕುಮಾರ್ ಮುಂದಾಗಿದ್ದಾರೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಿನ್ನೆ ಬೆಂಗಳೂರಿನಲ್ಲಿ ದಾಖಲೆಯ ಮಳೆಯಾಗಿದೆ. ಆದರೆ ಯಾರಿಗೂ ತೊಂದರೆ ಆಗಿಲ್ಲ, ಮೂವರಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿದೆ. ಇನ್ನು ಬೆಂಗಳೂರಿನಲ್ಲಿ ನಿನ್ನೆ 265 ಮರಗಳು ಬಿದ್ದಿದ್ದು 95 ಮರಗಳನ್ನು ತೆರವು ಮಾಡಬೇಕಿದೆ. ಬೆಂಗಳೂರು ನಗರದಲ್ಲಿ ಮಳೆಗೆ 261 ವಿದ್ಯುತ್ ಕಂಬಗಳು ಬಿದ್ದಿವೆ. ಅಲ್ಲದೆ ಕೆಲವು ಹಳೇ ಮನೆಗಳು ಕುಸಿದಿವೆ. ಸಮಸ್ಯೆ ಇದ್ದರೆ ಸಾರ್ವಜನಿಕರು 15533ಗೆ ಕರೆ ಮಾಡಿ‌ ದೂರು ನೀಡಬಹುದು. ಇನ್ನು ಮಳೆ ಅವಾಂತರ ಕುರಿತಂತೆ ನಿನ್ನೆ ಬೆಂಗಳೂರಿನಲ್ಲಿ 694 ಕರೆಗಳು ಬಂದಿದ್ದು ಈ ಪೈಕಿ 500 ದೂರುಗಳನ್ನು ಸ್ವೀಕರಿಸಲಾಗಿದೆ ಎಂದರು.

"ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಎಲ್ಲರೂ ತಂಡವಾಗಿ ಕೆಲಸ ಮಾಡಬೇಕು ಎಂದು ನಾನು ನಿರ್ದೇಶನ ನೀಡಿದ್ದೇನೆ" ಎಂದು ಡಿಸಿಎಂ ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್​ಗೆ 61 ರನ್ ಗಳ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT